Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಾಯಿಗೆ ತಕ್ಕ ಮಗ'ನಿಗೆ A ಸರ್ಟಿಫಿಕೇಟ್ : ಬೇಸರಗೊಂಡ ಶಶಾಂಕ್
'ತಾಯಿಗೆ ತಕ್ಕ ಮಗ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲ ಸಿನಿಮಾಗಳಂತೆ ರಿಲೀಸ್ ಮೊದಲು ಸಿನಿಮಾ ಸೆನ್ಸಾರ್ ಆಗಿದೆ. ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಲಾಗಿದೆ.
ಆದರೆ, ಇದು ನಿರ್ದೇಶಕ ಶಶಾಂಕ್ ಅವರ ಬೇಸರಕ್ಕೆ ಕಾರಣವಾಗಿದೆ. ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದ್ದು, ಸಿನಿಮಾಗೆ ಸಮಸ್ಯೆ ಆಗಿದೆ ಎನ್ನುವುದು ಶಶಾಂಕ್ ಮಾತು.
'ತಾಯಿಗೆ ತಕ್ಕ ಮಗ' ಚಿತ್ರಕ್ಕೆ ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಪ್ರೇರಣೆ.?
ಈ ಬಗ್ಗೆ 'ಫಿಲ್ಮಿ ಬೀಟ್ ಕನ್ನಡ'ದ ಜೊತೆಗೆ ಮಾತನಾಡಿರುವ ಶಶಾಂಕ್ ''ನಾವು ಎ ಪ್ರಮಾಣ ಪತ್ರವನ್ನು ನಿರೀಕ್ಷೆ ಮಾಡಿರಲಿಲ್ಲ. ಚಿತ್ರದಲ್ಲಿ ಕೆಲವು ಅಂಶಗಳು ಇದ್ದು, ಅದಕ್ಕಾಗಿ ಎ ಸಿಕ್ಕಿರಬಹುದು. ಆದರೆ, ಈ ಬಗ್ಗೆ ಸೋಮವಾರ ಸುದ್ದಿಗೋಷ್ಟಿ ನಡೆಸಿ ವಿವರ ನೀಡುತ್ತೇನೆ'' ಎಂದರು.
ಸಕ್ಕರೆ ನಗುವ ಚೆಲುವೆಯ ಮುದ್ದಾದ ಹಾಡನ್ನು ಕೇಳಿ
ಸಿನಿಮಾದ ಬಿಡುಗಡೆಯ ದಿನಾಂಕ ನವೆಂಬರ್ 16ರ ರಂದು ನಿಗದಿಯಾಗಿದ್ದು, ಈ ವೇಳೆ ಎ ಸರ್ಟಿಫಿಕೇಟ್ ಸಿಕ್ಕಿರುವುದು ಸ್ವಲ್ಪ ಸಮಸ್ಯೆಗೆ ಕಾರಣವಾಗಿದೆ ಎನ್ನುತ್ತಾರೆ ಶಶಾಂಕ್.
ಅಂದಹಾಗೆ, ಈ ಸಿನಿಮಾ ಅಜಯ್ ರಾವ್ ಅವರ 25ನೇ ಸಿನಿಮಾವಾಗಿದೆ. ಆಶಿಕಾ ರಂಗನಾಥ್ ಚಿತ್ರದ ನಾಯಕಿ ಆಗಿದ್ದಾರೆ.