Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಎಂಬುದು ಮೆಡಿಕಲ್ ಮಾಫಿಯಾ, ನಾನು ವ್ಯಾಕ್ಸಿನ್ ತಗೊಂಡಿಲ್ಲ: ಅಗ್ನಿ ಶ್ರೀಧರ್
ಕೊರೊನಾ ಎಂಬ ಕಾಯಿಲೆ ಬಗ್ಗೆ ಆರಂಭದಿಂದಲೂ ಹಲವರು ಅನುಮಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಇದು ಲ್ಯಾಬ್ನಲ್ಲಿ ಸೃಷ್ಟಿಸಲಾದ ವೈರಸ್ ಎಂದು ಕೆಲವರು ವಾದಿಸಿದರು, ಮೆಡಿಕಲ್ ಮಾಫಿಯಾಗಳು ಹಣ ಮಾಡಿಕೊಳ್ಳಲು ಸುಖಾ ಸುಮ್ಮನೆ ಕೊರೊನಾ ಭೀತಿ ಹರಡಿಸುತ್ತಿವೆ ಎಂಬ ಮಾತುಗಳೂ ಅಲ್ಲಲ್ಲಿ ಕೇಳಿ ಬರುತ್ತಲೇ ಇದೆ.
ಇದೀಗ ಚಿತ್ರಕತೆ ಬರಹಗಾರ ಅಗ್ನಿ ಶ್ರೀಧರ್ ಅವರು ಕೊರೊನಾ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ''ಕೋವಿಡ್ ಎಂಬುದು ಇಲ್ಲ, ಇದು ಕೇವಲ ಮೆಡಿಕಲ್ ಮಾಫಿಯಾ'' ಎಂದಿದ್ದಾರೆ.
'ಕ್ರೀಂ' ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ವೈದ್ಯಕೀಯ ವಿಭಾಗದವರು ಹಣ ಮಾಡಿಕೊಳ್ಳಲು ಕೊರೊನಾದ ಭೀತಿ ಹಬ್ಬಿಸಿದ್ದಾರೆ. ನಾನು ಈವರೆಗೆ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನನ್ನ ಕುಟುಂಬವರೂ ಸಹ ವ್ಯಾಕ್ಸಿನ್ ತೆಗೆದುಕೊಂಡಿಲ್ಲ'' ಎಂದರು.
ಕೊರೊನಾ ಲಾಕ್ಡೌನ್ ಇನ್ನಿತರೆಗಳಿಂದ ರಾಜಕಾರಣಿಗಳು ತಳವರ್ಗದವರನ್ನು ಬದುಕಿರುವಾಗಲೆ ಕೊಂದಿದ್ದಾರೆ. ಇತ್ತೀಚೆಗೆ ನಾನು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾಗಲೂ ಇದೇ ಮಾತುಗಳನ್ನು ಹೇಳಿದ್ದೆ'' ಎಂದರು.
''ಶೇ. 60 ವೈದ್ಯರು ಈ ವರೆಗೆ ಕೊರೊನಾ ಲಸಿಕೆ ಪಡೆದಿಲ್ಲ. ಇದು ಸತ್ಯ. ಯಾರೂ ಕೊವಿಡ್ನಿಂದ ಸತ್ತಿಲ್ಲ. ಸತ್ತ ವ್ಯಕ್ತಿಯಲ್ಲಿ ನೂರಾರು ವೈರಸ್ ಇದೆ. ಇದನ್ನು ಹೈಲೈಟ್ ಮಾಡಲಾಗಿದೆ. ಇದು ನನ್ನ ಅಭಿಪ್ರಾಯ'' ಎಂದು ಅಗ್ನಿ ಶ್ರೀಧರ್ ಹೇಳಿದ್ದಾರೆ.
ರಾಜಕಾರಣಿಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಅಗ್ನಿ ಶ್ರೀಧರ್, ''ಕೆಜಿಎಫ್ 2' ಸಿನಿಮಾ ಮುಗಿಸಿ ಎರಡು ವರ್ಷಗಳಾಗಿದೆ. ನೂರಾರು ಕೋಟಿ ಬಂಡವಾಳ ಹೂಡಿ ಎರಡು ವರ್ಷದಿಂದ ಸುಮ್ಮನೆ ಇಟ್ಟುಕೊಂಡಿರುವುದೆಂದರೆ ಸಾಮಾನ್ಯವೇ. ಈ ರಾಜಕಾರಣಿಗಳು ತಮಗೆ ಬೇಕಾದಾಗ ಅನ್ಲಾಕ್ ಮಾಡುತ್ತಾರೆ. ರಾಜಕೀಯ ಸಭೆ, ಮೋಜು ಮಸ್ತಿ ಮಾಡುತ್ತಾರೆ. ಸಿನಿಮಾ ಬಿಡುಗಡೆ ಎಂದ ಕೂಡಲೇ ಕೊರೊನಾ ಭೀತಿ ಎನ್ನುತ್ತಾರೆ. ಇವರೆಲ್ಲ ಕೊಳಕು ಜನ, ದುಷ್ಟ ಜನ'' ಎಂದು ಅಗ್ನಿ ಶ್ರೀಧರ್ ಹೇಳಿದ್ದಾರೆ.