Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೆನ್ನಿಸ್ ಕೃಷ್ಣ ಪುತ್ರ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ
ಇತ್ತೀಚಿಗಷ್ಟೆ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವಕಾಶ ಕೊರತೆ ಮಾತನಾಡಿದ ಬೇಸರ ಹಂಚಿಕೊಂಡಿದ್ದರು. ಅದೇನೇ ಇದ್ದರೂ, ಮತ್ತೊಂದು ಕಡೆ ಅವರ ಮಗನನ್ನು ಲಾಂಚ್ ಮಾಡುವ ತಯಾರಿ ಮಾಡಿದ್ದಾರೆ. ಟೆನ್ನಿಸ್ ಕೃಷ್ಣ ಪುತ್ರ ಅಪ್ಪನ ಹಾದಿಯಲ್ಲಿ ಚಿತ್ರರಂಗಕ್ಕೆ ಬರುತ್ತಿದ್ದಾರೆ.
ಟೆನ್ನಿಸ್ ಕೃಷ್ಣ ಮಗ ನಾಗಾರ್ಜುನ್ ಅಪ್ಪನ ಸಿನಿಮಾಗಳನ್ನು ನೋಡಿ ಬೆಳೆದ ಹುಡುಗ. ಸಿನಿಮಾಗಳ ಬಗ್ಗೆ ಆಸಕ್ತಿ ಹೊಂದಿದ್ದ ನಾಗಾರ್ಜುನ್ ಇದೀಗ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಮ್ಮ ಮಗನಿಗೆ ತಾವೇ ಸಿನಿಮಾವನ್ನು ಟೆನ್ನಿಸ್ ಕೃಷ್ಣ ನಿರ್ದೇಶನ ಮಾಡಲಿದ್ದಾರಂತೆ.
ಹಿರಿಯ ಕಲಾವಿದರಿಗೆ ಅವಕಾಶವೇ ಕೊಡುತ್ತಿಲ್ಲ: ಟೆನ್ನಿಸ್ ಕೃಷ್ಣ ಬೇಸರ
ಕಲಾವಿದರ ಮಗ ಎಂಬ ಕಾರಣಕ್ಕೆ ಸುಮ್ಮನೆ ಚಿತ್ರರಂಗಕ್ಕೆ ಬರಲು ಸಾಧ್ಯ ಆಗುವುದಿಲ್ಲ. ಹೀಗಾಗಿ, ನಟನೆಗೆ ಬೇಕಾದ ತಯಾರಿ, ಡ್ಯಾನ್ಸ್ ಎಲ್ಲವನ್ನು ನಾಗಾರ್ಜುನ್ ಕಲಿತಿದ್ದಾರಂತೆ. ಅಪ್ಪ ಹಾಸ್ಯ ನಟರಾಗಿ ಹೆಸರು ಮಾಡಿದ್ದು, ತಾವು ಹೀರೋ ಆಗಿ ಜನಪ್ರಿಯತೆ ಪಡೆಯಬೇಕು ಎನ್ನುವುದು ನಾಗಾರ್ಜುನ್ ಆಸೆ.
ಮಗನ ಸಿನಿಮಾದ ಕಥೆ ಸಿದ್ಧ ಮಾಡಿಕೊಂಡಿದ್ದು, ಸದ್ಯ, ನಿರ್ಮಾಪಕರ ಹುಡುಕಾಟದಲ್ಲಿ ಟೆನ್ನಿಸ್ ಕೃಷ್ಣ ಇದ್ದಾರೆ. ಒಳ್ಳೆಯ ನಿರ್ಮಾಪಕರು ಸಿಕ್ಕರೆ, ಆದಷ್ಟು ಬೇಗ ಸಿನಿಮಾ ಶುರು ಆಗಲಿದೆ.
ಟೆನ್ನಿಸ್ ಕೃಷ್ಣ ವೃತ್ತಿ ಬದುಕನ್ನ ಬದಲಿಸಿದ 'ವೀಕೆಂಡ್ ವಿತ್ ರಮೇಶ್'.!
ಚಿತ್ರರಂಗಕ್ಕೆ ತಂದೆಯ ರೀತಿ ಮಕ್ಕಳು ಕೂಡ ಸಿನಿಮಾ ಮಾಡುವ ಆಸೆಯಿಂದ ಬರುತ್ತಾರೆ. ಆದರೆ, ಈ ರೀತಿ ಬಂದವರಲ್ಲಿ ಯಶಸ್ಸು ಕೆಲವರಿಗೆ ಮಾತ್ರ ಸಿಕ್ಕಿದೆ. ಟೆನ್ನಿಸ್ ಕೃಷ್ಣ ಪುತ್ರ ಅದೃಷ್ಟ ಹೇಗಿದೆಯೋ ಕಾದು ನೋಡಬೇಕು.