Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಸಿನಿಮಾ ಟೈಟಲ್ ಗೊಂದಲ ನಿವಾರಿಸಿದ ತರುಣ್ ಸುಧೀರ್
Recommended Video
ನಟ ದರ್ಶನ್ ಅವರಿಗೆ ನಿರ್ದೇಶಕ ತರುಣ್ ಸುಧೀರ್ ಒಂದು ಸಿನಿಮಾ ಮಾಡುತ್ತಿದ್ದಾರೆ. 'ಕುರುಕ್ಷೇತ್ರ' ದರ್ಶನ್ ಅವರ 50ನೇ ಸಿನಿಮಾವಾಗಿದ್ದು, 53ನೇ ಚಿತ್ರಕ್ಕೆ ತರುಣ್ ಆಕ್ಷನ್ ಕಟ್ ಹೇಳಲಿದ್ದಾರೆ.
ದರ್ಶನ್ ಹಾಗೂ ತರುಣ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಸಿನಿಮಾಗೆ ಅನೇಕ ಟೈಟಲ್ ಗಳು ಹರಿದಾಡುತ್ತಿವೆ. 'ವಜ್ರಮುನಿ', 'ರಾಬರ್ಟ್' ಹೀಗೆ ಕೆಲ ಹೆಸರುಗಳು ಚಿತ್ರಕ್ಕೆ ಫಿಕ್ಸ್ ಆಗಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. ಆದರೆ ಈಗ ದರ್ಶನ್ 53ನೇ ಚಿತ್ರದ ಟೈಟಲ್ ಗೊಂದಲವನ್ನು ನಿರ್ದೇಶಕ ತರುಣ್ ಸುಧೀರ್ ನಿವಾರಿಸಿದ್ದಾರೆ.
ನನ್ನ ಮೊದಲ ಸಿನಿಮಾ : ಅವಕಾಶ ಇಲ್ಲದಾಗ ಬರೆದ ಕಥೆ ಅದ್ಭುತ ಸೃಷ್ಟಿಸಿತು!
ಈ ಬಗ್ಗೆ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಮಾತನಾಡಿರುವ ತರುಣ್ ಸುಧೀರ್
''ಈಗ ನೀವು ಕೇಳುತ್ತಿರುವ ಟೈಟಲ್ ಗಳ ಪೈಕಿ ಕೆಲವನ್ನು ನಮ್ಮ ಬ್ಯಾನರ್ ನಲ್ಲಿ ರಿಜಿಸ್ಟರ್ ಮಾಡಿಸಿದ್ದೇವೆ. 'ಚೌಕ' ಚಿತ್ರದಲ್ಲಿ ದರ್ಶನ್ 'ರಾಬರ್ಟ್' ಎಂಬ ಪಾತ್ರ ಮಾಡಿದ್ದರು. ಈ ಹೆಸರನ್ನು ಕೂಡ ರಿಜಿಸ್ಟರ್ ಮಾಡಿಸಿದ್ದೇವೆ. ಆದರೆ, ದರ್ಶನ್ ಅವರ ಸಿನಿಮಾಗೆ ಟೈಟಲ್ ಇನ್ನು ಫಿಕ್ಸ್ ಆಗಿಲ್ಲ. ಈ ಟೈಟಲ್ ಗಳು ನಮಗೆ ಇರಲಿ ಎಂಬ ಕಾರಣಕ್ಕೆ ಸದ್ಯಕ್ಕೆ ನೊಂದಣಿ ಮಾಡಿಸಿದ್ದೇವೆ ಅಷ್ಟೇ'' ಎಂದರು ತರುಣ್.
ಅಲ್ಲಿಗೆ ದರ್ಶನ್ 53ನೇ ಚಿತ್ರದ ಟೈಟಲ್ ಗೊಂದಲಕ್ಕೆ ತರುಣ್ ಸುಧೀರ್ ತೆರೆ ಏಳೆದಿದ್ದಾರೆ. 'ಚೌಕ' ಸಿನಿಮಾದ ನಂತರ ತರುಣ್ ಅವರ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.