Don't Miss!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಣ್ಣುದಾನಕ್ಕೆ ಸಹಿ ಮಾಡಲು ಕ್ಯೂ ನಿಂತ ಪುನೀತ್ ಅಭಿಮಾನಿಗಳು
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ 6ನೇ ದಿನ. ಅವರನ್ನು ಕಳೆದುಕೊಂಡಿರೋ ನೋವು ಸಾಕಷ್ಟು ಅಭಿಮಾನಿಗಳಲ್ಲಿ ಇಗಲೂ ಹಾಗೇ ಇದೆ. ಕುಟುಂಬ ಸದಸ್ಯರು ಅದು ಹೇಗೆ ಪುನೀತ್ ನಿಧನವನ್ನು ಅರಗಿಸಿಕೊಂಡಿದ್ದಾರೆ ಆ ದೇವರೇ ಬಲ್ಲ. ಹೀಗಿದ್ದಾಗ ಅಭಿಮಾನಿಗಳು ಒಂದೊಂದಾಗೇ ಪುನೀತ್ ಅವರ ಆದರ್ಶವನ್ನು ಅನುಸರಿಸಲು ಮುಂದಾಗಿದ್ದಾರೆ. ಪುನೀತ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಲು ಮುಂದಾಗಿದ್ದಾರೆ.
ಪುನೀತ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ತಂದೆ ಹಾಕಿ ಕೊಟ್ಟ ದಾರಿಯಲ್ಲೇ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದರು. ನೇತ್ರದಾನದಿಂದಾಗಿ 4 ಮಂದಿಗೆ ಪುನೀತ್ ಬೆಳಕಾಗಿದ್ದಾರೆ. ನೇತ್ರ ದಾನಕ್ಕೆ ದೊಡ್ಮನೆ ಮೊದಲಿನಿಂದಲೂ ಬೆಂಬಲಿಸುತ್ತಾ, ನೇತ್ರ ದಾನ ಮಹಾದಾನ ಎಂದು ಹೇಳಿಕೊಂಡು ಬಂದಿದೆ. ಇದೀಗ ಪುನೀತ್ ಅವರನ್ನೇ ಆದರ್ಶವಾಗಿ ಇಟ್ಟುಕೊಂಡ ಅವರ ಅಭಿಮಾನಿಗಳು ತಾವೂ ಸಹ ತಮ್ಮ ಮರಣಾನಂತರ ನೇತ್ರದಾನ ಮಾಡುವುದಕ್ಕೆ ಆಸಕ್ತಿ ತೋರುತ್ತಿದ್ದಾರೆ.
ಇದಕ್ಕೆ ಸಾಕ್ಷಿಯಾಗಿರೋದು ಬಳ್ಳಾರಿಯ ಪುನೀತ್ ಅಭಿಮಾನಿಗಳು. ಪುನೀತ್ ಹಾಕಿಕೊಟ್ಟ ದಾರಿಯಲ್ಲಿ ನಡೆಯಲು ಮುಂದಾಗಿರುವ ಫ್ಯಾನ್ಸ್ ನೇತ್ರ ದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡು ದಿನಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ನೇತ್ರದಾನದ ನೊಂದಣಿ ಪತ್ರವನ್ನು ಭರ್ತಿ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಆರೋಗ್ಯ ಅಧಿಕಾರಿಗಳು ಆಶ್ಚರ್ಯಕ್ಕೆ ಒಳಗಾಗಿದ್ದಾರೆ.
ಕ್ಯೂನಲ್ಲಿ ನಿಂತು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿರುವ ಅಭಿಮಾನಿಗಳು, ವೈದ್ಯ ರೊಂದಿಗೆ ಕಣ್ಣುದಾನದ ಪ್ರಕ್ರಿಯೆ ಕುರಿತು ವಿಚಾರಿಸುತ್ತಿದ್ದಾರಂತೆ. ನೇತ್ರದಾನದಿಂದ ಬೇರೆಯವರಿಗೆ ಆಗುವ ಲಾಭದ ಬಗ್ಗೆ ಕೂಡ ಮಾಹಿತಿ ತಿಳಿದುಕೊಳ್ಳುತ್ತಿದ್ದಾರೆ. ತಾವು ದಾನ ಮಾಡೋದು ಅಲ್ಲದೇ ಕೆಲವರು ತಮ್ಮ ಕುಟುಂಬ ಸದಸ್ಯರನ್ನು ಕರೆತಂದು ಕಣ್ಣುದಾನದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಮಾಡಿಸುತ್ತಿದ್ದಾರೆ. ಪುನೀತ್ ಅವರ ಆದರ್ಶವನ್ನು ನಾವು ಹೀಗೆ ಪಾಲಿಸಲು ಮುಂದಾಗಿರುವ ಬಗ್ಗೆ ಅಭಿಮಾನಿಗಳು ಖುಷಿಯಾಗಿದ್ದಾರೆ.
ಈ ಹಿಂದೆ ವರನಟ ಡಾ ರಾಜ್ ಕುಮಾರ್ ನಿಧನರಾದಾಗಲೂ ತಮ್ಮ ಎರಡೂ ಕಣ್ಣಗಳನ್ನು ದಾನ ಮಾಡಿದ್ದರು. ಆಗಲೂ ಕೂಡ ಸಾಕಷ್ಟು ಅಭಿಮಾನಿಗಳು ಇದೇ ರೀತಿ ರಾಜ್ಕುಮಾರ್ ಅವರಂತೆಯೇ ತಮ್ಮ ಮರಣಾನಂತರ ಕಣ್ಣುದಾನ ಮಾಡಿದರು. ಲಕ್ಷಾಂತರ ಜನ ಕಣ್ಣು ದಾನದ ಪ್ರಕ್ರಿಯೆ ಸಹಿ ಸಹ ಮಾಡಿದ್ದರು. ಈಗ ಪುನೀತ್ ಅಭಿಮಾನಿಗಳು ಕೂಡ ನೇತ್ರದಾನ ಮಹಾದಾನ ಎಂದು ಅರಿತು ನೇತ್ರದಾನಕ್ಕೆ ಮುಂದಾಗಿದ್ದಾರೆ. ಹಾಗೇ ತಮ್ಮ ನೆಚ್ಚಿನ ನಟನ ಆದರ್ಶಗಳನ್ನು ಈ ಮೂಲಕ ಈಡೇರಿಸಲು ಮುಂದಾಗಿದ್ದಾರೆ.
ಒಂದು ಕಡೆ ಕಲಾವಿದರು ಚಿತ್ರರಂಗವನ್ನು ಒಟ್ಟಾಗಿ ಮುನ್ನಡೆಸಬೇಕು ಎಂಬ ತೀರ್ಮಾನಕ್ಕೆ ಬರುತ್ತಿದ್ದಾರೆ. ಪುನೀತ್ ನಿಧನದಿಂದಾಗಿ ಎಲ್ಲಾ ಸ್ಟಾರ್ಗಳ ಫ್ಯಾನ್ಸ್ ಕ್ಲಬ್ ಅಡ್ಮಿನ್ಗಳು ಇನ್ಮೇಲೆ ಸ್ಟಾರ್ ವಾರ್ ಇರಬಾರದು ನಾವೇಲ್ಲರೂ ಒಂದೇ ತಾಯಿ ಮಕ್ಕಳು ಎಂದು ಮಂತ್ರ ಜಪಿಸುತ್ತಿದ್ದಾರೆ. ಸಾಕಷ್ಟು ರಸ್ತೆಗಳಿಗೆ ಪುನೀತ್ ಅವರ ಹೆಸರಿಡಲಾಗುತ್ತಿದೆ. ಪುನೀತ್ ದೀಪಾವಳಿಗೆ ಪಟಾಕಿ ಹೊಡೆಯಬೇಡಿ ಎಂದಿರೋದು ಕಳೆದ ವರ್ಷದ ವೀಡಿಯೋ ಕೂಡ ಸಾಕಷ್ಟು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಇದನ್ನು ಕೂಡ ಅನುಸರಿಸಲು ಮುಂದಾಗಿದ್ದಾರೆ. ಹೀಗೆ ಎಲ್ಲಾ ಕಡೆಯಿಂದಲೂ ಪುನೀತ್ ಸ್ಮರಣೆಗಳು ಆಗುತ್ತಿದ್ದು, ಅಭಿಮಾನಿಗಳಂತೂ ನಿಂತರೂ ಕುಂತರೂ ಪುನೀತ್ ಅವರ ಜಪ ಮಾಡುತ್ತಿದ್ದಾರೆ. ಅವರು ಎಲ್ಲೇ ಇರಲಿ ಹೇಗೆ ಇರಲಿ ನಮ್ಮ ಮನಸ್ಸಿನಲ್ಲಿ ಸದಾ ಅಜರಾಮರ ಅನ್ನುತ್ತಿದ್ದಾರೆ. ಈ ಮೂಲಕ ಪುನೀತ್ ಸಾವಿನ ದುಃಖದ ಮಡುವಿನಲ್ಲೂ ಪ್ರತಿ ಹೆಜ್ಜೆಗೂ ಪುನೀತ್ ಅವರ ಆದರ್ಶಗಳನ್ನು ಪಾಲಿಸಲಾಗುತ್ತಿದೆ.
ಇನ್ನು ಪುನೀತ್ ಅಗಲಿಕೆಯ ನೆನಪಿನಲ್ಲಿ ಕೆಲವರು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದಾರೆ. ಅದರಲ್ಲಿಯೂ ಹೃದಯ ಸಂಬಂಧಿ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗುತ್ತಿದೆ.