Don't Miss!
- News ಒಂದಲ್ಲ.. ಎರಡಲ್ಲ.. 128 ಲಕ್ಷ ಕೋಟಿ ರೂಪಾಯಿ ಲಾಭ!
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರಿದ ನಟ ಮೋಹನ್ ಬಾಬು
ತೆಲುಗು ಖ್ಯಾತ ನಟ ಹಾಗೂ ರಾಜಕಾರಣಿ ಮೋಹನ್ ಬಾಬು ಇಂದು ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದಾರೆ.
ತೆಲುಗು ಸೂಪರ್ ಸ್ಟಾರ್ ಎನ್.ಟಿ.ಆರ್ ಸ್ಥಾಪಿಸಿದ್ದ ತೆಲುಗು ದೇಶಂ ಪಕ್ಷದಲ್ಲಿದ್ದ ನಟ ಮೋಹನ್ ಬಾಬು, ಎನ್.ಟಿ.ಆರ್ ಗೆ ಅತ್ಯಂತ ಆತ್ಮೀಯರಾಗಿದ್ದರು. ಟಿಡಿಪಿ ಪಕ್ಷದಲ್ಲಿ ಸ್ಪರ್ಧಿಸಿ ಎಂಪಿ ಕೂಡ ಆಗಿದ್ದರು. ಎನ್.ಟಿ.ಆರ್ ನಿಧನದ ಬಳಿಕ ತೆಲುಗು ದೇಶಂ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಂಡಿರಲಿಲ್ಲ.
ಸುಮಲತಾ ಪರ ಪ್ರಚಾರಕ್ಕಾಗಿ ಬರ್ತಾರಾ ಈ ನಾಲ್ಕು ಸೂಪರ್ ಸ್ಟಾರ್ಸ್?
ನಿಧಾನವಾಗಿ ಪಕ್ಷದಿಂದ ದೂರವಾಗಿದ್ದ ಮೋಹನ್ ಬಾಬು, ಈಗ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮೋಹನ್ ಬಾಬು ''ಜಗನ್ಮೋಹನ್ ರೆಡ್ಡಿ ತೆಲುಗು ಜನರಿಗೆ ಒಳ್ಳೆಯದು ಮಾಡಲಿದ್ದಾರೆ, ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗ್ತಾರೆ'' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇನ್ನು ರೆಬೆಲ್ ಸ್ಟಾರ್ ಅಂಬರೀಶ್ ಗೆ ಆಪ್ತ ಸ್ನೇಹಿತನಾಗಿದ್ದ ಮೋಹನ್ ಬಾಬು ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡಿರುವುದು ಕರ್ನಾಟಕದಲ್ಲೂ ಕುತೂಹಲ ಹೆಚ್ಚಿಸಿದೆ. ಯಾಕಂದ್ರೆ, ಅಂಬರೀಶ್ ಪತ್ನಿ ಸುಮಲತಾ ಮಂಡ್ಯ ಲೋಕಸಭೆ ಚುನಾವಣೆಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಸುಮಲತಾ ಪರವಾಗಿ ಮೋಹನ್ ಬಾಬು ಪ್ರಚಾರಕ್ಕೆ ಬರಬಹುದು ಎಂಬ ನಿರೀಕ್ಷೆ ಇದೆ.