Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಸಿಕೆ ಪಡೆಯುವುದಕ್ಕೂ ಮುಂಚೆ ರಕ್ತದಾನ ಮಾಡಿದ ತರುಣ್ ಸುಧೀರ್
ಸ್ಯಾಂಡಲ್ವುಡ್ ಇಂಡಸ್ಟ್ರಿಯಲ್ಲಿ ಈಗಾಗಲೇ ಹಲವರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಇದೀಗ, ಖ್ಯಾತ ನಿರ್ದೇಶಕ ತರುಣ್ ಸುಧೀರ್ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅದಕ್ಕು ಮುಂಚೆ ರಕ್ತದಾನ ಮಾಡಿ ಮಾದರಿಯಾಗಿದ್ದಾರೆ.
ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಿರ್ದೇಶಕ ''ರಕ್ತದಾನ ಬೇರೆಯವರ ಜೀವ ಉಳಿಸುವುದು, ಲಸಿಕೆ ನಮ್ಮ ಜೀವ ಉಳಿಸುತ್ತದೆ'' ಎಂದು ಹೇಳಿದ್ದಾರೆ.
ಕೊರೊನಾ ವಿರುದ್ಧ ಹೋರಾಟಕ್ಕೆ ನಟ ಚಿಯಾನ್ ವಿಕ್ರಮ್ ನೆರವು
ಜೊತೆಗೆ 'ರಕ್ತದಾನ ಮಹಾದಾನ' ವಿನಂತಿ ಮಾಡುವ ಮೂಲಕ ತರುಣ್ ಸುಧೀರ್ ಇತರರಿಗೆ ಮಾದರಿಯಾಗಿದ್ದಾರೆ. ಈ ಮುಂಚೆ ನಟ ವಸಿಷ್ಠ ಸಿಂಹ ಅವರು ಸಹ ಕೋವಿಡ್ ಲಸಿಕೆ ಪಡೆಯುವುದಕ್ಕೂ ಮೊದಲು ರಕ್ತದಾನ ಮಾಡಿ ಜಾಗೃತಿ ಮೂಡಿಸಿದ್ದರು.
ಕೋವಿಡ್ ವ್ಯಾಕ್ಸಿನ್ ಪಡೆದ ಆರು ತಿಂಗಳವರೆಗೂ ರಕ್ತದಾನ ಮಾಡುವಂತಿಲ್ಲ. ಹಾಗಾಗಿ, ಲಸಿಕೆ ಪಡೆಯುವುದಕ್ಕೂ ಮೊದಲೇ ರಕ್ತದಾನ ಮಾಡಿ ಕೊರೊನಾ ಪರಿಸ್ಥಿತಿಯಲ್ಲಿ ಎದುರಾಗಬಹುದಾದ ರಕ್ತದ ಅಭಾವ ನೀಗಿಸಲು ಇದು ಸಹಕಾರಿಯಾಗಲಿದೆ.
Recommended Video
'ಮದಗಜ' ಚಿತ್ರದ ನಾಯಕ ಶ್ರೀಮುರಳಿ, ನಟಿ ಆಶಿಕಾ ರಂಗನಾಥ್, ನಿರ್ದೇಶಕ ಮಹೇಶ್ ಕುಮಾರ್ ಕೋವಿಡ್ ಲಸಿಕೆ ಪಡೆದಿದ್ದರು. ಸೂಪರ್ ಸ್ಟಾರ್ ರಜನಿಕಾಂತ್, ನಟಿ ರಮ್ಯಾಕೃಷ್ಣ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಸೇರಿದಂತೆ ಹಲವು ಸಿನಿಮಾ ಕಲಾವಿದರು ಲಸಿಕೆ ಹಾಕಿಸಿಕೊಂಡಿದ್ದಾರೆ.