Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಡರ್ನ್ ಮೈಸೂರು ಮಲ್ಲಿಗೆ, ನಾಗಾಭರಣ ಗರಂ
ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದಂತಹ ಘಮಘಮ ವಾಸನೆ ಬೀರಿದ ಚಿತ್ರ 'ಮೈಸೂರು ಮಲ್ಲಿಗೆ'. 1992ರಲ್ಲಿ ಬಿಡುಗಡೆಯಾದ ಈ ಚಿತ್ರಕ್ಕೆ ಟಿ.ಎಸ್. ನಾಗಾಭರಣ ಆಕ್ಷನ್ ಕಟ್ ಹೇಳಿದ್ದರು. ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಕವನಗಳನ್ನು ಆಧರಿಸಿ ತಯಾರಿಸಿದ ಈ ಚಿತ್ರ ಇಂದಿಗೂ ಜನಮನ್ನಣೆಗೆ ಪಾತ್ರವಾಗಿದೆ.
ಈಗ ಇದೇ ಹೆಸರಿನಲ್ಲಿ ಮತ್ತೊಂದು ಮೈಸೂರು ಮಲ್ಲಿಗೆ ಚಿತ್ರ ಸೆಟ್ಟೀರಿದೆ. ಹತ್ತು ವರ್ಷಗಳ ಬಳಿಕ ಅದೇ ಶೀರ್ಷಿಕೆಯನ್ನು ಬಳಸಿಕೊಳ್ಳಬಹುದು. ನಾಗಾಭರಣ ನಿರ್ದೇಶನದ ಮೈಸೂರು ಮಲ್ಲಿಗೆ ಬಂದು 20 ವರ್ಷಗಳೇ ಕಳೆದುಹೋಗಿದೆ. ಈಗ ಮತ್ತೆ ಅದೇ ಶೀರ್ಷಿಕೆಯಲ್ಲಿ ಚಿತ್ರವನ್ನು ನಿರ್ಮಿಸುತ್ತಿರುವ ಬಗ್ಗೆ ಅವರಿಗೆ ಕೊಂಚ ಅಸಮಾಧಾನವಿದೆ.
ಅಂದಿನ 'ಮೈಸೂರು ಮಲ್ಲಿಗೆ' ಚಿತ್ರ ದಂಪತಿಗಳ ಪಿಸು ಮಾತಿನಷ್ಟೆ ಸೊಗಸಾಗಿತ್ತು. ವರಕವಿ ಬೇಂದ್ರೆ ಅವರು 'ಮೈಸೂರು ಮಲ್ಲಿಗೆಯ ಲಾವಣ್ಯ ಅಪ್ಸರೆಯ ಚೆಲುವಿನಂತೆ, ಇದು ಈ ಮಣ್ಣು ನಲದಿಂದ ಬರಲು ಸಾಧ್ಯವೇ?' ಎಂದದ್ದು ಸುಮ್ಮನೆಯೇ?
ಬಳೆಗಾರ ಚೆನ್ನಯ್ಯ , ಒಂದಿರುಳು ಕನಸಿನಲಿ , ರಾಯರು ಬಂದರು ಮಾವನ ಮನೆಗೆ ಹಾಡುಗಳಂತೂ ಕಾವ್ಯ ರಸಿಕರ ಹೃದಯಕ್ಕೇ ಲಗ್ಗೆಹಾಕಿದ ಕವಿತೆಗಳು. ಈ ಕವಿತೆಗಳಲ್ಲಿ ಬರುವ ದಂಪತಿಗಳು ಮುಪ್ಪು ಸಾವಿಲ್ಲದ ಗಂಧರ್ವರು. ಆದರೆ ಈಗಿನ ಮೈಸೂರು ಮಲ್ಲಿಗೆಯ ಕಥಾವಸ್ತು ಏನು? ಇದು ಒಳ್ಳೆಯ ಅಭಿರುಚಿ ಚಿತ್ರವೇ ಅಲ್ಲವೆ ಎಂಬ ಬಗ್ಗೆಯೂ ನಾಗಾಭರಣ ಅವರ ಕಳವಳವನ್ನು ಮತ್ತಷ್ಟು ಹೆಚ್ಚಿಸಿದೆಯಂತೆ.
ಈ ಹಿಂದೆ 'ಆಸ್ಕರ್' ಎಂಬ ವಿನೂತನ ಶೈಲಿಯ ಚಿತ್ರ ನಿರ್ದೇಶಿಸಿದ್ದ ಆಸ್ಕರ್ ಕೃಷ್ಣ 'ಮೈಸೂರು ಮಲ್ಲಿಗೆ' ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುವುದರೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ಹೊತ್ತಿದ್ದಾರೆ. ಒಂಟಿ ಹೆಣ್ಣಿನ ಮೇಲೆ ಪ್ರತಿನಿತ್ಯ ನಡೆಯುತ್ತಿರುವ ವಿಲಕ್ಷಣ ಶೋಷಣೆಯ ಕಥೆ ಹೊಂದಿದೆ. ಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ. (ಒನ್ಇಂಡಿಯಾ ಕನ್ನಡ)