Don't Miss!
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Automobiles ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- Sports IPL 2024: ಮುಂಬೈ ಇಂಡಿಯನ್ಸ್ಗೆ ಭಾರೀ ಹಿನ್ನಡೆ; ಹಾರ್ಟ್ಬ್ರೇಕ್ ಪೋಸ್ಟ್ ಮಾಡಿದ ಸೂರ್ಯಕುಮಾರ್
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಕೈಯಲ್ಲಿರುವ ಈ ಬ್ರೇಸ್ಲೆಟ್ ಹಿಂದಿದೆ ಒಂದು ಇಂಟ್ರೆಸ್ಟಿಂಗ್ ಕಥೆ.!
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇದೀಗ 'ನಟ ಸಾರ್ವಭೌಮ' ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ. 'ರಣ ವಿಕ್ರಮ' ಬಳಿಕ ಪವನ್ ಒಡೆಯರ್ ಹಾಗೂ ಪುನೀತ್ ರಾಜ್ ಕುಮಾರ್ ಒಂದಾಗಿರುವುದು ಈ ಚಿತ್ರದಲ್ಲಿಯೇ.!
'ನಟ ಸಾರ್ವಭೌಮ' ಚಿತ್ರದಲ್ಲಿ ಫೋಟೋ ಜರ್ನಲಿಸ್ಟ್ ಆಗಿ ಪುನೀತ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಅಂದ್ಮೇಲೆ, ಅಪ್ಪು ಕೈಯಲ್ಲಿ ಸದಾ ಕ್ಯಾಮರಾ ಇರಲೇಬೇಕು. ಆದ್ರೆ, ಪವನ್ ಒಡೆಯರ್ ಈಗ ಬಿಡುಗಡೆ ಮಾಡಿರುವ 'ನಟ ಸಾರ್ವಭೌಮ' ಚಿತ್ರದ ಹೊಸ ಫೋಟೋ ನೋಡಿದ್ರೆ, ಅಪ್ಪು ಕೈಯಲ್ಲಿ ಬೇರೇನೋ ಇದೆ.!
'ನಟ ಸಾರ್ವಭೌಮ' ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾತ್ರವೇನು.?
ಅಷ್ಟಕ್ಕೂ, ಅಪ್ಪು ಕೈಯಲ್ಲಿ ಇರುವುದು ಕಪ್ಪು ದಾರದಿಂದ ಸಿದ್ಧಪಡಿಸಿರುವ ಬ್ರೇಸ್ಲೆಟ್ ಅಥವಾ ಲಕ್ಕಿ ಚಾರ್ಮ್. ಇದರ ಬಗ್ಗೆ ಡೈರೆಕ್ಟರ್ ಪವನ್ ಒಡೆಯರ್ ರನ್ನ ಕೇಳಿದರೆ, ಅದರ ಹಿಂದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿಯೇ ಇದೆ ಅಂತಾರೆ.
ಬ್ರೇಸ್ಲೆಟ್ ಅಥವಾ ಲಕ್ಕಿ ಚಾರ್ಮ್ ಕೇವಲ ಹೀರೋ ಪುನೀತ್ ರಾಜ್ ಕುಮಾರ್ ಲುಕ್ ಗಾಗಿ ತಯಾರು ಮಾಡಿರುವುದರಲ್ಲ. 'ನಟ ಸಾರ್ವಭೌಮ' ಚಿತ್ರದಲ್ಲಿ ಈ ಬ್ರೇಸ್ಲೆಟ್ ಹಿಂದೆ ಒಂದು ಕಥೆ ಇರುತ್ತದೆ. ಚಿತ್ರದಲ್ಲಿ ಆ ಬ್ರೇಸ್ಲೆಟ್ ಗೆ ಪ್ರಾಮುಖ್ಯತೆ ಇದೆ ಎನ್ನುತ್ತಾರೆ ನಿರ್ದೇಶಕ ಪವನ್ ಒಡೆಯರ್.
ಸದ್ಯ ಬೆಂಗಳೂರು ಹಾಗೂ ಮೈಸೂರು ಸುತ್ತ-ಮುತ್ತ 'ನಟ ಸಾರ್ವಭೌಮ' ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಮುಂದಿನ ಹಂತದ ಚಿತ್ರೀಕರಣ ಬಳ್ಳಾರಿಯಲ್ಲಿ ನಡೆಯಲಿದೆ. ಅಂದ್ಹಾಗೆ, ಈ ಚಿತ್ರದಲ್ಲಿ ಅಪ್ಪುಗೆ ರಚಿತಾ ರಾಮ್ ನಾಯಕಿ ಆಗಿದ್ದಾರೆ.