Don't Miss!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಕೈಯಲ್ಲಿರುವ ಈ ಬ್ರೇಸ್ಲೆಟ್ ಹಿಂದಿದೆ ಒಂದು ಇಂಟ್ರೆಸ್ಟಿಂಗ್ ಕಥೆ.!
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇದೀಗ 'ನಟ ಸಾರ್ವಭೌಮ' ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ. 'ರಣ ವಿಕ್ರಮ' ಬಳಿಕ ಪವನ್ ಒಡೆಯರ್ ಹಾಗೂ ಪುನೀತ್ ರಾಜ್ ಕುಮಾರ್ ಒಂದಾಗಿರುವುದು ಈ ಚಿತ್ರದಲ್ಲಿಯೇ.!
'ನಟ ಸಾರ್ವಭೌಮ' ಚಿತ್ರದಲ್ಲಿ ಫೋಟೋ ಜರ್ನಲಿಸ್ಟ್ ಆಗಿ ಪುನೀತ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಅಂದ್ಮೇಲೆ, ಅಪ್ಪು ಕೈಯಲ್ಲಿ ಸದಾ ಕ್ಯಾಮರಾ ಇರಲೇಬೇಕು. ಆದ್ರೆ, ಪವನ್ ಒಡೆಯರ್ ಈಗ ಬಿಡುಗಡೆ ಮಾಡಿರುವ 'ನಟ ಸಾರ್ವಭೌಮ' ಚಿತ್ರದ ಹೊಸ ಫೋಟೋ ನೋಡಿದ್ರೆ, ಅಪ್ಪು ಕೈಯಲ್ಲಿ ಬೇರೇನೋ ಇದೆ.!
'ನಟ ಸಾರ್ವಭೌಮ' ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾತ್ರವೇನು.?
ಅಷ್ಟಕ್ಕೂ, ಅಪ್ಪು ಕೈಯಲ್ಲಿ ಇರುವುದು ಕಪ್ಪು ದಾರದಿಂದ ಸಿದ್ಧಪಡಿಸಿರುವ ಬ್ರೇಸ್ಲೆಟ್ ಅಥವಾ ಲಕ್ಕಿ ಚಾರ್ಮ್. ಇದರ ಬಗ್ಗೆ ಡೈರೆಕ್ಟರ್ ಪವನ್ ಒಡೆಯರ್ ರನ್ನ ಕೇಳಿದರೆ, ಅದರ ಹಿಂದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿಯೇ ಇದೆ ಅಂತಾರೆ.
ಬ್ರೇಸ್ಲೆಟ್ ಅಥವಾ ಲಕ್ಕಿ ಚಾರ್ಮ್ ಕೇವಲ ಹೀರೋ ಪುನೀತ್ ರಾಜ್ ಕುಮಾರ್ ಲುಕ್ ಗಾಗಿ ತಯಾರು ಮಾಡಿರುವುದರಲ್ಲ. 'ನಟ ಸಾರ್ವಭೌಮ' ಚಿತ್ರದಲ್ಲಿ ಈ ಬ್ರೇಸ್ಲೆಟ್ ಹಿಂದೆ ಒಂದು ಕಥೆ ಇರುತ್ತದೆ. ಚಿತ್ರದಲ್ಲಿ ಆ ಬ್ರೇಸ್ಲೆಟ್ ಗೆ ಪ್ರಾಮುಖ್ಯತೆ ಇದೆ ಎನ್ನುತ್ತಾರೆ ನಿರ್ದೇಶಕ ಪವನ್ ಒಡೆಯರ್.
ಸದ್ಯ ಬೆಂಗಳೂರು ಹಾಗೂ ಮೈಸೂರು ಸುತ್ತ-ಮುತ್ತ 'ನಟ ಸಾರ್ವಭೌಮ' ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಮುಂದಿನ ಹಂತದ ಚಿತ್ರೀಕರಣ ಬಳ್ಳಾರಿಯಲ್ಲಿ ನಡೆಯಲಿದೆ. ಅಂದ್ಹಾಗೆ, ಈ ಚಿತ್ರದಲ್ಲಿ ಅಪ್ಪುಗೆ ರಚಿತಾ ರಾಮ್ ನಾಯಕಿ ಆಗಿದ್ದಾರೆ.