Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳು ಚಿತ್ರ 'ಮೈ ನೇಮ್ ಈಸ್ ಅಣ್ಣಪ್ಪ' ಇಂದು ಕರಾವಳಿಯಾದ್ಯಂತ ಬಿಡುಗಡೆ
ಮಂಗಳೂರು ಸಪ್ಟೆಂಬರ್ 21: ತುಳುವಿನ ಬಹುನಿರೀಕ್ಷಿತ ಅದ್ದೂರಿ ಚಿತ್ರ 'ಮೈ ನೇಮ್ ಈಸ್ ಅಣ್ಣಪ್ಪ' ಇಂದು ತೆರೆಕಾಣಲಿದೆ. ಲಕುಮಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣಗೊಂಡ ಈ ಚಿತ್ರ ಕೋಸ್ಟಲ್ ವುಡ್ನಲ್ಲಿ ಭಾರಿ ಕುತೂಹಲ ಮೂಡಿಸಿದೆ. ಮಂಜು ರೈ ಮೂಳೂರು ಮುಖ್ಯಭೂಮಿಕೆಯಲ್ಲಿ ಇರುವ ಈ ಚಿತ್ರ ಇಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ.
ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಲಿದ್ದು ನಗರದ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಚಿತ್ರವು ತೆರೆಕಾಣಲಿದೆ. ಈಗಾಗಲೇ ಚಿತ್ರ ತನ್ನ ವಿಭಿನ್ನ ಪೋಸ್ಟರ್, ಟೈಟಲ್ ನ ಮೂಲಕ ಕರಾವಳಿಯ ಜನರಲ್ಲಿ ಎದೆಬಡಿತ ಹೆಚ್ಚಿಸಿದೆ. ಚಿತ್ರದ ಹಾಡುಗಳ ಮೂಲಕವೂ ವಿಭಿನ್ನ ಪ್ರಯತ್ನಕ್ಕೆ ಚಿತ್ರತಂಡ ಕೈಹಾಕಿದೆ.
ಯಶಸ್ವಿ 25 ದಿನ ಪೂರೈಸಿದ ತುಳು ಹಾಸ್ಯ ಸಿನಿಮಾ 'ದಗಲ್ ಬಾಜಿಲು'
ಈ 'ಮೈ ನೇಮ್ ಈಸ್ ಅಣ್ಣಪ್ಪ' ಸಿನಿಮಾದ ವಿಶೇಷತೆ ಎಂದರೆ ಈ ಚಿತ್ರಕ್ಕೆ ಮೂವರು ಯಕ್ಷಗಾನದ ಭಾಗವತರು ಸ್ವರ ನೀಡಿದ್ದಾರೆ. ಕಿಶೋರ್ ಕುಮಾರ್ ಶೆಟ್ಟಿ ಸಂಗೀತ ಒದಗಿಸಿರುವ ಹಾಡುಗಳು ಕೂಡ ಭರ್ಜರಿ ಹಿಟ್ ಆಗುವ ನಿರೀಕ್ಷೆ ಇದೆ. ಯಕ್ಷಗಾನ ಲೋಕದ ಪ್ರಖ್ಯಾತ ಭಗವತರಾದ ದಿನೇಶ್ ಅಮ್ಮಣ್ಣಾಯ, ಪಟ್ಲ ಸತೀಶ್ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ ಅವರು ಈ ಚಿತ್ರದ ಹಾಡಿಗೆ ಧ್ವನಿಯಾಗಿದ್ದಾರೆ.
ಈ ಚಿತ್ರವನ್ನು ಮಯೂರ್ ಶೆಟ್ಟಿ ನಿರ್ದೇಶಿಸಿದ್ದು, ರೋಹನ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಮಂಜು ರೈ, ಶುಭಾ ಶೆಟ್ಟಿ, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ ಬೋಳಾರ್, ಸತೀಶ್ ಬಂದಲೆ, ರಂಗಾಯಣ ರಘು, ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಕುಮಾರ್ ಕಾಪಿನಡ್ಕ ಮತ್ತಿತರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.