Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅರುಂಧತಿ' ನಿರ್ದೇಶಕ ಕೋಡಿ ರಾಮಕೃಷ್ಣ ನಿಧನ
ಅರುಂಧತಿ, ದೇವಿ ಪುತ್ರುಡು, ಕನ್ನಡದ ನಾಗರಹಾವು ಸೇರಿದಂತೆ ನೂರು ಚಿತ್ರಗಳನ್ನ ನಿರ್ದೇಶನ ಮಾಡಿದ್ದ ತೆಲುಗಿನ ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ನಿಧನರಾಗಿದ್ದಾರೆ.
ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ನಿರ್ದೇಶಕ ಕೋಡಿ ರಾಮಕೃಷ್ಣ ಕಳೆದ ಕೆಲದಿನಗಳಿಂದ ಹೈದ್ರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಕೋಡಿರಾಮಕೃಷ್ಣ ಅವರು ಜುಲೈ 23 ರಂದು ಪಶ್ಚಿಮ ಗೋದಾವರಿಯಲ್ಲಿ ಜನಿಸಿದ್ದರು. 1982ರಲ್ಲಿ 'ಇಂಟುಲೋ ರಾಮಯ್ಯ ವಿದೀಲೋ ಕೃಷ್ಣಯ್ಯ' ಚಿತ್ರದ ಮೂಲಕ ನಿರ್ದೇಶಕರಾಗಿ ಜರ್ನಿ ಆರಂಭಿಸಿದ ಇವರು, ಸುಮಾರು 30 ವರ್ಷಗಳ ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡು, ನೂರಕ್ಕೂ ಅಧಿಕ ಚಿತ್ರಗಳನ್ನ ನಿರ್ದೇಶನ ಮಾಡಿದ್ದಾರೆ. ನೂರು ಸಿನಿಮಾಗಳನ್ನ ನಿರ್ದೇಶನ ಮಾಡಿರುವ ಭಾರತೀಯ ಕೆಲವೇ ಕೆಲವು ನಿರ್ದೇಶಕರಲ್ಲಿ ಕೋಡಿ ರಾಮಕೃಷ್ಣ ಕೂಡ ಒಬ್ಬರು.
ಚಿತ್ರರಂಗದ ಇತಿಹಾಸದಲ್ಲಿ 100 ಸಿನಿಮಾ ಮಾಡಿರುವ ನಿರ್ದೇಶಕರು ಇವರು
ಕೋಡಿರಾಮಕೃಷ್ಣ ಅವರು ನಿರ್ದೇಶಕರಾಗಿ ಮಾತ್ರವಲ್ಲದೇ, ಚಿತ್ರಕತೆ ಬರಹಗಾರರಾಗಿ ಮತ್ತು ನಟರಾಗಿಯೂ ಅಭಿನಯಿಸಿದ್ದಾರೆ. ಲೆಜೆಂಡ್ ನಿರ್ದೇಶಕನ ಚಿತ್ರರಂಗದ ಸೇವೆಗೆ 2012ರಲ್ಲಿ ರಘುಪತಿ ವೆಂಕಯ್ಯ ಪ್ರಶಸ್ತಿ ಕೂಡ ಲಭಿಸಿದೆ.
ಕೋಡಿ ರಾಮಕೃಷ್ಣ ಅವರ ಕೊನೆಯ ಸಿನಿಮಾ ಕನ್ನಡದಲ್ಲಿ ಎನ್ನುವುದು ವಿಶೇಷ. ರಮ್ಯಾ ಮತ್ತು ದಿಗಂತ್ ಅಭಿನಯಿಸಿ, ದಿವಂಗತ ನಟ ಡಾ ವಿಷ್ಣುವರ್ಧನ್ ಅವರ 201ನೇ ಸಿನಿಮಾ ಎಂದೇ ಖ್ಯಾತಿ ಗಳಿಸಿಕೊಂಡ 'ನಾಗರಹಾವು' ಚಿತ್ರವನ್ನ ನಿರ್ದೇಶನ ಮಾಡಿದ್ದು ಇವರೇ. 2016ರಲ್ಲಿ ಬಿಡುಗಡೆಯಾಗಿದ್ದ ನಾಗರಹಾವು ಚಿತ್ರವೇ ಕೊನೆಯ ಸಿನಿಮಾ.
90ರ ದಶಕದ ಸ್ಟಾರ್ ನಿರ್ದೇಶಕರಲ್ಲಿ ಕೋಡಿ ರಾಮಕೃಷ್ಣ ಪ್ರಮುಖರು. ಅಮ್ಮವರು, ದೇವಿ ಪುತ್ರುಡು, ಅಂಜಿ, ಗೂಢಚಾರಿ ನಂ 1, ಮುದ್ದುಲ ಕೃಷ್ಣಯ್ಯ, ಮುರಳಿ ಕೃಷ್ಣುಡು, ಸ್ಟೇಷನ್ ಮಾಸ್ಟರ್ ಅಂತಹ ಸೂಪರ್ ಹಿಟ್ ಸಿನಿಮಾಗಳು ಇವರ ಖಾತೆಯಲ್ಲಿದೆ.