Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರಿದ ನಟ ಮೋಹನ್ ಬಾಬು
ತೆಲುಗು ಖ್ಯಾತ ನಟ ಹಾಗೂ ರಾಜಕಾರಣಿ ಮೋಹನ್ ಬಾಬು ಇಂದು ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದಾರೆ.
ತೆಲುಗು ಸೂಪರ್ ಸ್ಟಾರ್ ಎನ್.ಟಿ.ಆರ್ ಸ್ಥಾಪಿಸಿದ್ದ ತೆಲುಗು ದೇಶಂ ಪಕ್ಷದಲ್ಲಿದ್ದ ನಟ ಮೋಹನ್ ಬಾಬು, ಎನ್.ಟಿ.ಆರ್ ಗೆ ಅತ್ಯಂತ ಆತ್ಮೀಯರಾಗಿದ್ದರು. ಟಿಡಿಪಿ ಪಕ್ಷದಲ್ಲಿ ಸ್ಪರ್ಧಿಸಿ ಎಂಪಿ ಕೂಡ ಆಗಿದ್ದರು. ಎನ್.ಟಿ.ಆರ್ ನಿಧನದ ಬಳಿಕ ತೆಲುಗು ದೇಶಂ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಂಡಿರಲಿಲ್ಲ.
ಸುಮಲತಾ ಪರ ಪ್ರಚಾರಕ್ಕಾಗಿ ಬರ್ತಾರಾ ಈ ನಾಲ್ಕು ಸೂಪರ್ ಸ್ಟಾರ್ಸ್?
ನಿಧಾನವಾಗಿ ಪಕ್ಷದಿಂದ ದೂರವಾಗಿದ್ದ ಮೋಹನ್ ಬಾಬು, ಈಗ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮೋಹನ್ ಬಾಬು ''ಜಗನ್ಮೋಹನ್ ರೆಡ್ಡಿ ತೆಲುಗು ಜನರಿಗೆ ಒಳ್ಳೆಯದು ಮಾಡಲಿದ್ದಾರೆ, ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗ್ತಾರೆ'' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇನ್ನು ರೆಬೆಲ್ ಸ್ಟಾರ್ ಅಂಬರೀಶ್ ಗೆ ಆಪ್ತ ಸ್ನೇಹಿತನಾಗಿದ್ದ ಮೋಹನ್ ಬಾಬು ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡಿರುವುದು ಕರ್ನಾಟಕದಲ್ಲೂ ಕುತೂಹಲ ಹೆಚ್ಚಿಸಿದೆ. ಯಾಕಂದ್ರೆ, ಅಂಬರೀಶ್ ಪತ್ನಿ ಸುಮಲತಾ ಮಂಡ್ಯ ಲೋಕಸಭೆ ಚುನಾವಣೆಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಸುಮಲತಾ ಪರವಾಗಿ ಮೋಹನ್ ಬಾಬು ಪ್ರಚಾರಕ್ಕೆ ಬರಬಹುದು ಎಂಬ ನಿರೀಕ್ಷೆ ಇದೆ.