Don't Miss!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಸಾರ ಭಾರತಿಯಿಂದ ಶೀಘ್ರದಲ್ಲಿ ಶಿಕ್ಷಣ-ರಂಜನೆ ಬೆರೆತ ಎಜುಟೈನ್ಮೆಂಟ್
ಬೆಂಗಳೂರು: ಮನರಂಜನೆಯ ಹೆಸರಿನಲ್ಲಿ ಮೂರ್ಖತನದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿರುವ ದೇಶದ ಖಾಸಗಿ ಚಾನಲ್ಗಳನ್ನು ಪ್ರಸಾರ ಭಾರತಿ ಅಧ್ಯಕ್ಷ ಹಾಗೂ ಇಸ್ರೋದ ಮಾಜಿ ಅಧ್ಯಕ್ಷ ಪ್ರೊ. ಯು.ಆರ್. ರಾವ್ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಕೇಂದ್ರವಾಗುಳ್ಳ ಶೈಕ್ಷಣಿಕ ಕಾರ್ಯಕ್ರಮಗಳನ್ನು ಭಾರತದ ಯಾವುದೇ ಖಾಸಗಿ ಚಾನಲ್ ಪ್ರಸಾರ ಮಾಡುತ್ತಿಲ್ಲ . ಈ ಖಾಸಗಿ ವಾಹಿನಿಗಳು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಲು ಆಕಾಶವಾಣಿ ಹಾಗೂ ದೂರದರ್ಶನದ ಮೂಲಭೂತ ಸೌಕರ್ಯಗಳನ್ನು ಬಳಸಿಕೊಳ್ಳಬೇಕು ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೊ. ರಾವ್ ಕಿವಿಮಾತು ಹೇಳಿದರು.
ಶಿಕ್ಷಣ ಹಾಗೂ ಮನರಂಜನೆ ಬೆರೆತ ಎಜುಟೈನ್ಮೆಂಟ್(edutainment) ಎನ್ನುವ ಕಾರ್ಯಕ್ರಮವನ್ನು ಸದ್ಯದಲ್ಲಿಯೇ ರೂಪಿಸುವ ಉದ್ದೇಶವನ್ನು ಪ್ರಸಾರಭಾರತಿ ಹೊಂದಿದೆ. ಪ್ರಸಾರ ಭಾರತಿಯ ಆದಾಯ 450 ರಿಂದ 650 ಕೋಟಿ ರುಪಾಯಿಗೆ ಏರಿದೆ. ಸಾರ್ವಜನಿಕ ಹಣವನ್ನು ಪ್ರಸಾರ ಭಾರತಿ ಬೆಂಬಲಿಸುತ್ತದೆ ಎಂದು ಪ್ರೊ.ಯು.ಆರ್.ರಾವ್ ತಿಳಿಸಿದರು.
(ಪಿಟಿಐ)