Don't Miss!
- News ನೇಹಾ ಹಿರೇಮಠ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ನಂತರ ಪುನೀತ್ ಜೊತೆಗೆ ಸೆಣಸಾಡಲು ಬಂದ ಕಾಲಕೇಯ
Recommended Video
ನಟ ಪುನೀತ್ ರಾಜ್ ಕುಮಾರ್ ಅವರ 'ನಟ ಸಾರ್ವಭೌಮ' ಸಿನಿಮಾದ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದೆ. ಆದರೂ ಸಹ ಈಗ ಈ ಚಿತ್ರದ ಒಂದೊಂದೆ ವಿಶೇಷಗಳು ಹೊರ ಬರುತ್ತಿದೆ. ಈಗ ಈ ಚಿತ್ರಕ್ಕೆ ಒಬ್ಬ ಖಳನಟನ ಎಂಟ್ರಿ ಆಗಿದೆ.
'ಬಾಹುಬಲಿ' ಚಿತ್ರದ ಮೂಲಕ ದೊಡ್ಡ ಜನಪ್ರಿಯತೆ ಗಳಿಸಿದ್ದ ನಟ ಪ್ರಭಾಕರ್ ಮತ್ತೊಂದು ಕನ್ನಡ ಸಿನಿಮಾ ಮಾಡುತ್ತಿದ್ದಾರೆ. 'ಬಾಹುಬಲಿ' ಚಿತ್ರದಲ್ಲಿ ಕಾಲಕೇಯ ಎಂಬ ವಿಚಿತ್ರ ಪಾತ್ರವನ್ನು ಮಾಡಿದ್ದ ಪ್ರಭಾಕರ್ ಈಗ ಪುನೀತ್ ರಾಜ್ ಕುಮಾರ್ ಅವರ ಜೊತೆಗೆ ಇದೀಗ 'ನಟ ಸಾರ್ವಭೌಮ' ಚಿತ್ರದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ.
ಬಾಹುಬಲಿ 'ಕಾಲಕೇಯ'ನ ಜೊತೆ ದರ್ಶನ್ ಕಾಳಗ
ತೆಲುಗು ನಟ ಪ್ರಭಾಕರ್ ಅವರು ಈ ಹಿಂದೆ ಆರ್ ಚಂದ್ರು ನಿರ್ದೇಶನಕ 'ಕೋಕೋ' ಮತ್ತು 'ಲಕ್ಷಣ' ಚಿತ್ರದಲ್ಲಿ ನಟಿಸಿದ್ದರು. ದರ್ಶನ್ ಜೊತೆಗೆ 'ಚೌಕ' ಸಿನಿಮಾದಲ್ಲಿ ಫೈಟ್ ಮಾಡಿದ್ದರು. ಅದರ ನಂತರ ಈಗ 'ನಟ ಸಾರ್ವಭೌಮ' ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.
'ನಟ ಸಾರ್ವಭೌಮ' ಪುನೀತ್ ಹಾಗೂ ನಿರ್ದೇಶಕ ಪವನ್ ಒಡೆಯರ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಎರಡನೇ ಸಿನಿಮಾವಾಗಿದೆ. ಚಿತ್ರದಲ್ಲಿ ರಚಿತಾ ರಾಮ್ ನಾಯಕಿ ಆಗಿದ್ದಾರೆ. ರಾಕ್ ಲೈನ್ ವೆಂಕಟೇಶ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗಿದೆ.