Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಹ್ಯಾಟ್ರಿಕ್ ಹೀರೋ ಒಬ್ರೆ ಅದು ಶಿವರಾಜ್ ಕುಮಾರ್''- ದರ್ಶನ್
ಇತ್ತೀಚಿಗಷ್ಟೆ ಹೊಸ ಸಿನಿಮಾವೊಂದರ ಮುಹೂರ್ತ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ದರ್ಶನ್ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಣ್ಣ ತಮಾಷೆ ಮಾಡುತ್ತಾ ದರ್ಶನ್ ಅವರಿಗೆ ಸ್ವೀಟ್ ತಿನ್ನಿಸಿದ್ದರು. ಈ ವಿಡಿಯೋ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಅದರ ನಂತರ ಇದೀಗ ಶಿವರಾಜ್ ಕುಮಾರ್ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
''ಹ್ಯಾಟ್ರಿಕ್ ಹೀರೋ ಒಬ್ರೆ ಅದು ಶಿವರಾಜ್ ಕುಮಾರ್'' ಎಂದು ಡಿ ಬಾಸ್ ದರ್ಶನ್ ಹೇಳಿದ್ದಾರೆ. 'ಒಡೆಯ' ಸಿನಿಮಾದ ಪ್ರೆಸ್ ಮೀಟ್ ನಲ್ಲಿ ಈ ಮಾತು ದರ್ಶನ್ ಬಾಯಿಂದ ಬಂದಿದೆ. ಈ ವರ್ಷ ಹ್ಯಾಟ್ರಿಕ್ ಸಿನಿಮಾ ನೀಡುತ್ತಿದ್ದೀರಿ ಎಂದಾಗ ತಮಗೆ ಹೇಳಿದಾಗ ನಾನಲ್ಲ ಶಿವಣ್ಣ ಹ್ಯಾಟ್ರಿಕ್ ಹೀರೋ ಎಂದು ದರ್ಶನ್ ಹೇಳಿದರು.
ಮಕ್ಕಳಿಗೂ ಕೇಳಿರದ ಸಹಾಯವನ್ನು 'ಒಡೆಯ' ನಿರ್ಮಾಪಕರಿಗೆ ಕೇಳಿದರು ದರ್ಶನ್ ತಾಯಿ
ಈ ವರ್ಷ ದರ್ಶನ್ ನಟನೆಯ ಮೂರನೇ ಸಿನಿಮಾ ಬಿಡುಗಡೆ ಆಗುತ್ತಿದೆ. 'ಕುರುಕ್ಷೇತ್ರ', 'ಯಜಮಾನ' ಎರಡೂ ಸಿನಿಮಾಗಳು ನೂರು ದಿನ ಪ್ರದರ್ಶನ ಕಂಡಿವೆ. ಹೀಗಾಗಿ, 'ಒಡೆಯ' ಹಿಟ್ ಆದ್ರೆ, ದರ್ಶನ್ ಹ್ಯಾಟ್ರಿಕ್ ಬಾರಿಸುತ್ತಾರೆ.
ನಾನು ಅದೇ ಸ್ಪೀಡ್ ನಲ್ಲಿ ಸಿನಿಮಾ ಮಾಡುತ್ತಿದ್ದೇನೆ. 'ಕುರುಕ್ಷೇತ್ರ' ಸಿನಿಮಾ ಈ ವರ್ಷ ಬಿಡುಗಡೆಯಾದ ಕಾರಣ ಮೂರು ಸಿನಿಮಾ ಆಗಿವೆ. ಹಾಗೆ ನೋಡಿದರೆ, ಕಳೆದ ವರ್ಷ ನನ್ನ ಯಾವ ಸಿನಿಮಾ ಬಿಡುಗಡೆಯೇ ಆಗಿಲ್ಲ ಎಂದು ನಕ್ಕರು ದರ್ಶನ್.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
ಅಂದಹಾಗೆ, ದರ್ಶನ್ ಅಭಿನಯದ 'ಒಡೆಯ' ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗುತ್ತಿದೆ. ಎಂ ಡಿ ಶ್ರೀಧರ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. ಸನಾ ತಿಮ್ಮಯ್ಯ ನಾಯಕಿ ಆಗಿದ್ದಾರೆ.