Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಿತ್ ಶೆಟ್ಟಿ ಜನ್ಮದಿನಕ್ಕೆ 'ಚಾರ್ಲಿ' ನೀಡಲಿದೆ ವಿಶೇಷ ಉಡುಗೊರೆ
ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರ. ಪ್ರಯಾಣ ಮತ್ತು ಶ್ವಾನದ ಜತೆಗಿನ ಒಡೆನಾಟದ ಕಥೆ ಯಾವ ರೀತಿ ಪ್ರೇಕ್ಷಕರಿಗೆ ರಸದೌತಣ ನೀಡಲಿದೆ ಎನ್ನುವ ಕುತೂಹಲವಿದೆ. ಈ ನಡುವೆ ಚಾರ್ಲಿ ತಂಡ ಹೊಸ ಉಡುಗೊರೆಯೊಂದನ್ನು ನೀಡುತ್ತಿದೆ. ಈ ಉಡುಗೊರೆ ನೀಡುತ್ತಿರುವುದು ಜೂನ್ 6ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಾಯಕ ನಟ ರಕ್ಷಿತ್ ಶೆಟ್ಟಿ ಅವರಿಗೆ.
Recommended Video
ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿರುವ ನಿರ್ದೇಶಕ ಕಿರಣ್ ರಾಜ್ ಮತ್ತು ತಂಡ, ರಕ್ಷಿತ್ ಶೆಟ್ಟಿ ಜನ್ಮದಿನದಂದು ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಲಿದೆ. ಈ ವಿಡಿಯೋದಲ್ಲಿ ಚಿತ್ರದಲ್ಲಿನ ರಕ್ಷಿತ್ ಶೆಟ್ಟಿ ಅವರ ಪಾತ್ರ ರೂಪುಗೊಂಡ ಬಗೆ ಹಾಗೂ '777 ಚಾರ್ಲಿ' ಚಿತ್ರದ ಕೆಲವು ಸ್ವಾರಸ್ಯಕರ ತುಣುಕುಗಳು ಇರಲಿದೆಯಂತೆ.
ಕೊರೊನಾ ಕಾರಣದಿಂದ ವಿದೇಶಕ್ಕೆ ಹೋಗಲೇಬೇಕಾದ ಪರಿಸ್ಥಿತಿಯಲ್ಲಿ ರಕ್ಷಿತ್ ಶೆಟ್ಟಿ
ಲೈಫ್ ಆಫ್ ಧರ್ಮ
ರಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ 'ಧರ್ಮ' ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಅವರೊಂದಿಗೆ ಪಯಣದಲ್ಲಿ ಜತೆಯಾಗಲಿರುವುದು ಆಕಸ್ಮಿಕವಾಗಿ ಮನೆಯಿಂದ ತಪ್ಪಿಸಿಕೊಂಡು ಬಂದ ಚಾರ್ಲಿ. ರಕ್ಷಿತ್ ಶೆಟ್ಟಿ ಅವರ ಜನ್ಮದಿನದ ಅಂಗವಾಗಿ ಶನಿವಾರ ಬೆಳಿಗ್ಗೆ 11.04ಕ್ಕೆ ಚಾರ್ಲಿ ತಂಡ 'ಲೈಫ್ ಆಫ್ ಧರ್ಮ' ವಿಡಿಯೋ ಬಿಡುಗಡೆ ಮಾಡಲಿದೆ.
ಪ್ಯಾನ್ ಇಂಡಿಯಾ ಚಿತ್ರ
ಪುಷ್ಕರ್ ಫಿಲಂಸ್ ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಹಾಗೂ ಜಿಎಸ್ ಗುಪ್ತಾ ಪರಮ್ವಾಹ್ ಬ್ಯಾನರ್ ಅಡಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. 'ಅವನೇ ಶ್ರೀಮನ್ನಾರಾಯಣ' ಚಿತ್ರದ ಬಳಿಕ ಇದು ರಕ್ಷಿತ್ ಶೆಟ್ಟಿ ಅವರ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರವಾಗಿರಲಿದೆ.
ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ 'ಚಾರ್ಲಿ' ಸಿನಿಮಾ
ನಾಲ್ಕು ಭಾಷೆಗಳಿಗೆ ಡಬ್
ಕನ್ನಡದಲ್ಲಿ ತಯಾರಾಗಲಿರುವ 777 ಚಾರ್ಲಿ, ಬಳಿಕ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಿಗೂ ಡಬ್ ಅಗಿ ತೆರೆಕಾಣಲಿದೆ. ರಾಜ್ ಬಿ. ಶೆಟ್ಟಿ ಮತ್ತು ಸಂಗೀತಾ ಶೃಂಗೇರಿ ಕೂಡ ಈ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನೊಬಿನ್ ಪಾಲ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ನೀಡಿದ್ದಾರೆ.
ಕಾತರದಿಂದ ಕಾಯುತ್ತಿದ್ದೇನೆ
ತಮ್ಮ ಜನ್ಮದಿನಕ್ಕೆ ವಿಶೇಷವೊಂದು ಸಿಗಲಿದೆ ಎನ್ನುವುದು ರಕ್ಷಿತ್ ಶೆಟ್ಟಿ ಅವರಿಗೂ ತಿಳಿದಿದೆ. 'ನನ್ನ ತಂಡ ಏನೋ ಮ್ಯಾಜಿಕಲ್ ಆಗಿರುವಂಥದ್ದನ್ನು ಸೃಷ್ಟಿಮಾಡಿದೆ ಎನ್ನುವುದು ನನಗೆ ಖಚಿತವಾಗಿ ಗೊತ್ತು. ಆದರೆ ಇದು ನನಗೂ ನಿಜಕ್ಕೂ ಸರ್ಪ್ರೈಸ್ ಆಗಿರಲಿದೆ. ಅದನ್ನು ನೋಡಲು ಕಾಯಲು ಕಷ್ಟವಾಗುತ್ತಿದೆ' ಎಂದು ಹೇಳಿದ್ದಾರೆ.
'ಸಪ್ತಸಾಗರದಾಚೆ ಎಲ್ಲೋ' ಹೊರಟ ರಕ್ಷಿತ್ ಶೆಟ್ಟಿ ಮತ್ತು ಹೇಮಂತ್ ರಾವ್ ಹೊಸ ಸಿನಿಮಾ