Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ನಡೆಯಲಿದೆ ಹರಿಕೃಷ್ಣ ಮೃತದೇಹದ ಅಂತ್ಯಕ್ರಿಯೆ
Recommended Video
ಭೀಕರ ರಸ್ತೆ ಅಪಘಾತದಲ್ಲಿ ನಿನ್ನೆ ನಿಧನರಾದ ಟಾಲಿವುಡ್ ನಟ ಹರಿಕೃಷ್ಣ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಫಿಲ್ಮ್ ನಗರದ ಮಹಾಪ್ರಸ್ಥಾನಂ ನಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ.
ಸದ್ಯ ಹರಿಕೃಷ್ಣ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗಿದೆ. ಮಧ್ಯಾಹ್ನ 1.30 ರವರೆಗೆ ಅಂತಿಮ ದರ್ಶನ ನಡೆಯುತ್ತದೆ. ಆ ಬಳಿಕ ಪಾರ್ಥಿವ ಶರೀರ ಮೆರವಣಿಗೆ ಮಾಡಲಾಗುತ್ತದೆ. ಹರಿಕೃಷ್ಣ ಅವರ ನಿವಾಸದಿಂದ ಫಿಲ್ಮ್ ನಗರಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ.
ನಂದಮೂರಿ ಹರಿಕೃಷ್ಣ ದುರ್ಮರಣಕ್ಕೆ ದಿಗ್ಭ್ರಮೆ ವ್ಯಕ್ತಪಡಿಸಿದ ತಾರೆಯರು
ಹರಿಕೃಷ್ಣ ಅವರ ಅಂತಿಮ ದರ್ಶನ ಪಡೆಯಲು ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಚಿತ್ರರಂಗ ಗಣ್ಯರು ಹಾಗೂ ರಾಜಕೀಯ ಗಣ್ಯರು ಕೂಡ ಅಗಲಿದ ನಾಯಕನಿಗೆ ನಮನ ಸಲ್ಲಿಸಿದ್ದಾರೆ.
ಅಭಿಮಾನಿಗಳ ಸಂಖ್ಯೆ ಹೆಚ್ಚಿದ್ದು, ಮೆರವಣಿಗೆಯ ಮಾರ್ಗದುದ್ದಕ್ಕೂ ಪೊಲೀಸರ ನಿಯೋಜನೆ ಮಾಡಲಾಗಿದೆ. ಮೆಹದಿ ಪಟ್ಟಣಕ್ಕೆ ಹೋಗುವ ರಸ್ತೆಯಲ್ಲಿ ಸಂಪೂರ್ಣ ಸಂಚಾರವನ್ನು ಬಂದ್ ಮಾಡಲಾಗಿದೆ.
ಎನ್.ಟಿ.ಆರ್ ಮನೆಯಲ್ಲಿ ಇದು ಮೂರನೇ ದುರಂತ: ಅಂದು ಜಸ್ಟ್ ಮಿಸ್ ಆಗಿದ್ರು ಯಂಗ್ ಟೈಗರ್.!
ಅಂದಹಾಗೆ, ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು ನಿನ್ನೆ ಬೆಳಗಿನ ಜಾವ 4.30ರ ಸಮಯದಲ್ಲಿ ಹರಿಕೃಷ್ಣ ಅವರು ಮನೆಯಿಂದ ಹೊರಟಿದ್ದರು. ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.