Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಡುಕರಿಗೆ ನಟಿ ತ್ರಿಷಾ ಕೃಷ್ಣನ್ ಕಿವಿಮಾತು
ಕುಡಿತ ಒಳ್ಳೆಯದಲ್ಲ ಎಂಬ ಮಹಾತ್ಮ ಗಾಂಧೀಜಿ ಮಾತನ್ನು ದಕ್ಷಿಣ ಭಾರತದ ಖ್ಯಾತ ನಟಿ ತ್ರೀಷಾ ಕೃಷ್ಣನ್ ಪುನರುಚ್ಚರಿಸಿದ್ದಾರೆ. ಒಂದು ವೇಳೆ ನನ್ನ ಕಾರು ಚಾಲಕ ಕುಡಿದು ವಾಹನ ಚಾಲನೆ ಮಾಡಿದರೆ ಹಿಂದೆ ಮುಂದೆ ನೋಡದೇ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.
ಮದ್ಯ ಸೇವಿಸಿ ವಾಹನ ಚಾಲನೆ ಮಾಡುವುದು ಈಗೀಗ ಸಾಮಾನ್ಯವಾಗಿಬಿಟ್ಟಿದೆ. ತಮ್ಮ ಮತ್ತು ಇತರರ ಪ್ರಾಣಕ್ಕೆ ಕುತ್ತು ತರುವ ಕೆಲಸ ಯಾಕಾದರೂ ಮಾಡುತ್ತಾರೋ? ಇದರ ಅಗತ್ಯವೇನು? ಎಂದು ಪ್ರಶ್ನಿಸಿದ್ದಾರೆ.[ಶ್ರೀದೇವಿಯಾದ ರಾಮ್ ಗೋಪಾಲ್ ವರ್ಮಾ ಸಾವಿತ್ರಿ]
ಅಮಲಿನಲ್ಲಿ ವಾಹನ ಚಲಾಯಿಸುವವರಿಗೆ ಪೊಲೀಸರು ವಿಧಿಸುತ್ತಿರುವ ದಂಡ ಯಾತಕ್ಕೂ ಸಾಲದು. ನೀಡುತ್ತಿರುವ ಶಿಕ್ಷೆ ಪ್ರಮಾಣವೂ ಕಡಿಮೆ. ಇದರಿಂದಲೇ ದೇಶದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಅಪಘಾತ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.
ಹೆಚ್ಚಿನ ದಂಡ ವಿಧಿಸಿ, ಉಗ್ರ ಶಿಕ್ಷೆ ನೀಡುವುದು ಒಂದು ಬಗೆಯಾದರೆ, ಜನರಲ್ಲಿ ಜಾಗೃತಿ ಮೂಡಿಸುವುದು ಇನ್ನೊಂದು ಬಗೆ. ಎರಡನೆಯದೇ ಉತ್ತಮ ಎಂದು ಕಾಣುತ್ತದೆ. ಹಾಗಾಗಿ ಜಾಗೃತಿ ಮೂಡಿಸುವ ಕೆಲಸ ಎಲ್ಲರಿಂದ ಆಗಬೇಕು ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ಮಾಧ್ಯಮಗಳ ಸಹಕಾರವನ್ನು ತ್ರಿಷಾ ಬಯಸಿದ್ದಾರೆ.
ನಿಮಗೆ ಕುಡಿಯಲೇಬೇಕು ಎಂದೆನಿಸಿದರೆ ಮನೆಯಲ್ಲೇ ಕುಡಿಯಿರಿ. ಎಲ್ಲೋ ಕುಡಿದು ನಿಮ್ಮ ಮತ್ತು ಅಮಾಯಕರ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳಬೇಡಿ ಎಂದು ನಟಿ ಕಿವಿಮಾತು ಹೇಳಿದ್ದಾರೆ. ನಟಿಮಣಿಯ ಮಾತಿಗೆ ಬೆಲೆಕೊಟ್ಟು ಅದೆಷ್ಟು ಕುಡುಕರು ಮದ್ಯ ತೊರೆಯುತ್ತಾರೋ?