Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'RRR' ಸಿನಿಮಾದ ಚಿತ್ರೀಕರಣ ಬಿಟ್ಟು ಕರ್ನಾಟಕಕ್ಕೆ ಬಂದ ನಿರ್ದೇಶಕ ರಾಜಮೌಳಿ
ಟಾಲಿವುಡ್ ನ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಕರ್ನಾಟಕದಲ್ಲಿ ಪ್ರತ್ಯಕ್ಷರಾಗಿದ್ದಾರೆ. 'ಆರ್ ಆರ್ ಆರ್' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಾಜಮೌಳಿ ದಿಢೀರ್ ಕರ್ನಾಟಕದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ಹೌದು, ಖ್ಯಾತ ನಿರ್ದೇಶಕ ರಾಜಮೌಳಿ ಇಂದು (ಸೆಪ್ಟಂಬರ್ 16) ಬೆಳಿಗ್ಗೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ರಾಜಮೌಳಿಯನ್ನು ನೋಡಿ ಪ್ರವಾಸಿಗರು ಅಚ್ಚರಿಯ ಜೊತೆಗೆ ಸಂತಸ ಪಟ್ಟಿದ್ದಾರೆ. ರಾಜಮೌಳಿಗೆ ಪತ್ನಿ ರಮಾ ರಾಜಮೌಳಿ ಸಾಥ್ ನೀಡಿದ್ದಾರೆ. ಬೆಟ್ಟಕ್ಕೆ ಭೇಟಿ ನೀಡಿದ ರಾಜಮೌಳಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಂದೆ ಓದಿ...
ಪ್ರಶಾಂತ್ ನೀಲ್-ಜೂ.ಎನ್ಟಿಆರ್ ಸಿನಿಮಾಕ್ಕೆ ಎದುರಾದ ವಿಘ್ನ?
ಪ್ರಕೃತಿ ಸೌಂದರ್ಯಕ್ಕೆ ಮನಸೋತ ರಾಜಮೌಳಿ ದಂಪತಿ
ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರಕೃತಿ ಸೌಂದರ್ಯಕ್ಕೆ ರಾಜಮೌಳಿ ದಂಪತಿ ಮನಸೋತಿದ್ದಾರೆ. ನಂತರ ಅಲ್ಲಿಂದ ರಾಜಮೌಳಿ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಬಂಡೀಪುರಕ್ಕೂ ಭೇಟಿ ನೀಡಿದ್ದಾರೆ. ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಿದ್ದಾರೆ. ಪ್ರವಾಸವನ್ನು ಸಖತ್ ಎಂಜಾಯ್ ಮಾಡಿದ್ದಾರೆ.
ಅರಣ್ಯ ಸಿಬ್ಬಂದಿ ಜೊತೆ ರಾಜಜೌಳಿ ಮಾತುಕತೆ
ರಾಜಮೌಳಿಯನ್ನು ನೋಡಿ ಅರಣ್ಯ ಸಿಬ್ಬಂದಿ ಸಹ ಸಂತಸಗೊಂಡಿದ್ದಾರೆ. ಸಫಾರಿ ಬಳಿಕ ಬಂಡೀಪುರ ಅರಣ್ಯ ಪ್ರದೇಶದ ಸಿಬ್ಬಂದಿಯೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಅರಣ್ಯ ಸಿಬ್ಬಂದಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ನಂತರ ಅಲ್ಲಿಂದ ಹೈದರಾಬಾದ್ ಗೆ ವಾಪಸ್ ಆಗಿದ್ದಾರೆ.
ಬಾಹುಬಲಿ 'ಮೀರಿಸಲಿರುವ' ಪ್ರಭಾಸ್ ಸಿನಿಮಾ ಬಗ್ಗೆ ರಾಜಮೌಳಿ ಕಮೆಂಟ್ಸ್
ಅರಣ್ಯ ಸಿಬ್ಬಂದಿ ಜೊತೆ ರಾಜಮೌಳಿ
ಈ ಹಿಂದೆ ಅಂದರೆ ಕಳೆದ ತಿಂಗಳು ರಾಜಮೌಳಿ ಕುಟುಂಬ ಕೊರೊನಾ ವೈರಸ್ ಗೆ ತುತ್ತಾಗಿತ್ತು. ಈ ಬಗ್ಗೆ ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು. ಸುಮಾರು 15 ದಿನಗಳಿಗೂ ಹೆಚ್ಚು ಸಮಯ ಹೋಮ್ ಕ್ವಾರಂಟೈನ್ ನಲ್ಲಿದ್ದ ಇಡೀ ರಾಜಮೌಳಿ ಕುಟುಂಬ ಸದ್ಯ ಸಂಪೂರ್ಣವಾಗಿ ಗುಣವಾಗಿದೆ.
Recommended Video
ಆರ್ ಆರ್ ಆರ್ ಸಿನಿಮಾ ಚಿತ್ರೀಕರಣದಲ್ಲಿ ರಾಜಮೌಳಿ
ರಾಜಮೌಳಿ ಸದ್ಯ ‘ಆರ್ಆರ್ಆರ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೂ.ಎನ್ಟಿಆರ್ ಮತ್ತು ರಾಮ್ ಚರಣ್ ನಾಯಕತ್ವದಲ್ಲಿ ಮೂಡಿ ಬರಲಿರುವ ಸಿನಿಮಾ ಇದಾಗಿದ್ದು, ಸದ್ಯ ಕೊರೊನಾ ಹಾವಳಿ ಪರಿಣಾಮ ಚಿತ್ರೀಕರಣ ಸ್ಥಗಿತಗೊಂಡಿದೆ. ಮತ್ತೆ ಚಿತ್ರೀಕರಣಕ್ಕೆ ಹೊರಡಲು ಸಿನಿಮಾತಂಡ ಸಿದ್ಧವಾಗುತ್ತಿದೆ. ಆರ್ ಆರ್ ಆರ್ ಸಿನಿಮಾ ಬಳಿಕ ರಾಜಮೌಳಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬುಗೆ ನಿರ್ದೇಶನ ಮಾಡಲಿದ್ದಾರೆ.