Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ್ ಐ ಚಿತ್ರದ ವಿರುದ್ಧ ಸಿಡಿದೆದ್ದ ಮಂಗಳಮುಖಿಯರು
ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳಿರುವ 'ಐ' ಚಿತ್ರಕ್ಕೆ ವಿವಾದವೊಂದು ಎದುರಾಗಿದೆ. 'ಐ' ಚಿತ್ರದಲ್ಲಿನ ಕೆಲವು ಸನ್ನಿವೇಶಗಳು ತಮ್ಮ ಮನೋಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಮಂಗಳಮುಖಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಐ ಚಿತ್ರದಲ್ಲಿ ಸೆಲೆಬ್ರಿಟಿ ಕೇಶ ವಿನ್ಯಾಸಕನ ಪಾತ್ರದ ಚಿತ್ರೀಕರಣ ತಮ್ಮ ಮನೋಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿರುವ ಅವರು ಚಿತ್ರದ ವಿರುದ್ಧ ಸಿಡಿದಿದ್ದಾರೆ. ಚಿತ್ರದ ನಿರ್ದೇಶಕ ಶಂಕರ್ ಅವರ ಮನೆಯ ಮುಂದೆ ಹಾಗೂ ಸೆನ್ಸಾರ್ ಮಂಡಳಿ ಕಚೇರಿ ಬಳಿ ಪ್ರತಿಭಟನೆ ಮಾಡುತ್ತೇವೆ ಎಂದು ಚೆನ್ನೈ ನಗರದ ಟ್ರಾನ್ಸ್ ಜೆಂಡರ್ಸ್ ಸಂಘಟನೆ ಹೇಳಿಕೊಂಡಿದೆ. [ಐ ಚಿತ್ರ ವಿಮರ್ಶೆ]
ಈ ಹಿನ್ನೆಲೆಯಲ್ಲಿ ಶಂಕರ್ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಚಿತ್ರದಲ್ಲಿ ಓಜಾಸ್ ರಜನಿ ಪೋಷಿಸಿರುವ ಕೇಶ ವಿನ್ಯಾಸಕನ ಪಾತ್ರ ಈಗ ವಿವಾದಕ್ಕೆ ಕಾರಣವಾಗಿರುವುದು.
ರಜನಿಕಾಂತ್, ಐಶ್ವರ್ಯಾ ರೈ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳ ಕೇಶ ವಿನ್ಯಾಸಕರಾಗಿ ಆಸ್ಮ ಜಾಸ್ಮಿನ್ ಎಂಬ ಪಾತ್ರ ಬರುತ್ತದೆ. ಆದರೆ ಆ ಪಾತ್ರವನ್ನು ವಿಲನ್ ನಂತೆ ಚಿತ್ರೀಕರಿಸಿ ತಮ್ಮ ಮನೋಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಮಂಗಳಮುಖಿಯರು.
ಚಿಯಾನ್ ವಿಕ್ರಮ್, ಅಮಿ ಜಾಕ್ಸನ್ ಅಭಿನಯದ ಭಾರಿ ಬಜೆಟ್ ನ ಈ ಚಿತ್ರವನ್ನು ಆಸ್ಕರ್ ರವಿಚಂದ್ರನ್ ನಿರ್ಮಿಸಿದ್ದಾರೆ. ಮಿಶ್ರ ಪ್ರತಿಕ್ರಿಯೆಗೆ ಪಾತ್ರವಾಗಿರುವ ಈ ಚಿತ್ರ ಬಾಕ್ಸ್ ಆಫೀಸಲ್ಲಿ ನಿರೀಕ್ಷಿಸಿದ ಮಟ್ಟದಲ್ಲಿ ಸದ್ದು ಮಾಡಲಿಲ್ಲ.