Don't Miss!
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 'ಮಿಸ್ಸಿಂಗ್ ಬಾಯ್'ಗೆ ಸಾಥ್ ನೀಡಿದ ತೆಲುಗು ನಟ ನಾನಿ
ಸ್ಯಾಂಡಲ್ ವುಡ್ ನಲ್ಲಿ 'ಮಿಸ್ಸಿಂಗ್ ಬಾಯ್' ನ ಹುಡುಕಾಟ ಜೋರಾಗಿ ನಡೆಯುತ್ತಿದೆ. ಇತ್ತೀಚಿಗಷ್ಟೆ ಕಿಚ್ಚ ಸುದೀಪ್ 'ಮಿಸ್ಸಿಂಗ್ ಬಾಯ್' ಟೀಂ ಸೇರಿಕೊಂಡಿದ್ದರು. ಯಾರಿದು 'ಮಿಸ್ಸಿಂಗ್ ಬಾಯ್' ಅಂತ ನೀವು ಹುಡುಕಬೇಡಿ. ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಹೊಸ ಸಿನಿಮಾ.
ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ದವಾಗಿರುವ 'ಮಿಸ್ಸಿಂಗ್ ಬಾಯ್' ಚಿತ್ರದ ಆಡಿಯೋವನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿದ್ದರು. ವಿಭಿನ್ನ ಟ್ರೈಲರ್ ಮತ್ತು ಹಾಡುಗಳ ಮೂಲಕ 'ಮಿಸ್ಸಿಂಗ್ ಬಾಯ್' ಪ್ರೇಕ್ಷಕರನ್ನ ಸೆಳೆಯುತ್ತಿದೆ.
'ಮಿಸ್ಸಿಂಗ್ ಬಾಯ್'ನನ್ನು ಹುಡುಕಿ ಕೊಟ್ಟ ಕಿಚ್ಚ ಸುದೀಪ್
ಮಿಸ್ಸಿಂಗ್ ಬಾಯ್' ನ ಹುಡುಕಾಟ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲ, ಪಕ್ಕದ ತೆಲುಗಿನಲ್ಲೂ ಜೋರಾಗಿದೆ. ಹೌದು, ತೆಲುಗು ನಟ ನಾನಿ 'ಮಿಸ್ಸಿಂಗ್ ಬಾಯ್' ಚಿತ್ರದ ಟ್ರೈಲರ್ ನೋಡಿ ಇಂಪ್ರೆಸ್ ಆಗಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
"ಪ್ರೀತಿಯ ಪಮ್ಮಿ (ನಿರ್ಮಾಪಕ ಕೊಲ್ಲ ಪ್ರವೀಣ್) ಮತ್ತು ಇಡೀ ಚಿತ್ರತಂಡಕ್ಕೆ ಶುಭವಾಗಲಿ. ಚಿತ್ರ ಮಾರ್ಚ್ ಅಂದರೆ ಇದೆ ತಿಂಗಳು 22ಕ್ಕೆ ತೆರೆಗೆ ಬರುತ್ತಿದೆ" ಎಂದು ಟ್ವಿಟ್ ಮಾಡುವ ಮೂಲಕ ಚಿತ್ರತಂಡದ ಬೆನ್ನು ತಟ್ಟಿದ್ದಾರೆ.
Wishing Dearest Pammi and his team of #MissingBoy all the very best for it’s release on March 22nd :)
— Nani (@NameisNani) March 11, 2019
Here’s the theatrical trailer ..https://t.co/0Zx52cJS6Q#KollaEntertainments @raghuram9777 #Gurunandan #Kannada
ಮತ್ತೆ ಗುರುನಂದನ್ ಸಹಾಯಕ್ಕೆ ಬಂದ ಸುದೀಪ್
ಅಂದ್ಹಾಗೆ, 'ಮಿಸ್ಸಿಂಗ್ ಬಾಯ್' ನೈಜ ಘಟನೆ ಆಧಾರಿತ ಸಿನಿಮಾ. ತಾಯಿ ಮತ್ತು ತಾಯ್ನಾಡಿಗೆ ಎಂಬ ಅಡಿಬರಹವಿರುವ ಚಿತ್ರದಲ್ಲಿ ಕಳೆದುಹೋಗಿರುವ ಹುಡುಗನೊಬ್ಬನ ಕರುಣಾಜನಕ ಕತೆಯನ್ನು ಹೇಳಲಾಗಿದೆ. ಚಿತ್ರದಲ್ಲಿ ನಾಯಕನಾಗಿ ಗುರುನಂದನ್ ಕಾಣಿಸಿಕೊಂಡಿದ್ದಾರೆ. ಚಿತ್ರ ರಘುರಾಮ್ ಸಾರಥ್ಯದಲ್ಲಿ ಮೂಡಿಬಂದಿದೆ.