Don't Miss!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದದ ಸುಳಿಯಲ್ಲಿ 'ತಾಯಿಗೆ ತಕ್ಕ ಮಗ' ಸಿನಿಮಾ
Recommended Video
'ತಾಯಿಗೆ ತಕ್ಕ ಮಗ' ಸಿನಿಮಾ ಹಲವಾರು ಕಾರಣಗಳಿಂದ ಸುದ್ದಿಯಲ್ಲಿದೆ. ಇತ್ತೀಚಿಗಷ್ಟೆ ಬಿಡುಗಡೆ ಆದ ಸಿನಿಮಾ ಟ್ರೇಲರ್ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅಜಯ್ ರಾವ್ ಹಾಗೂ ಸುಮಲತಾ ಡಿಫ್ರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶಶಾಂಕ್ ಮತ್ತೊಂದು ನೈಜ ಘಟನೆಯನ್ನು 'ತಾಯಿಗೆ ತಕ್ಕ ಮಗ' ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ತರಲಿದ್ದಾರೆ.
ಟೈಟಲ್ ನಿಂದ ಸುದ್ದಿ ಮಾಡಿದ್ದ 'ತಾಯಿಗೆ ತಕ್ಕ ಮಗ' ಚಿತ್ರ ಈಗ ವಿವಾದದಲ್ಲಿ ಸಿಲುಕಿಕೊಂಡಿದೆ. ಹೌದು ಚಿತ್ರದಲ್ಲಿರುವ ನಾಯಕ ಪಾತ್ರದ ಹೆಸರನ್ನು ಬದಲಾಯಿಸುವುದು ಉತ್ತಮ ಎಂದು ನಿರ್ದೇಶಕರಿಗೆ ಚಿತ್ರರಂಗದ ಅನೇಕರು ಸಲಹೆ ನೀಡುತ್ತಿದ್ದಾರಂತೆ.
ಶೂಟಿಂಗ್ ಮುಗಿಸಿದ 'ತಾಯಿಗೆ ತಕ್ಕ ಮಗ'
'ತಾಯಿಗೆ ತಕ್ಕ ಮಗ' ಚಿತ್ರದಲ್ಲಿ ನಾಯಕನ ಪಾತ್ರಕ್ಕೆ ಮೋಹನ್ ದಾಸ್ ಎಂದು ಹೆಸರಿಡಲಾಗಿದೆ. ಗಾಂಧಿ ಅವರ ಹೆಸರು ಮೋಹನದಾಸ್, ಗಾಂಧಿ ಶಾಂತಿ ಪ್ರಿಯರು ಆದರೆ 'ತಾಯಿಗೆ ತಕ್ಕ ಮಗ' ಚಿತ್ರದಲ್ಲಿ ಅಜಯ್ ರಾವ್ ಮೋಹನ್ ದಾಸ್ ಅಂತ ಹೆಸರಿಟ್ಟುಕೊಂಡು ಗಲಾಟೆ, ಹೊಡೆದಾಟ ಮಾಡುತ್ತಾರೆ. ಆದ್ದರಿಂದ ಹೆಸರನ್ನು ಬದಲಾಯಿಸಿ ಎನ್ನುತ್ತಿದ್ದಾರೆ.
ಅದಷ್ಟೇ ಅಲ್ಲದೆ ಟ್ರೇಲರ್ ನಲ್ಲಿ "ಆ ಮೋಹನ್ ದಾಸ್ ಕೋಪಕ್ಕೆ ಕಾರಣ ಬ್ರಿಟಿಷರು, ಈ ಮೋಹನ್ ದಾಸ್ ಕೋಪಕ್ಕೆ ಕಾರಣ ಖೇಣಿ ಅಂತ ಕೆಟ್ಟವರು" ಎಂದು ಅಜಯ್ ರಾವ್ ಡೈಲಾಗ್ ಹೊಡೆದಿದ್ದಾರೆ. ಒಟ್ಟಾರೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಸಿನಿಮಾ ಟ್ರೇಲರ್ ಈಗ ವಿವಾದಕ್ಕೆ ಕಾರಣವಾಗಿರುವುದಂತು ಸತ್ಯ.