Just In
- 1 hr ago
'ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'- ನಟ ದರ್ಶನ್
- 1 hr ago
ಕನ್ನಡದ ಮೊದಲ ವಾಕ್ಚಿತ್ರ 'ಸತಿ ಸುಲೋಚನ'ಕ್ಕೆ 88ನೇ ವರ್ಷದ ಸಂಭ್ರಮ
- 1 hr ago
ಬಾಲಿವುಡ್ ನಟಿ ತಾಪ್ಸಿ ಪನ್ನು ಮತ್ತು ಅನುರಾಗ್ ಕಶ್ಯಪ್ ಮನೆ ಮೇಲೆ ಐಟಿ ದಾಳಿ
- 1 hr ago
ಕನಸಿನ 'ಮಹಾಭಾರತ' ಚಿತ್ರದಿಂದ ಹಿಂದೆ ಸರಿದ ಆಮೀರ್: ವರ್ಷಗಳಿಂದ ಸಂಶೋಧನೆ ನಡೆಸಿ ಸಿನಿಮಾ ಕೈಬಿಟ್ಟಿದ್ದೇಕೆ?
Don't Miss!
- Sports
ಭಾರತದ ವಿರುದ್ಧದ ಸರಣಿಯಲ್ಲಿ ಆ ನಿರ್ಧಾರ ತೆಗೆದುಕೊಳ್ಳಬಾರದಿತ್ತು: ಡೇವಿಡ್ ವಾರ್ನರ್
- News
ಹಿರಿಯೂರು ಕ್ಷೇತ್ರದಿಂದ ಜನಾರ್ದನ ರೆಡ್ಡಿ ಚುನಾವಣೆಗೆ ಸ್ಪರ್ಧೆ?
- Automobiles
ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ
- Education
NDRI Recruitment 2021: ಎಕ್ಸಿಕ್ಯುಟಿವ್ ಮತ್ತು ಸಿಇಓ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
Wome's Day Special: ಮಿಶೆಲ್ ಒಬಾಮ ಹೇಳಿದ ಈ 7 ವಿಷಯ ಪಾಲಿಸಿದರೆ ಆ ಮಹಿಳೆಗೆ ಸಕ್ಸಸ್ ಗ್ಯಾರಂಟಿ
- Finance
ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 03ರ ಪೆಟ್ರೋಲ್, ಡೀಸೆಲ್ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಂಡು ಮೆಟ್ಟಿದ ನಾಡಲ್ಲಿ 'ರಾಬರ್ಟ್' ಅಬ್ಬರ: ಅದ್ದೂರಿ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ರಿಲೀಸ್ ಗೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದು, ಪ್ರಮೋಷನ್ ಚಟುವಟಿಗಳಲ್ಲಿ ಸಿನಿಮಾತಂಡ ಬ್ಯುಸಿಯಾಗಿದೆ.
ಇತ್ತೀಚಿಗಷ್ಟೆ ರಾಬರ್ಟ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ಮುನ್ನುಗ್ಗುತ್ತಿದೆ. ಇನ್ನು ಚಿತ್ರದಿಂದ ರಿಲೀಸ್ ಆಗಿರುವ ಹಾಡುಗಳು ಸಹ ಗಾನಪ್ರಿಯರ ಹೃದಯ ಗೆದ್ದಿವೆ. ಮೊನ್ನೆ ಮೊನ್ನೆಯಷ್ಟೆ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಇದೀಗ ಸಿನಿಮಾತಂಡ ಮತ್ತೊಂದು ಅದ್ದೂರಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಉತ್ತರ ಕರ್ನಾಟಕದ ಅಭಿಮಾನಿಗಳ ಮನಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
'ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ' ಅಂತಿದ್ದಾರೆ 'ರಾಬರ್ಟ್' ನಾಯಕಿ

ಹುಬ್ಬಳ್ಳಿಯಲ್ಲಿ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ
ಟ್ರೈಲರ್ ಮತ್ತು ಹಾಡುಗಳ ಮೂಲಕ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿರುವ ರಾಬರ್ಟ್ ಮಾರ್ಚ್ 11ಕ್ಕೆ ತೆರೆಗೆ ಬರುತ್ತಿದೆ. ರಿಲೀಸ್ ಮೊದಲು ಸಿನಿಮಾತಂಡ ಅದ್ದೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ಮಾಡಲು ಪ್ಲಾನ್ ಮಾಡಿದೆ. ವಿಶೇಷ ಎಂದರೆ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 28ಕ್ಕೆ ನಡೆಯಲಿದೆ ಕಾರ್ಯಕ್ರಮ
ಗಂಡು ಮೆಟ್ಟಿದ ನಾಡು ಹಬ್ಬಳ್ಳಿಯಲ್ಲಿ ಇದೆ ಫೆಬ್ರವರಿ 28ರಂದು ರಾಬರ್ಟ್ ಅದ್ದೂರಿ ಕಾರ್ಯಕ್ರಮ ನಡೆಯುತ್ತಿದೆ. ಇಡೀ ರಾಬರ್ಟ್ ತಂಡ ಹುಬ್ಬಳ್ಳಿಯಲ್ಲಿ ಬೀಡುಬಿಡಲಿದೆ. ಈಗಾಗಲೇ ಗ್ರ್ಯಾಂಡ್ ಈವೆಂಟ್ ಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಹುಬ್ಬಳ್ಳಿ ಮಂದಿ ದರ್ಶನ್ ಅವರನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ಗುಲ್ಬರ್ಗದಲ್ಲಿ ಮಾಡಲು ಪ್ಲಾನ್ ಮಾಡಲಾಗಿತ್ತು
ಅಂದಹಾಗೆ ಈ ಮೊದಲು ರಾಬರ್ಟ್ ಅದ್ದೂರಿ ಕಾರ್ಯಕ್ರಮವನ್ನು ಗುಲ್ಬರ್ಗದಲ್ಲಿ ನಡೆಸಲು ಸಿನಿಮಾತಂಡ ಪ್ಲಾನ್ ಮಾಡಿತ್ತು. ತಯಾರಿ ಕೂಡ ನಡೆದಿತ್ತು ಆದರೆ ಕೊರೊನಾ ಕಾರಣದಿಂದ ಪ್ಲಾನ್ ಅಲ್ಲಿಗೆ ನಿಂತುಹೋಗಿತ್ತು. ಇದೀಗ ಸಿನಿಮಾತಂಡ ಪ್ರಿ ರಿಲೀಸ್ ಈವೆಂಟ್ ಗೆ ಹುಬ್ಬಳ್ಳಿ ಆಯ್ಕೆ ಮಾಡಿಕೊಂಡಿದೆ. ಇನ್ನು ವಿಶೇಷ ಎಂದರೆ ಈ ಅದ್ದೂರಿ ವೇದಿಕೆಯಲ್ಲಿ ರಾಬರ್ಟ್ ಸಿನಿಮಾದ ಹಾಡನ್ನು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ತೆಲುಗಿನಲ್ಲೂ ಅದ್ದೂರಿಯಾಗಿ ತೆರೆಗೆ ಬರುತ್ತಿದೆ ರಾಬರ್ಟ್
ರಾಬರ್ಟ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ರಾಬರ್ಟ್ ಸಿನಿಮಾವನ್ನು ತೆಲುಗು ಪ್ರೇಕ್ಷಕರು ಹೇಗೆ ಸ್ವೀಕರಿಸಲಿದ್ದಾರೆ ಎನ್ನುವುದು ಸದ್ಯದ ಕುತೂಹಲ. ಅಂದಹಾಗೆ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ನಟ ವಿನೋದ್ ಪ್ರಭಾಕರ್ ವಿಭಿನ್ನ ಪಾತ್ರದಲ್ಲಿ ಮಿಂಚಿದ್ದಾರೆ. ರಾಬರ್ಟ್ ಉಮಾಪತಿ ನಿರ್ಮಾಣದಲ್ಲಿ ಮೂಡಿಬಂದಿದೆ.