Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಿ ವಿಲನ್' ಬಿಡುಗಡೆ: ನರ್ತಕಿ ಚಿತ್ರಮಂದಿರದಲ್ಲಿ ನಿರ್ದೇಶಕ ಪ್ರೇಮ್ ಆಕ್ರೋಶ
Recommended Video
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ 'ದಿ ವಿಲನ್' ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ನಿನ್ನೆ ಮಧ್ಯರಾತ್ರಿಯಿಂದಲೇ 'ದಿ ವಿಲನ್' ಪ್ರದರ್ಶನ ಆರಂಭಗೊಂಡಿದೆ.
ಎಲ್ಲೆಡೆ 'ದಿ ವಿಲನ್' ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹೀಗಿರುವಾಗಲೇ, ನಿರ್ದೇಶಕ ಪ್ರೇಮ್ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಇಂದು ಬೆಳಗ್ಗೆ 6 ಗಂಟೆಗೆ ಮೊದಲ ಶೋ ಆರಂಭ ಆಯ್ತು.
'ವಿಲನ್' ಮೊದಲ ರಿವ್ಯೂ: ಫಸ್ಟ್ ಹಾಫ್ ಚಿಂದಿ, ಸೆಕೆಂಡ್ ಹಾಫ್.?
ಆರಂಭದಿಂದಲೇ ಥಿಯೇಟರ್ ನಲ್ಲಿ ಸೌಂಡ್ ಸಮಸ್ಯೆ ಎದುರಾಯಿತು. ಇದರಿಂದ ಅಭಿಮಾನಿಗಳು ನಿರಾಸೆಗೊಂಡರು. ಚಿತ್ರಮಂದಿರ ವ್ಯವಸ್ಥಾಪಕರು ಹಾಗೂ ಮಾಲೀಕರ ವಿರುದ್ಧ ನಿರ್ದೇಶಕ ಪ್ರೇಮ್ ಕೋಪಗೊಂಡರು. ಸೌಂಡ್ ಸಮಸ್ಯೆ ಇದ್ದರೂ, ಚಿತ್ರಮಂದಿರದ ಸೌಂಡ್ ಎಂಜಿನಿಯರ್ ಪತ್ತೆ ಆಗಲಿಲ್ಲ. ಹೀಗಾಗಿ ಪ್ರೇಮ್ ಸಿಡಿಮಿಡಿಗೊಂಡರು.
''ಪ್ರಪಂಚದ ದೊಡ್ಡ ಎಂಜಿನಿಯರ್ ಗಳು ಚಿತ್ರಕ್ಕೆ ಸೌಂಡ್ ಮಿಕ್ಸ್ ಮಾಡಿದ್ದಾರೆ. ಸಿನಿಮಾದಲ್ಲಿ ಥ್ರಿಲ್ಲೇ ಸೌಂಡ್. ಇವರೆಲ್ಲ ಥಿಯೇಟರ್ ನ ಏನು ಮೇನ್ಟೇನ್ ಮಾಡ್ತಾರೆ ಅನ್ನೋದೇ ಗೊತ್ತಾಗಲ್ಲ. ಸೌಂಡ್ ಸಮಸ್ಯೆ ಎದುರಾದಾಗಲೇ ಚಿತ್ರ ನಿಲ್ಲಿಸೋಣ ಎಂದುಕೊಂಡೆ. ಆದ್ರೆ, ಅಭಿಮಾನಿಗಳು ನಿರಾಸೆ ಆಗ್ತಾರೆ ಅಂತ ಸುಮ್ಮನಿದ್ದೀನಿ'' ಎಂದು ಮಾಧ್ಯಮಗಳ ಮುಂದೆ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದರು.