Don't Miss!
- News
ಬೆಂಗಳೂರಿನಲ್ಲಿ ಇಂದು ಬುಧವಾರ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
- Lifestyle
ಪ್ಲಾಸ್ಟಿಕ್ ಸರ್ಜರಿ ಕುರಿತ 10 ಆಸಕ್ತಿಕರ ಸಂಗತಿಗಳು
- Sports
ಟಿ20 ಕ್ರಿಕೆಟ್ನಲ್ಲಿ 250 ವಿಕೆಟ್ ಪಡೆದ ಬುಮ್ರಾ: ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್
- Finance
ಮೇ 17ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Automobiles
ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು ಮಾಹಿತಿ ಬಹಿರಂಗ: 528 ಕಿ.ಮೀ ರೇಂಜ್, ಅಲ್ಟ್ರಾ-ಫಾಸ್ಟ್ ಚಾರ್ಜಿಂಗ್
- Technology
ಅಪೆಕ್ಸ್ ಲೆಜೆಂಡ್ಸ್ ಮೊಬೈಲ್ ಗೇಮ್ ಬಿಡುಗಡೆ! ಡೌನ್ಲೋಡ್ ಮಾಡುವುದು ಹೇಗೆ?
- Education
Oil India Recruitment 2022 : 16 ನರ್ಸಿಂಗ್ ಟ್ಯೂಟರ್ ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೊರೊನಾ ಎಂಬುದು ಮೆಡಿಕಲ್ ಮಾಫಿಯಾ, ನಾನು ವ್ಯಾಕ್ಸಿನ್ ತಗೊಂಡಿಲ್ಲ: ಅಗ್ನಿ ಶ್ರೀಧರ್
ಕೊರೊನಾ ಎಂಬ ಕಾಯಿಲೆ ಬಗ್ಗೆ ಆರಂಭದಿಂದಲೂ ಹಲವರು ಅನುಮಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಇದು ಲ್ಯಾಬ್ನಲ್ಲಿ ಸೃಷ್ಟಿಸಲಾದ ವೈರಸ್ ಎಂದು ಕೆಲವರು ವಾದಿಸಿದರು, ಮೆಡಿಕಲ್ ಮಾಫಿಯಾಗಳು ಹಣ ಮಾಡಿಕೊಳ್ಳಲು ಸುಖಾ ಸುಮ್ಮನೆ ಕೊರೊನಾ ಭೀತಿ ಹರಡಿಸುತ್ತಿವೆ ಎಂಬ ಮಾತುಗಳೂ ಅಲ್ಲಲ್ಲಿ ಕೇಳಿ ಬರುತ್ತಲೇ ಇದೆ.
ಇದೀಗ ಚಿತ್ರಕತೆ ಬರಹಗಾರ ಅಗ್ನಿ ಶ್ರೀಧರ್ ಅವರು ಕೊರೊನಾ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ''ಕೋವಿಡ್ ಎಂಬುದು ಇಲ್ಲ, ಇದು ಕೇವಲ ಮೆಡಿಕಲ್ ಮಾಫಿಯಾ'' ಎಂದಿದ್ದಾರೆ.
'ಕ್ರೀಂ' ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ವೈದ್ಯಕೀಯ ವಿಭಾಗದವರು ಹಣ ಮಾಡಿಕೊಳ್ಳಲು ಕೊರೊನಾದ ಭೀತಿ ಹಬ್ಬಿಸಿದ್ದಾರೆ. ನಾನು ಈವರೆಗೆ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನನ್ನ ಕುಟುಂಬವರೂ ಸಹ ವ್ಯಾಕ್ಸಿನ್ ತೆಗೆದುಕೊಂಡಿಲ್ಲ'' ಎಂದರು.
ಕೊರೊನಾ ಲಾಕ್ಡೌನ್ ಇನ್ನಿತರೆಗಳಿಂದ ರಾಜಕಾರಣಿಗಳು ತಳವರ್ಗದವರನ್ನು ಬದುಕಿರುವಾಗಲೆ ಕೊಂದಿದ್ದಾರೆ. ಇತ್ತೀಚೆಗೆ ನಾನು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾಗಲೂ ಇದೇ ಮಾತುಗಳನ್ನು ಹೇಳಿದ್ದೆ'' ಎಂದರು.
''ಶೇ. 60 ವೈದ್ಯರು ಈ ವರೆಗೆ ಕೊರೊನಾ ಲಸಿಕೆ ಪಡೆದಿಲ್ಲ. ಇದು ಸತ್ಯ. ಯಾರೂ ಕೊವಿಡ್ನಿಂದ ಸತ್ತಿಲ್ಲ. ಸತ್ತ ವ್ಯಕ್ತಿಯಲ್ಲಿ ನೂರಾರು ವೈರಸ್ ಇದೆ. ಇದನ್ನು ಹೈಲೈಟ್ ಮಾಡಲಾಗಿದೆ. ಇದು ನನ್ನ ಅಭಿಪ್ರಾಯ'' ಎಂದು ಅಗ್ನಿ ಶ್ರೀಧರ್ ಹೇಳಿದ್ದಾರೆ.
ರಾಜಕಾರಣಿಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಅಗ್ನಿ ಶ್ರೀಧರ್, ''ಕೆಜಿಎಫ್ 2' ಸಿನಿಮಾ ಮುಗಿಸಿ ಎರಡು ವರ್ಷಗಳಾಗಿದೆ. ನೂರಾರು ಕೋಟಿ ಬಂಡವಾಳ ಹೂಡಿ ಎರಡು ವರ್ಷದಿಂದ ಸುಮ್ಮನೆ ಇಟ್ಟುಕೊಂಡಿರುವುದೆಂದರೆ ಸಾಮಾನ್ಯವೇ. ಈ ರಾಜಕಾರಣಿಗಳು ತಮಗೆ ಬೇಕಾದಾಗ ಅನ್ಲಾಕ್ ಮಾಡುತ್ತಾರೆ. ರಾಜಕೀಯ ಸಭೆ, ಮೋಜು ಮಸ್ತಿ ಮಾಡುತ್ತಾರೆ. ಸಿನಿಮಾ ಬಿಡುಗಡೆ ಎಂದ ಕೂಡಲೇ ಕೊರೊನಾ ಭೀತಿ ಎನ್ನುತ್ತಾರೆ. ಇವರೆಲ್ಲ ಕೊಳಕು ಜನ, ದುಷ್ಟ ಜನ'' ಎಂದು ಅಗ್ನಿ ಶ್ರೀಧರ್ ಹೇಳಿದ್ದಾರೆ.