Don't Miss!
- News Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳು ಚಿತ್ರ 'ಅರ್ಜುನ್ ವೆಡ್ಸ್ ಅಮೃತ' ಧ್ವನಿಸುರುಳಿ ಬಿಡುಗಡೆ
ಬೆದ್ರ 9 ಕ್ರಿಯೇಷನ್ಸ್ ಲಾಂಛನದಲ್ಲಿ ರಘುಶೆಟ್ಟಿ ನಿರ್ದೇಶನದಲ್ಲಿ ತಯಾರಾದ 'ಅರ್ಜುನ್ ವೆಡ್ಸ್ ಅಮೃತ' ತುಳು ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ ಮಾರ್ಚ್ 18 ರಂದು ಮಂಗಳೂರಿನ ಪುರಭವನದಲ್ಲಿ ಜರುಗಿತು.
ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಅವರು ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಿ, ''ತುಳು ಸಿನಿಮಾರಂಗಕ್ಕೆ ಈಗ ಪರ್ವಕಾಲ. ಬಹಳಷ್ಟು ಸಿನಿಮಾಗಳು ಇಲ್ಲಿ ತಯಾರಾಗುತ್ತಿದೆ. ಉತ್ತಮ ಸಂದೇಶ ಇರುವ ಚಿತ್ರಗಳು ಜನರನ್ನು ರಂಜಿಸುವಲ್ಲಿ ಯಶಸ್ವಿಯಾಗುತ್ತಿದೆ. ಸಿನಿಮಾಗಳು ಗುಣಮಟ್ಟವನ್ನು ಕಾಯ್ದುಕೊಂಡು ಇಲ್ಲಿಯ ಆಚಾರ-ವಿಚಾರ, ಸಂಸ್ಕೃತಿಯತ್ತ ಗಮನಹರಿಸುವಂತಾಗಲಿ'' ಎಂದರು.
ಸಮಾರಂಭದಲ್ಲಿ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಸ್ವರ್, ಕಿಶೋರ್.ಡಿ.ಶೆಟ್ಟಿ, ಮಿಫ್ಟ್ ಕಾಲೇಜಿನ ಎಂ.ಜಿ.ಹೆಗ್ಡೆ, 'ಅರ್ಜುನ್ ವೆಡ್ಸ್ ಅಮೃತ' ಚಿತ್ರದ ಸಂಗೀತ ನಿರ್ದೇಶಕರಾದ ಸುಮಾ.ಎಲ್.ಎನ್.ಶಾಸ್ತ್ರಿ, ನಿರ್ದೇಶಕ ರಘು ಶೆಟ್ಟಿ, ನಟ ಅನೂಪ್ ಸಾಗರ್, ನಟಿ ಆರಾಧ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಿನಿಮಾಕ್ಕೆ ಸಾಹಿತ್ಯ ರಚಿಸಿದ ಲೋಕು ಕುಡ್ಲ, ರಾಜೇಶ್ ಶೆಟ್ಟಿ, ದಾಮೋದರ ದೊಂಡೊಲೆ, ನೃತ್ಯ ನಿರ್ದೇಶಕರಾದ ತರುಣ್, ಕಿರಣ್ ರಾಜ್, ಸಂಗೀತ ನಿರ್ದೇಶಕಿ ಸುಮಾ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಸ್ವರ್ಣ ಸುಂದರ್, ಮಧು ಸುರತ್ಕಲ್, ಭೋಜರಾಜ ವಾಮಂಜೂರು, ಪಿ.ಶ್ರೀಧರ್ ಹಾಘೂ ಚಿತ್ರದ ಕಲಾವಿದರು, ತಂತ್ರಜ್ಞರು ಉಪಸ್ಥಿತರಿದ್ದರು. ಅನುರಾಗ್ ಕಾರ್ಯಕ್ರಮ ನಿರ್ವಹಿಸಿದರು.