Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಷ್ ಸಂಭ್ರಮಕ್ಕೆ ಸಂಚಾರ ಅದಲು ಬದಲು
ಇಂದು ಮಧ್ಯಾಹ್ನ 2ರಿಂದ ರಾತ್ರಿ 11ತನಕ 'ಅಂಬಿ ಸಂಭ್ರಮ' ಕಾರ್ಯಾಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ರಸ್ತೆಗಳಾದ ರಮಣಮಹರ್ಷಿ ರಸ್ತೆ, ಬಳ್ಳಾರಿ ರಸ್ತೆ, ಜಯಮಹಲ್ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದ್ದು ಪರ್ಯಾಯ ಮಾರ್ಗಗಳಲ್ಲಿ ತೆರಳುವಂತೆ ಸೂಚಿಸಲಾಗಿದೆ.
ಆನೇಕಲ್, ಹೊಸೂರು ರಸ್ತೆ, ಕನಕಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು ರಸ್ತೆಗಳಿಂದ ಬರುವ ಲಘು ಸಾರಿಗೆ ವಾಹನಗಳು, ಲಾರಿಗಳು ಮತ್ತು ಬಸ್ಸುಗಳು ಔಟರ್ ರಿಂಗ್ ರೋಡ್ನಲ್ಲಿ ಬಂದು ಹೆಬ್ಬಾಳ ಫ್ಲೈಓವರ್ ಮುಖಾಂತರ ಮೇಖ್ರಿ ವೃತ್ತದ ಸರ್ವಿಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ಮುಂದೆ ಸಾಗಿ ಅಮಾನುಲ್ಲಾಖಾನ್ ಗೇಟ್ ಮತ್ತು ಸರ್ಕಸ್ ಗ್ರೌಂಡ್ ಗೇಟ್ ಮುಖಾಂತರ ಅರಮನೆ ಮೈದಾನ ಪ್ರವೇಶಿಸಬೇಕು.
ಹೊಸಕೋಟೆ, ಕೋಲಾರದಿಂದ ಬರುವ ಬಸ್ಸು ಮತ್ತು ಟೆಂಪೋಗಳು ಹಳೆ ಮದ್ರಾಸ್ ರಸ್ತೆ, ಕೆನ್ಸಿಂಗ್ಟನ್ ವೃತ್ತ, ಎಂಇಜಿ ಸೆಂಟರ್, ಸೇಂಟ್ ಜಾರ್ಜ್ ರಸ್ತೆ ಮೂಲಕ ನಂದಿದುರ್ಗ ರಸ್ತೆಗೆ ಬಲತಿರುವು ಪಡೆದು ನಂದಿದುರ್ಗ ರಸ್ತೆಯಲ್ಲಿ ಸಾಗಿ ಟಿವಿ ಟವರ್ ಮುಂಭಾಗ ಪ್ರವೇಶಿಸಿ ವಾಹನ ನಿಲುಗಡೆಗೊಳಿಸಬೇಕು.
ನೆಲಮಂಗಲ, ಕುಣಿಗಲ್, ನಾಗಮಂಗಲ, ತುಮಕೂರು ಕಡೆಯಿಂದ ಬರುವಂತಹ ಬಸ್ಸು ಮತ್ತು ಟೆಂಪೋಗಳನ್ನು ಯಶವಂತಪುರ ಮುಖಾಂತರ ಬರುವುದನ್ನು ನಿಷೇಧಿಸಿ ಗೋರುಗುಂಟೆ ಪಾಳ್ಯ ಜಂಕ್ಷನ್ನಲ್ಲಿ ಎಡತಿರುವು ಪಡೆಯಬೇಕು. ಹೊರವರ್ತುಲ ರಸ್ತೆಯಲ್ಲಿ ಹೆಬ್ಬಾಳ ಫ್ಪೈಓವರ್ ಮುಖಾಂತರ ಬಳ್ಳಾರಿ ರಸ್ತೆ ಮೂಲಕ ಸಾಗಿ ಸರ್ಕಸ್ ಗೇಟ್ ಸಮೀಪ ನಿಲ್ಲಿಸಬೇಕು.
ಅಂಬಿ ಸಂಭ್ರಮಕ್ಕಾಗಿ ಅರಮನೆ ಮೈದಾನದಲ್ಲಿ (ಕೃಷ್ಣವಿಹಾರ್) ಅದ್ಧೂರಿ ವೇದಿಕೆ ಸಿದ್ಧವಾಗಿದೆ. ಇಂದು ಸಂಜೆ 6.30ಕ್ಕೆ ಕಾರ್ಯಕ್ರಮ ಶುರುವಾಗಲಿದ್ದು ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ ಕಾರ್ಯಕ್ರಮ ನಡೆಸಿಕೊಡಲಿದೆ.
ಕನ್ನಡ ಚಿತ್ರರಂಗದ ಅಷ್ಟೂ ತಾರೆಗಳು ನರ್ತಿಸಿ, ನಗಿಸಿ ಅಭಿಮಾನಿಗಳಿಗೆ ರಸದೌತಣ ನೀಡಲಿದ್ದಾರೆ. ಈ ಸಾಂಸ್ಕೃತಿಕ ಕಾರ್ಯಕ್ರಮದ ನೇತೃತ್ವವನ್ನು ಎಸ್ ನಾರಾಯಣ್ ಹಾಗೂ ರಾಕ್ ಲೈನ್ ವೆಂಕಟೇಶ್ ವಹಿಸಿಕೊಂಡಿದ್ದಾರೆ. ಸಮಾರಂಭಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುತ್ಸದ್ದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೆ ಅಂಬರೀಷ್ ಅವರು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ, ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಸೇರಿದಂತೆ ಬಹುತೇಕರನ್ನು ಖುದ್ದಾಗಿ ಆಹ್ವಾನಿಸಿದ್ದಾರೆ. ಇವರಲ್ಲಿ ಬಹುತೇಕರು ಸಮಾರಂಭಕ್ಕೆ ಬರುವ ಸಾಧ್ಯತೆಗಳಿವೆ.
ಉಳಿದಂತೆ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ತಾರೆಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ದರ್ಶನ್, ಸುದೀಪ್, ರವಿಚಂದ್ರನ್, ಗಣೇಶ್, ರಮೇಶ್ ಅರವಿಂದ್, ದುನಿಯಾ ವಿಜಯ್, ಪ್ರೇಮ್, ರಮ್ಯಾ, ರಾಧಿಕಾ ಪಂಡಿತ್, ರಾಗಿಣಿ, ಐಂದ್ರಿತಾ ರೇ ಪಟ್ಟಿ ಹೀಗೆಯೇ ಬೆಳೆಯುತ್ತದೆ. (ಏಜೆನ್ಸೀಸ್)