Don't Miss!
- News Chamarajanagar Lok Sabha Constituency: ಕೈ-ಕಮಲ ನಡುವೆ ಸಮರ-ಗೆಲ್ಲೋರಾರು?, ಅಭ್ಯರ್ಥಿಗಳ ಪ್ಲಸ್-ಮೈನಸ್ ಅಂಶಗಳು ಇಲ್ಲಿವೆ
- Finance ಈ ಎರಡು ದೇಶಗಳಿಗೆ ತಲಾ 10,000 ಟನ್ ಈರುಳ್ಳಿ ರಫ್ತು ಮಾಡಲು ಭಾರತ ಅನುಮತಿ
- Lifestyle ಶ್ರೀರಾಮನ ಸ್ಮರ್ಶಿಸಿದ ಸೂರ್ಯ ರಶ್ಮಿ..! 'ಸೂರ್ಯ ತಿಲಕ'ದ ಪ್ರಯೋಗ ಯಶಸ್ವಿ
- Automobiles ರಾಯಲ್ ಎನ್ಫೀಲ್ಡ್ ಬೈಕಿಗೆ ನಡುಕ ಹುಟ್ಟುಸಿದ ಹೀರೋ ಬೈಕ್ ವಿತರಣೆ ಪ್ರಾರಂಭ: ರಸ್ತೆಗಿಳಿದು ಅಬ್ಬರಿಸುತ್ತಾ?
- Sports ರೋಹಿತ್ ಮಾತನ್ನು ಗಂಭೀರವಾಗಿ ತೆಗೆದುಕೊಂಡ ದಿನೇಶ್ ಕಾರ್ತಿಕ್; ಟಿ20 ವಿಶ್ವಕಪ್ಗೆ ಆಯ್ಕೆ ಪಕ್ಕಾನಾ?
- Technology ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಗಳು ಜಾನಕಿ' ಧಾರಾವಾಹಿ ನಟಿ ನಿಧನ : ದಿಗ್ಭ್ರಮೆಗೊಂಡ ಸೀತಾರಾಮ್
Recommended Video
'ಮಗಳು ಜಾನಕಿ' ಧಾರಾವಾಹಿಯ ನಟಿ ಶೋಭಾ ನಿನ್ನೆ (ಜುಲೈ 17) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಚಿತ್ರದುರ್ಗದ ಬಳಿ ಈ ದುರ್ಗಟನೆ ನಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ 'ಮಗಳು ಜಾನಕಿ' ಖ್ಯಾತಿಯ ನಟಿ ಶೋಭಾ
ಶೋಭಾ ಅವರ ನಿಧನಕ್ಕೆ ಧಾರಾವಾಹಿಯ ನಿರ್ದೇಶಕ ಟಿ ಎನ್ ಸೀತಾರಾಮ್ ಸಂತಾಪ ಸೂಚಿಸಿದ್ದಾರೆ. ''ಮಗಳು ಜಾನಕಿ ಯಲ್ಲಿ ಮಂಗಳಕ್ಕನ ಪಾತ್ರ ಮಾಡುತ್ತಿದ್ದ ಶೋಭಾ, ರಸ್ತೆ ಅಪಘಾತ ದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಸದಾ ನಗುಮುಖದ, ಅಪಾರ ಪ್ರತಿಭೆಯ, ಸೌಜನ್ಯ ತುಂಬಿದ ಮಂಗಳಕ್ಕನ ಅನಿರೀಕ್ಷಿತ ಸಾವು ನನ್ನನ್ನು ದಿಗ್ಭ್ರಮೆ ಗೊಳಿಸಿದೆ ತಂಡದ ಪರವಾಗಿ ತೀವ್ರ ಸಂತಾಪಗಳು'' ಎಂದು ಫೇಸ್ ಬುಕ್ ಖಾತೆಯ ಮೂಲಕ ನಮನ ಸಲ್ಲಿಸಿದ್ದಾರೆ.
ನಿನ್ನೆ ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4 ಕುಂಚಿಗನಾಳು ಗ್ರಾಮದ ಬಳಿ ಪ್ರಯಾಣ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಎಂಟು ಮಂದಿ ಇದ್ದರು ಎಂದು ಪೋಲಿಸ್ ಮೂಲಗಳು ತಿಳಿಸಿವೆ.ಅಪಘಾತದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತತ ಭೀಕರತೆಗೆ ಇನೋವಾ ಕಾರು ಪೂರ್ತಿ ಜಖಂ ಆಗಿದೆ.
ಇನ್ನು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಮಗಳು ಜಾನಕಿ' ಜಾನಕಿ ಧಾರಾವಾಹಿಯಲ್ಲಿ ಮಂಗಳ ಪಾತ್ರವನ್ನು ಶೋಭಾ ನಿರ್ವಹಿಸುತ್ತಿದ್ದರು.