Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಡುಹಗಲೇ ಗೂಂಡಾಗಿರಿ ನಡೆಸಿದ್ದ ನಟ ಅರೆಸ್ಟ್
ತುಳು ಚಿತ್ರ ನಟ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಬಂಟ್ವಾಳ ಎಂಬುವವನ್ನು ಬಂಟ್ವಾಳ ಪೋಲೀಸರು ಬಂದಿಸಿದ್ದಾರೆ. ಜೂನ್ 11 ರಂದು ಹಾಡುಹಗಲೇ ತಲವಾರು ಝಳಪಿಸಿ ಬಿಜೆಪಿ ಕಾರ್ಯಕರ್ತರಿಗೆ ನಟ ಸುರೇಂದ್ರ ಬೆದರಿಕೆ ಹಾಕಿದ್ದ. ಈ ಸಂಬಂಧ ವಿಚಾರಣೆ ನಡೆಸಿದ ಪೋಲೀಸರು ಈಗ ಇಬ್ಬರನ್ನು ಬಂದಿಸಿದ್ದಾರೆ.
ಘಟನೆಯ ಬಗ್ಗೆ :
ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬೆಂಬಲಿಗ ಹಾಗೂ ನಟ ಸುರೇಂದ್ರ ಬಂಟ್ವಾಳ ಬಿಜೆಪಿ ಕಾರ್ಯಕರ್ತರ ಕೊಲೆಗೆ ಯತ್ನಿಸಿದ್ದ. ಬಂಟ್ವಾಳ ಪೇಟೆಯ ನಿತ್ಯಾನಂದ ಮಂದಿರದ ಬಳಿ ಈ ಘಟನೆ ನಡೆದಿದ್ದು, ಸುರೇಂದ್ರ ಬಂಟ್ವಾಳ ತಲವಾರು ಹಿಡಿದು ರಸ್ತೆಯಲ್ಲೇ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದ.
ಗಣೇಶ್ ಮತ್ತು ಪುಷ್ಪರಾಜ್ ಮೇಲೆ ಸುರೇಂದ್ರ ಬಂಟ್ವಾಳ್ ತಲವಾರು ಬೀಸಿದ್ದು, ಅವರಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದ. ಘಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಮೊದಲು ಸುರೇಂದ್ರ ಬಂಟ್ವಾಳ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು. ಇದು ವಿಕೋಪಕ್ಕೆ ತಿರುಗಿ ತಲವಾರು ಕಾಳಗ ನಡೆಯುವ ಮಟ್ಟಕ್ಕೆ ಬೆಳೆದಿತ್ತು. ಅಂದ್ಹಾಗೆ, ಸುರೇಂದ್ರ ಬಂಟ್ವಾಳ 'ಚಾಲಿಪೋಲಿಲು' ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ನಟಿಸಿದ್ದಾನೆ.