Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೆನ್ನಿಸ್ ಕೃಷ್ಣ ಪುತ್ರ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ
ಇತ್ತೀಚಿಗಷ್ಟೆ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವಕಾಶ ಕೊರತೆ ಮಾತನಾಡಿದ ಬೇಸರ ಹಂಚಿಕೊಂಡಿದ್ದರು. ಅದೇನೇ ಇದ್ದರೂ, ಮತ್ತೊಂದು ಕಡೆ ಅವರ ಮಗನನ್ನು ಲಾಂಚ್ ಮಾಡುವ ತಯಾರಿ ಮಾಡಿದ್ದಾರೆ. ಟೆನ್ನಿಸ್ ಕೃಷ್ಣ ಪುತ್ರ ಅಪ್ಪನ ಹಾದಿಯಲ್ಲಿ ಚಿತ್ರರಂಗಕ್ಕೆ ಬರುತ್ತಿದ್ದಾರೆ.
ಟೆನ್ನಿಸ್ ಕೃಷ್ಣ ಮಗ ನಾಗಾರ್ಜುನ್ ಅಪ್ಪನ ಸಿನಿಮಾಗಳನ್ನು ನೋಡಿ ಬೆಳೆದ ಹುಡುಗ. ಸಿನಿಮಾಗಳ ಬಗ್ಗೆ ಆಸಕ್ತಿ ಹೊಂದಿದ್ದ ನಾಗಾರ್ಜುನ್ ಇದೀಗ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಮ್ಮ ಮಗನಿಗೆ ತಾವೇ ಸಿನಿಮಾವನ್ನು ಟೆನ್ನಿಸ್ ಕೃಷ್ಣ ನಿರ್ದೇಶನ ಮಾಡಲಿದ್ದಾರಂತೆ.
ಹಿರಿಯ ಕಲಾವಿದರಿಗೆ ಅವಕಾಶವೇ ಕೊಡುತ್ತಿಲ್ಲ: ಟೆನ್ನಿಸ್ ಕೃಷ್ಣ ಬೇಸರ
ಕಲಾವಿದರ ಮಗ ಎಂಬ ಕಾರಣಕ್ಕೆ ಸುಮ್ಮನೆ ಚಿತ್ರರಂಗಕ್ಕೆ ಬರಲು ಸಾಧ್ಯ ಆಗುವುದಿಲ್ಲ. ಹೀಗಾಗಿ, ನಟನೆಗೆ ಬೇಕಾದ ತಯಾರಿ, ಡ್ಯಾನ್ಸ್ ಎಲ್ಲವನ್ನು ನಾಗಾರ್ಜುನ್ ಕಲಿತಿದ್ದಾರಂತೆ. ಅಪ್ಪ ಹಾಸ್ಯ ನಟರಾಗಿ ಹೆಸರು ಮಾಡಿದ್ದು, ತಾವು ಹೀರೋ ಆಗಿ ಜನಪ್ರಿಯತೆ ಪಡೆಯಬೇಕು ಎನ್ನುವುದು ನಾಗಾರ್ಜುನ್ ಆಸೆ.
ಮಗನ ಸಿನಿಮಾದ ಕಥೆ ಸಿದ್ಧ ಮಾಡಿಕೊಂಡಿದ್ದು, ಸದ್ಯ, ನಿರ್ಮಾಪಕರ ಹುಡುಕಾಟದಲ್ಲಿ ಟೆನ್ನಿಸ್ ಕೃಷ್ಣ ಇದ್ದಾರೆ. ಒಳ್ಳೆಯ ನಿರ್ಮಾಪಕರು ಸಿಕ್ಕರೆ, ಆದಷ್ಟು ಬೇಗ ಸಿನಿಮಾ ಶುರು ಆಗಲಿದೆ.
ಟೆನ್ನಿಸ್ ಕೃಷ್ಣ ವೃತ್ತಿ ಬದುಕನ್ನ ಬದಲಿಸಿದ 'ವೀಕೆಂಡ್ ವಿತ್ ರಮೇಶ್'.!
ಚಿತ್ರರಂಗಕ್ಕೆ ತಂದೆಯ ರೀತಿ ಮಕ್ಕಳು ಕೂಡ ಸಿನಿಮಾ ಮಾಡುವ ಆಸೆಯಿಂದ ಬರುತ್ತಾರೆ. ಆದರೆ, ಈ ರೀತಿ ಬಂದವರಲ್ಲಿ ಯಶಸ್ಸು ಕೆಲವರಿಗೆ ಮಾತ್ರ ಸಿಕ್ಕಿದೆ. ಟೆನ್ನಿಸ್ ಕೃಷ್ಣ ಪುತ್ರ ಅದೃಷ್ಟ ಹೇಗಿದೆಯೋ ಕಾದು ನೋಡಬೇಕು.