Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಸಿನಿಮಾ ಟೈಟಲ್ ಗೊಂದಲ ನಿವಾರಿಸಿದ ತರುಣ್ ಸುಧೀರ್
Recommended Video
ನಟ ದರ್ಶನ್ ಅವರಿಗೆ ನಿರ್ದೇಶಕ ತರುಣ್ ಸುಧೀರ್ ಒಂದು ಸಿನಿಮಾ ಮಾಡುತ್ತಿದ್ದಾರೆ. 'ಕುರುಕ್ಷೇತ್ರ' ದರ್ಶನ್ ಅವರ 50ನೇ ಸಿನಿಮಾವಾಗಿದ್ದು, 53ನೇ ಚಿತ್ರಕ್ಕೆ ತರುಣ್ ಆಕ್ಷನ್ ಕಟ್ ಹೇಳಲಿದ್ದಾರೆ.
ದರ್ಶನ್ ಹಾಗೂ ತರುಣ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಸಿನಿಮಾಗೆ ಅನೇಕ ಟೈಟಲ್ ಗಳು ಹರಿದಾಡುತ್ತಿವೆ. 'ವಜ್ರಮುನಿ', 'ರಾಬರ್ಟ್' ಹೀಗೆ ಕೆಲ ಹೆಸರುಗಳು ಚಿತ್ರಕ್ಕೆ ಫಿಕ್ಸ್ ಆಗಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. ಆದರೆ ಈಗ ದರ್ಶನ್ 53ನೇ ಚಿತ್ರದ ಟೈಟಲ್ ಗೊಂದಲವನ್ನು ನಿರ್ದೇಶಕ ತರುಣ್ ಸುಧೀರ್ ನಿವಾರಿಸಿದ್ದಾರೆ.
ನನ್ನ ಮೊದಲ ಸಿನಿಮಾ : ಅವಕಾಶ ಇಲ್ಲದಾಗ ಬರೆದ ಕಥೆ ಅದ್ಭುತ ಸೃಷ್ಟಿಸಿತು!
ಈ ಬಗ್ಗೆ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಮಾತನಾಡಿರುವ ತರುಣ್ ಸುಧೀರ್
''ಈಗ ನೀವು ಕೇಳುತ್ತಿರುವ ಟೈಟಲ್ ಗಳ ಪೈಕಿ ಕೆಲವನ್ನು ನಮ್ಮ ಬ್ಯಾನರ್ ನಲ್ಲಿ ರಿಜಿಸ್ಟರ್ ಮಾಡಿಸಿದ್ದೇವೆ. 'ಚೌಕ' ಚಿತ್ರದಲ್ಲಿ ದರ್ಶನ್ 'ರಾಬರ್ಟ್' ಎಂಬ ಪಾತ್ರ ಮಾಡಿದ್ದರು. ಈ ಹೆಸರನ್ನು ಕೂಡ ರಿಜಿಸ್ಟರ್ ಮಾಡಿಸಿದ್ದೇವೆ. ಆದರೆ, ದರ್ಶನ್ ಅವರ ಸಿನಿಮಾಗೆ ಟೈಟಲ್ ಇನ್ನು ಫಿಕ್ಸ್ ಆಗಿಲ್ಲ. ಈ ಟೈಟಲ್ ಗಳು ನಮಗೆ ಇರಲಿ ಎಂಬ ಕಾರಣಕ್ಕೆ ಸದ್ಯಕ್ಕೆ ನೊಂದಣಿ ಮಾಡಿಸಿದ್ದೇವೆ ಅಷ್ಟೇ'' ಎಂದರು ತರುಣ್.
ಅಲ್ಲಿಗೆ ದರ್ಶನ್ 53ನೇ ಚಿತ್ರದ ಟೈಟಲ್ ಗೊಂದಲಕ್ಕೆ ತರುಣ್ ಸುಧೀರ್ ತೆರೆ ಏಳೆದಿದ್ದಾರೆ. 'ಚೌಕ' ಸಿನಿಮಾದ ನಂತರ ತರುಣ್ ಅವರ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.