Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಮಂದಿರ ಮಾಲೀಕರಿಂದ ಬಂದ್ ಗೆ ಬೆಂಬಲ
ಭಾರತ ಬಂದ್ ಹಿನ್ನೆಲೆಯಲ್ಲಿ ಕೆಜಿ ರಸ್ತೆಯ ಪ್ರಮುಖ ಚಿತ್ರಮಂದಿರಗಳಲ್ಲಿ ಶೋ ರದ್ದು ಮಾಡಲು ಚಿತ್ರಮಂದಿರದ ಮಾಲೀಕರು ನಿರ್ಧಾರ ಮಾಡಿದ್ದಾರೆ.ಇಂದು ಮಧ್ಯಾಹ್ನ 3 ಗಂಟೆಯವರೆಗೆ ಯಾವುದೇ ಶೋ ನಡೆಸದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಿನಿಮಾ ಮಂದಿಗಳಿಗೆ ಪ್ರೇಕ್ಷಕರೇ ಆಧಾರ, ಜನ ಥಿಯೇಟರ್ ಗೆ ಬಂದರೆ ಈಗಲೂ ಶೋ ನಡೆಸಲು ಚಿತ್ರಮಂದಿರದ ಮಾಲೀಕರು ಸಿದ್ದವಿದ್ದಾರೆ. ಭಾರತ್ ಬಂದ್ ಸುದ್ದಿ ಜೋರಾಗಿ ಹಬ್ಬಿರುವುದರಿಂದ ಸಿನಿಮಾ ಪ್ರದರ್ಶನ ಇರಲ್ಲ ಎಂದು ಜನರು ನಿರ್ಧಾರ ಮಾಡಿಕೊಂಡಿದ್ದಾರೆ. ಇದರಿಂದ ಥಿಯೇಟರ್ ಬಳಿ ಜನರು ಕಾಣಿಸಿಕೊಳ್ಳುತ್ತಿಲ್ಲ. ಜನರು ಮಧ್ಯಾಹ್ನದ ನಂತರ ಬರಬಹುದು ಎಂದು ಥಿಯೇಟರ್ ಮಾಲೀಕರು ಸಿಬ್ಬಂದಿಗಳು ಕಾಯುತ್ತಿದ್ದಾರೆ.
ಭಾರತ್ ಬಂದ್ LIVE: ಪ್ರತಿಭಟನೆಗೆ ಸೋನಿಯಾ, ಮನಮೋಹನ್ ಸಿಂಗ್ ಹಾಜರು
ಸಾಮಾನ್ಯವಾಗಿ ಪ್ರತಿ ಸೋಮವಾರ ಚಿತ್ರಮಂದಿರದಲ್ಲಿ ಜನಸಂಖ್ಯೆ ಕಡಿಮೆ ಇರುತ್ತೆ. ಇನ್ನು ಸೋಮವಾರವೇ ಬಂದ್ ಮಾಡಿದರೆ ಯಾರು ಥಿಯೇಟರ್ ಗಳಿಗೆ ಬರುತ್ತಾರೆ ಎನ್ನುವುದು ಮಾಲೀಕರು ಮತ್ತು ಸಿಬ್ಬಂದಿಗಳ ಅಭಿಪ್ರಾಯ.
ಸದ್ಯ ಚಿತ್ರಮಂದಿರಗಳಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ಸ, ಹಿ, ಪ್ರಾ, ಪಾಠ ಶಾಲೆ, ಅಯೋಗ್ಯ, ಪತಿ ಬೇಕು.ಕಾಮ್ ಸಿನಿಮಾಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಯಶಸ್ವಿ ಪ್ರದರ್ಶನ ಆಗುತ್ತಿತ್ತು. ಇಂದು ಬಂದ್ ಕಾರಣದಿಂದಾಗಿ ನಿರ್ಮಾಪಕರಿಗೆ ಒಂದು ದಿನದ ಕಲೆಕ್ಷನ್ ಲಾಸ್ ಆಗಲಿದೆ.