Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಿರ್ದೇಶಕರು ಕಷ್ಟದಲ್ಲಿದ್ದಾರೆ, ಕಾಪಾಡಬೇಕಿರುವುದು ಸರ್ಕಾರದ ಹೊಣೆ'
ಕೊರೊನಾ ವೈರಸ್ನಿಂದ ಇಡೀ ಚಿತ್ರರಂಗ ಸಂಕಷ್ಟದಲ್ಲಿದೆ. ಸಿನಿಮಾಗೆ ಸಂಬಂಧಪಟ್ಟಂತೆ ಯಾವುದೇ ಕೆಲಸ ನಡೆಯುತ್ತಿಲ್ಲ. ಚಿತ್ರಮಂದಿರಗಳು ಬಂದ್ ಆಗಿವೆ, ರೆಕಾರ್ಡಿಂಗ್ ಸ್ಟುಡಿಯೋ, ಡಬ್ಬಿಂಗ್ ಸ್ಟುಡಿಯೋ ಮುಚ್ಚಿವೆ. ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಸಿನಿ ಕಾರ್ಮಿಕರು ಕೆಲಸ ಇಲ್ಲದೇ ಕುಳಿತಿದ್ದಾರೆ.
ಬುಧವಾರ ಕಲಾವಿದರು ಹಾಗೂ ಕಲಾತಂಡಗಳಿಗೆ ತಲಾ ಮೂರು ಸಾವಿರ ಸರ್ಕಾರದಿಂದ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದರು. ಆದರೆ, ಈ ಪ್ಯಾಕೇಜ್ನಲ್ಲಿ ನಿರ್ದೇಶಕ-ತಂತ್ರಜ್ಞರಿಗೆ ಯಾವುದೇ ಸಹಾಯವಾಗಿಲ್ಲ. ಹಾಗಾಗಿ, ಕರ್ನಾಟಕ ಚಲನಚಿತ್ರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ ಬೇಸರ ವ್ಯಕ್ತಪಡಿಸಿದ್ದು, ನಮ್ಮ ಸಂಘದ ಸದಸ್ಯರಿಗೆ ನೆರವು ನೀಡಿ ಎಂದು ಮನವಿ ಮಾಡಿದ್ದಾರೆ. ಮುಂದೆ ಓದಿ...
ಸಿನಿಮೋತ್ಸವ ರದ್ದುಗೊಳಿಸಿ, ಮೀಸಲಿಟ್ಟ ಹಣ ಕಾರ್ಮಿಕರಿಗೆ ನೀಡಿ; ನಿರ್ದೇಶಕ ಮನ್ಸೋರೆ
ಯಾರನ್ನು ಭೇಟಿಯಾದರು ಪ್ರಯೋಜನ ಇಲ್ಲ
'ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿದೆ, ಚಿತ್ರರಂಗವನ್ನೇ ನಂಬಿ ಬದುಕುತ್ತಿರುವ ಜನ ಬಳಲುತ್ತಿದ್ದಾರೆ. ಕಳೆದ ವರ್ಷ ಕೊರೊನಾ ಬಂದಾಗಿನಿಂದಲೂ ಸಂಬಂಧಪಟ್ಟ ಅಧಿಕಾರಿಗಳು, ಡಿಸಿ, ಕಮಿಷನರ್ ರನ್ನ ಭೇಟಿಯಾಗುತ್ತಲೇ ಇದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ' ಎಂದು ನಿರ್ದೇಶಕದ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ ಬೇಸರ ಹೊರಹಾಕಿದ್ದಾರೆ.
ಪ್ಯಾಕೇಜ್ನಲ್ಲಿ ನಮಗೆ ಏನು ಇಲ್ಲ
'ಕಳೆದ ಬಾರಿಯೂ ಯಾವುದೇ ಪ್ಯಾಕೇಜ್ನಲ್ಲಿ ನಮ್ಮ ವರ್ಗವನ್ನು ಪರಿಗಣಿಸಿಲ್ಲ. ಈ ಬಾರಿಯ ಪ್ಯಾಕೇಜ್ನಲ್ಲೂ ನಮ್ಮ ನಿರ್ದೇಶಕರನ್ನು ಹಾಗೂ ತಂತ್ರಜ್ಞರನ್ನು ಪರಿಗಣಿಸಿಲ್ಲ. ಕನ್ನಡ ಚಿತ್ರರಂಗವನ್ನೇ ನಂಬಿ ಬದುಕುತ್ತಿರುವವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ನೀವು ಕಾಪಾಡಬೇಕಾಗಿದೆ. ಇದು ಸರ್ಕಾರದ ಹೊಣೆ ಆಗಿದೆ' ಎಂದು ಟೇಶಿ ವೆಂಕಟೇಶ್ ಒತ್ತಾಯಿಸಿದ್ದಾರೆ.
'ಕಲಾವಿದರಿಗೆ 3 ಸಾವಿರ ಘೋಷಿಸಿರುವುದು ನಾಚಿಕೆಗೇಡಿನ ಸಂಗತಿ'
10 ಸಾವಿರ ರೂಪಾಯಿ ಕೊಡಿ
ಈ ಕುರಿತು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಚಿವ ಸಿಸಿ ಪಾಟೀಲ್ರಿಗೆ ಪತ್ರ ಬರೆದಿರುವ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ ''ನಿರ್ದೇಶಕ ಸಂಘದ 1000 ಜನಕ್ಕೆ ತಲಾ 10 ಸಾವಿರ ರೂಪಾಯಿಯಂತೆ ಸಹಾಯ ಮಾಡಿ'' ಎಂದು ಆಗ್ರಹಿಸಿದ್ದಾರೆ. ಸಂಘದಲ್ಲಿ ಒಟ್ಟು 2300 ಸದಸ್ಯರಿದ್ದಾರೆ. ಅದರಲ್ಲಿ 1000 ಮಂದಿಗೆ ನೀವು ಸಹಾಯ ಮಾಡಿ ಎಂದು ಕೋರಿದ್ದಾರೆ.
Recommended Video
ಚಿತ್ರರಂಗಕ್ಕೆ ನಮ್ಮ ಕೊಡುಗೆ ಪರಿಗಣಿಸಿ
'ಧರ್ಮ, ಸಮಾಜ, ಸಂಸ್ಕೃತಿ, ಭಾಷೆ, ಐತಿಹಾಸಿಕವಾಗಿ ಎಲ್ಲ ರೀತಿಯಲ್ಲೂ ಕನ್ನಡ ಚಿತ್ರರಂಗದ ಕೊಡುಗೆ ಅಪಾರವಾಗಿದೆ. ಈ ಕೊಡುಗೆಗಳನ್ನು ಪರಿಗಣಿಸಿ ಕನ್ನಡ ಚಿತ್ರರಂಗದ ಪರವಾಗಿ ನಿಂತುಕೊಳ್ಳಬೇಕು. ಸಹಾಯ ಹಸ್ತ ಚಾಚುವ ಮೂಲಕ ನಮ್ಮ ಜೊತೆ ನಿಲ್ಲಬೇಕು' ಎಂದು ಟೇಶಿ ವೆಂಕಟೇಶ್ ವಿನಂತಿಸಿದ್ದಾರೆ.