Don't Miss!
- News Bagalkote: ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ: ಮೆರವಣಿಗೆಯಲ್ಲಿ ಕಾಶಪ್ಪನವರ್ ಭರ್ಜರಿ ಡಾನ್ಸ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳು ಸಿನಿಮಾ ನಟ ಸುರೇಂದ್ರ ಬಂಟ್ವಾಳ್ ಭೀಕರ ಹತ್ಯೆ
ತುಳು ಸಿನಿಮಾಗಳಲ್ಲಿ ನಟಿಸುತ್ತಿದ್ದ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಯಾರೊ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.
ನಟ ಸುರೇಂದ್ರ ಬಂಟ್ವಾಳ್ ಅವರ ರಕ್ತ-ಸಿಕ್ತ ಮೃತ ದೇಹ ಬಂಟ್ವಾಳದ ಬಿಸಿ ರೋಡ್ನಲ್ಲಿನ ಫ್ಲ್ಯಾಟ್ ಒಂದರಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಸುರೇಂದ್ರ ಅವರನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯಾಹ್ನ ಸುರೇಂದ್ರ ಬಂಟ್ವಾಳ ಅವರ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಳೆ ವೈಷಮ್ಯ ಅಥವಾ ಹಣಕಾಸಿನ ವಿಚಾರದಲ್ಲಿ ಜಗಳವೇ ಕೊಲೆಗೆ ಕಾರಣವೆಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಬಂಟ್ವಾಳದ ಬಂಡಾರಿಬೆಟ್ಟು ನಿವಾಸಿ
ಬಂಟ್ವಾಳದ ಬಂಡಾರಿಬೆಟ್ಟು ನ ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ ಹಲವು ತುಳು ಸಿನಿಮಾಗಳಲ್ಲಿ ನಟಿಸಿದ್ದರು. ಸುರೇಂದ್ರ ಬಂಟ್ವಾಳ ರೌಡಿ ಶೀಟರ್ ಸಹ ಆಗಿದ್ದರು. ಕೆಲ ವರ್ಷಗಳಿಂದಲೂ ಸಿನಿಮಾದಲ್ಲಿ ಸಹ ನಟಿಸುತ್ತಿದ್ದರು.
ಹಣಕಾಸಿನ ವ್ಯವಹಾರವೂ ಇತ್ತು
ಸಿನಿಮಾ ನಟನೆ ಜೊತೆಗೆ ಹಣಕಾಸಿನ ವ್ಯವಹಾರವನ್ನೂ ನಡೆಸುತ್ತಿದ್ದ ಸುರೇಂದ್ರ ಮೇಲೆ ಕೆಲವು ಪ್ರಕರಣಗಳು ಇದ್ದವು. ಕಳೆದ 2018 ರಲ್ಲಿ ಅವರು ಜೈಲು ಸಹ ಸೇರಿದ್ದರು. ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಸುರೇಂದ್ರ ರೌಡಿ ಶೀಟರ್ ಸಹ ಆಗಿದ್ದರು.
ಕತ್ತಿ ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ
ತಳವಾರ ಪೇಟೆಯಲ್ಲಿ ಕತ್ತಿ ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಸುರೇಂದ್ರ ಬಂಟ್ವಾಳ ಬೆದರಿಕೆ ಹಾಕಿದ್ದ ವಿಡಿಯೋ ಸಖತ್ ವೈರಲ್ ಆಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ಜೈಲು ಪಾಲು ಮಾಡಲಾಗಿತ್ತು. ನಂತರ ಜಾಮೀನು ಪಡೆದು ಅವರು ಹೊರಗೆ ಬಂದಿದ್ದರು.
ಹಣಕಾಸಿನ ವಿಚಾರಕ್ಕೆ ಕೊಲೆ
ಕನ್ನಡದ ಸವರ್ಣದೀರ್ಘ ಸಂಧಿ, ತುಳುವಿನ ಚಾಲಿ ಪೋಲೀಲು, ಸೇರಿದಂತೆ ಹಲವು ತುಳು ಸಿನಿಮಾಗಳಲ್ಲಿ ಸುರೇಂದ್ರ ಬಂಟ್ವಾಳ ನಟಿಸಿದ್ದರು. ಹಣಕಾಸಿನ ವಿಚಾರಕ್ಕೆಯೇ ಸುರೇಂದ್ರ ಅವರ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.