Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುನಾಮಿ ಕಿಟ್ಟಿ ಕಿಡ್ನಾಪ್ ಪ್ರಕರಣ : ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸುನಿಲ್ ಪತ್ನಿ
'ಬಿಗ್ ಬಾಸ್' ಸೇರಿದಂತೆ ಕನ್ನಡದ ಕೆಲವು ರಿಯಾಲಿಟಿ ಶೋ ಗಳ ಮೂಲಕ ಹೆಸರು ಮಾಡಿದ್ದ ಸುನಾಮಿ ಕಿಟ್ಟಿ ಈಗ ಜೈಲು ಪಾಲಾಗಿದ್ದಾನೆ. ತನ್ನ ಸ್ನೇಹಿತ ಸುನಿಲ್ ಪತ್ನಿಯ ಪ್ರಿಯಕರ ತೌಶೀಕ್ ನನ್ನ ಕಿಡ್ನಾಪ್ ಮಾಡಿ ಹೊರಮಾವು ಬಳಿಯ ತೋಟದ ಮನೆಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಚಾಕುವಿನಿಂದ ತೌಶೀಕ್ ಎದೆ ಮತ್ತು ತೊಡೆ ಭಾಗಕ್ಕೆ ಸುನಾಮಿ ಕಿಟ್ಟಿ ಮತ್ತು ಸುನೀಲ್ ಟೀಮ್ ಇರಿದಿದ್ದರು. ಬಳಿಕ ಜ್ಞಾನ ಭಾರತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುನಾಮಿ ಕಿಟ್ಟಿ ಯೋಗೇಂದ್ರ ಮತ್ತು ಅರ್ಜುನ್ ನನ್ನು ಬಂದಿಸಿದ್ದರು.
ಕಿಡ್ನಾಪ್ ಕೇಸ್ ನಲ್ಲಿ 'ಬಿಗ್ ಬಾಸ್' ಸ್ಪರ್ಧಿ ಸುನಾಮಿ ಕಿಟ್ಟಿ ಅರೆಸ್ಟ್ !
ಆದರೆ ಈ ಪ್ರಕರಣಕ್ಕೆ ಸಂಭದಿಸಿದಂತೆ ಸದ್ಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸುನಾಮಿ ಕಿಟ್ಟಿ ಸ್ನೇಹಿತ ಸುನೀಲ್ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ರಾಮಮೂರ್ತಿ ನಗರ ನಿವಾಸಿಯಾಗಿರುವ ಸುನಿಲ್ ಪತ್ನಿಯನ್ನು ಸದ್ಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾಳೆ. ಸುನೀಲ್ ಪತ್ನಿಗೆ ಚಿಕಿತ್ಸೆ ನೀಡಿದ ವೈದ್ಯರು ಜೀವಕ್ಕೆ ಯಾವುದೇ ಅಪಾಯವಿಲ್ಲಾ ಎಂದಿದ್ದಾರೆ.
ಅಂದಹಾಗೆ, ಸುನಾಮಿ ಕಿಟ್ಟಿ ಸ್ನೇಹಿತ ಸುನಿಲ್ ಪತ್ನಿ ತೌಶೀಕ್ ಎಂಬಾತ ಪ್ರೀತಿಸುತ್ತಿದ್ದಳು. ಫೆಬ್ರವರಿ 28ಕ್ಕೆ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಗೆ ಸುನಿಲ್ ಪತ್ನಿ ಮತ್ತು ಊಟಕ್ಕೆ ಬಂದಿದ್ದರು. ಈ ವೇಳೆ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ನನ್ನೆ ಸುನಿಲ್ ಪತ್ನಿಯ ಪ್ರಿಯಕರ ಎಂದು ತಿಳಿದು ಆತನನ್ನು ಹೊರಮಾವು ಬಳಿ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದರು. ನಂತರ ತೌಶೀಕ್ ನನ್ನ ಕಿಡ್ನಾಪ್ ಮಾಡಿ, ಗನ್ ತೋರಿಸಿ ಹೆಸರಿಸಿದ ಇವರನ್ನು ಜ್ಞಾನ ಭಾರತಿ ಪೊಲೀಸರು ಬಂದಿಸಿದ್ದಾರೆ.