Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರಿ ಅವಘಡದಲ್ಲಿ ಹೊತ್ತಿ ಉರಿದ ಬಸ್: ಬಚಾವ್ ಆದ ಖ್ಯಾತ ತುಳು ನಟಿ ನೀಮಾ ರೇ
ತುಳು ಚಿತ್ರರಂಗದ ಖ್ಯಾತ ನಟಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಅಪಘಾತವಾಗಿದ್ದು, ನಟಿ ನೀಮಾ ರೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಶ್ರೀ ದುರ್ಗಾ ಬಸ್ ರಾಷ್ಟ್ರೀಯ ಹೆದ್ದಾರಿ 77ರ ನೆಲ್ಯಾಡಿ ಬಳಿ ಅಪಘಾತಕ್ಕೆ ಒಳಗಾಗಿದೆ. ಈ ವೇಳೆ ನಟಿ ಸೇರಿದಂತೆ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಚಿತ್ರೀಕರಣ ವೇಳೆ ನಟ ಫಹಾದ್ ಫಾಸಿಲ್ ಗೆ ಗಾಯ, ಶಸ್ತ್ರಚಿಕಿತ್ಸೆ
ರಾತ್ರಿ 11:50ರ ಸಮಯದಲ್ಲಿ ಬೆಂಗಳೂರಿನತ್ತ ಸಾಗುತ್ತಿದ್ದ ಶ್ರೀದುರ್ಗಾ ಬಸ್ಗೆ ರಭಸವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಶ್ರೀ ದುರ್ಗಾ ಬಸ್ ಬೆಂಕಿ ಹೊತ್ತಿಕೊಂಡು ಉರಿದಿದೆ. ಕ್ಯಾಂಟರ್ ಚಾಲನ ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಇದೆ. ಬಸ್ ಚಾಲಕನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ನಂತರ ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಿ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಸಾಹಸದಿಂದ ಬಾಗಿಲು ತೆಗೆದು ಹೊರಬಂದಿದ್ದರು.
ಅವಘಡದಿಂದ ಗಾಬರಿಯಾಗಿದ್ದ ಪ್ರಯಾಣಿಕರನ್ನು ನಂತರ ಬೇರೊಂದು ಬಸ್ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
ನಟಿ ನೀಮಾ ರೇ ಇತ್ತೀಚಿಗಷ್ಟೆ ರಾಷ್ಟ್ರ ಪ್ರಶಸ್ತಿ ಪಡೆದ 'ಪಿಂಗಾರ' ಸಿನಿಮಾದಲ್ಲಿ ನಟಿಸಿದ್ದಾರೆ. 67ನೇ ರಾಷ್ಟ್ರ ಪ್ರಶಸ್ತಿ ಸಾಲಿನಲ್ಲಿ ಅತ್ಯುತ್ತಮ ತುಳು ಸಿನಿಮಾ ಎಂದು ಪ್ರಶಸ್ತಿ ಪಡೆದಿತ್ತು. ಈ ಚಿತ್ರದಲ್ಲಿ ನೀಮಾ ರೇ ನಟಿಸಿದ್ದರು.