Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಸ್ಟಾರ್ ವಿಜಯ್ ನಟಿಸಿರುವ 'ಮಾಸ್ಟರ್' ಕನ್ನಡದಲ್ಲೂ ಬಿಡುಗಡೆ
ತಮಿಳು ನಟ ವಿಜಯ್ ನಾಯಕನಾಗಿ ನಟಿಸಿರುವ ಮಾಸ್ಟರ್ ಸಿನಿಮಾ ಜನವರಿ 13 ರಂದು ಚಿತ್ರಮಂದಿರದಲ್ಲಿ ನೇರವಾಗಿ ಬಿಡುಗಡೆಯಾಗುತ್ತಿದೆ. ಲಾಕ್ಡೌನ್ ಬಳಿಕ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿರುವ ಮೊದಲ ಸ್ಟಾರ್ ನಟನ ಚಿತ್ರ ಇದಾಗಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಿದೆ.
ಈ ಸಿನಿಮಾ ಕೇವಲ ತಮಿಳುನಾಡಿಗೆ ಮಾತ್ರವಲ್ಲ, ಸೌತ್ ಇಂಡಿಯಾದಲ್ಲಿ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ, ಚಿತ್ರಮಂದಿರಕ್ಕೆ ಜನ ಹೇಗೆ ಬರ್ತಾರೆ ಎನ್ನುವುದನ್ನು ತಿಳಿಯಲು ಈ ಸಿನಿಮಾ ಉದಾಹರಣೆಯಾಗಿದೆ. ಈ ಸಿನಿಮಾ ಬಳಿಕ ಇಡೀ ದಕ್ಷಿಣದ ದೊಡ್ಡ ಸಿನಿಮಾಗಳ ಭವಿಷ್ಯ ನಿಂತಿದೆ.
ಬಿಗ್ ಅನೌನ್ಸ್ ಮೆಂಟ್; ದಳಪತಿ ವಿಜಯ್ 'ಮಾಸ್ಟರ್' ಬಿಡುಗಡೆ ದಿನಾಂಕ ಘೋಷಣೆ
'ಮಾಸ್ಟರ್' ಸಿನಿಮಾ ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗುತ್ತಿದೆ. ಇದೀಗ, ಕನ್ನಡದಲ್ಲೂ ಮಾಸ್ಟರ್ ಸಿನಿಮಾ ತೆರೆಕಾಣುತ್ತಿದೆ ಎಂಬ ವಿಚಾರ ಹೊರಬಿದ್ದಿದೆ. ಹೌದು, ಮಾಸ್ಟರ್ ಸಿನಿಮಾ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಡಬ್ ಆಗಿ ಬರ್ತಿದೆ. ಕನ್ನಡದ ಪೋಸ್ಟರ್ ಸಹ ವೈರಲ್ ಆಗಿದೆ.
'ಮಾಸ್ಟರ್' ಸಿನಿಮಾ ರಿಲೀಸ್ ಹಿನ್ನೆಲೆ ತಮಿಳುನಾಡು ಮುಖ್ಯಮಂತ್ರಿಯ ಬಳಿಕ ನಟ ವಿಜಯ್ ''ಚಿತ್ರಮಂದಿರದಲ್ಲಿ ಶೇಕಡಾ 100 ರಷ್ಟು ಅವಕಾಶ ಕೊಡಿ'' ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಒಂದು ಕಡೆ ಕೊರೊನಾ ವೈರಸ್, ಈಗ ಬ್ರಿಟನ್ನಿಂದ ಹೊಸ ರೀತಿ ಸೋಂಕು ಹಬ್ಬಿದೆ ಎಂಬ ಆತಂಕ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಜಯ್ ಸಿನಿಮಾ ಚಿತ್ರಮಂದಿರಕ್ಕೆ ಬರುತ್ತಿರುವುದು ನಿಜಕ್ಕೂ ಸವಾಲಾಗಿದೆ.
'ಚಿತ್ರಮಂದಿರದಲ್ಲಿ 100ರಷ್ಟು ಅವಕಾಶ ಕೊಡಿ': ಸಿಎಂಗೆ ಮನವಿ ಮಾಡಿದ ವಿಜಯ್
Recommended Video
ಕಳೆದ ವಾರವಷ್ಟೇ ಸೆನ್ಸಾರ್ ಮುಗಿಸಿರುವ ಮಾಸ್ಟರ್ ಸಿನಿಮಾ ಯು/ಎ ಪ್ರಮಾಣಪತ್ರ ಪಡೆದುಕೊಂಡಿದೆ. ಲೋಕೇಶ್ ಕನಕರಾಜ್ ಈ ಚಿತ್ರ ನಿರ್ದೇಶನ ಮಾಡಿದ್ದು, ವಿಜಯ್ ಜೊತೆ ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ಮಾಳವಿಕಾ ಮೋಹನ್ ನಾಯಕಿಯಾಗಿದ್ದಾರೆ.