Don't Miss!
- News Raichur: ರಾಯಚೂರಿನಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ: ಬಿವಿ ನಾಯಕ್, ತಿಪ್ಪರಾಜು ಜೊತೆ ಬಿಜೆಪಿ ಸಂಧಾನ ವಿಫಲ!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅರ್ಜುನ್ ವೆಡ್ಸ್ ಅಮೃತ' ಸಿನಿಮಾ ಬಿಡುಗಡೆ ಸಮಾರಂಭ
'ಬೆದ್ರ ೯ ಕ್ರಿಯೇಷನ್ಸ್' ಲಾಂಛನದಲ್ಲಿ ನಿರ್ಮಾಣಗೊಂಡಿರುವ ಪತ್ರಕರ್ತ ರಘು ಶೆಟ್ಟಿ ನಿರ್ದೇಶನದ ಅರ್ಜುನ್ ವೆಡ್ಸ್ ಅಮೃತ' ಸಿನಿಮಾದ ಬಿಡುಗಡೆ ಸಮಾರಂಭವು ಮಂಗಳೂರಿನ ಪಾಂಡೇಶ್ವರದ ಫಿಜ್ಜಾ ಮಾಲ್ನಲ್ಲಿರುವ ಪಿವಿಆರ್ ಥಿಯೇಟರ್ನಲ್ಲಿ ಜರುಗಿತು.
ಸಮಾರಂಭವನ್ನು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಕವಿತಾ ಸನಿಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 'ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗದಲ್ಲಿ ಈಗ ಹಿಂದೆಂದಿಗಿಂತಲೂ ಹೆಚ್ಚು ಚಿತ್ರಗಳು ತಯಾರಾಗುತ್ತಿವೆ. ತುಳು ಭಾಷಾಭಿಮಾನದಿಂದ ಪ್ರೇಕ್ಷಕರು ಸಿನಿಮಾ ನೋಡುವ ಮೂಲಕ ಪ್ರೋತ್ಸಾಹಿಸಬೇಕು. ಸಮಾಜಕ್ಕೆ ಒಳ್ಳೆಯ ಸಂದೇಶ ಭರಿತ ಚಿತ್ರಗಳನ್ನು ನೀಡಿದಾಗ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಈಗ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧಗೊಂಡಿದೆ. ಹೀಗಾಗಿ ಕನಿಷ್ಠ 3-4 ವಾರಗಳ ಅಂತರವಿದ್ದರೆ ನಿರ್ಮಾಪಕರಿಗೆ ಅನುಕೂಲವಾಗುತ್ತದೆ. ಇದರಿಂದ ತುಳು ಚಿತ್ರೋದ್ಯಮಕ್ಕೂ ಲಾಭ' ಎಂದು ನುಡಿದರು.
ಚಿತ್ರದ ನಿರ್ದೇಶಕ ರಘು ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, 'ಅರ್ಜುನ್ ವೆಡ್ಸ್ ಅಮೃತ' ರೋಮ್ಯಾಂಟಿಕ್ ಲವ್ ಸ್ಟೋರಿಯಾಗಿದ್ದು, ಆಕ್ಷನ್ ಇಲ್ಲದ ಲವ್, ಸೆಂಟಿಮೆಂಟ್ ಹಾಗೂ ಹಾಸ್ಯ ಮಿಶ್ರಿತದಿಂದ ಕೂಡಿದೆ ಎಂದರು.
ಸಮಾರಂಭದಲ್ಲಿ ತುಳು ಸಿನಿಮಾರಂಗದ ಹಿರಿಯ ಸಾಧಕರಾದ ಡಾ.ರಿಚರ್ಡ್ ಕ್ಯಾಸ್ಟಲಿನೋ, ಡಾ. ಸಂಜೀವ ದಂಡಕೇರಿ ಹಾಗೂ ರಂಗನಟ, ಸಂಘಟಕ ವಿ.ಜಿ. ಪಾಲ್ರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ತುಳುಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಟಿ.ಎ.ಶ್ರೀನಿವಾಸ್, ನವೀನ್ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಜಯಕುಮಾರ್ ಕೊಡಿಯಾಲ್ಬೈಲ್, ನಿರ್ಮಾಪಕರಾದ ಕಿರಣ್ ಬಿ.ಎನ್, ದಿನೇಶ್ ಮಲ್ಯ, ವೆಂಕಟೇಶ್ ಕಾಮತ್, ಅಕ್ಷತಾ ಕಾಮತ್, ನಟ ಅನೂಪ್ ಸಾಗರ್, ನಟಿ ಆರಾಧ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
'ಅರ್ಜುನ್ ವೆಡ್ಸ್ ಅಮೃತ' ಸಿನಿಮಾವು ಮಂಗಳೂರಿನಲ್ಲಿ ಜ್ಯೋತಿ, ಪಿವಿಆರ್, ಬಿಗ್ ಸಿನೆಮಾಸ್, ಸಿನಿಪೊಲಿಸ್, ಉಡುಪಿಯಲ್ಲಿ 'ಆಶೀರ್ವಾದ್', ಮೂಡಬಿದ್ರೆಯಲ್ಲಿ 'ಅಮರಶ್ರೀ', ಕಾರ್ಕಳದಲ್ಲಿ 'ರಾಧಿಕಾ', 'ಪ್ಲಾನೆಟ್', ಮಣಿಪಾಲದಲ್ಲಿ 'ಐನಾಕ್ಸ್', ಬೆಳ್ತಂಗಡಿಯಲ್ಲಿ 'ಭಾರತ್', ಸುಳ್ಯದಲ್ಲಿ 'ಸಂತೋಷ್', ಸೂರತ್ಕಲ್ನಲ್ಲಿ 'ನಟರಾಜ್' ಸಿನಿಮಾ ಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ಎಲ್ಲಾ ಟಾಕೀಸ್ಗಳಲ್ಲೂ ಹೌಸ್ಫುಲ್ ಪ್ರದರ್ಶನದಿಂದ ಜನ ಮೆಚ್ಚುಗೆ ಪಡೆದಿದೆ.
ನಾಯಕ ನಟನಾಗಿ ಅನೂಪ್ ಸಾಗರ್ ಮತ್ತು ನಾಯಕಿಯಾಗಿ ಆರಾಧ್ಯಶೆಟ್ಟಿ ಮುಖ್ಯ ಪಾತ್ರದಲ್ಲಿದ್ದು, ನವೀನ್ಡಿ ಪಡೀಲ್ರ ಸುತ್ತ ಕಥೆ ಸಾಗುತ್ತಿರುವುದರಿಂದ ಸಿನಿಮಾವು ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುವಂತೆ ಮಾಡಿದೆ. ಇನ್ನುಳಿದಂತೆ ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸುಧೀರ್ರಾಜ್ ಉರ್ವಾ, ಸಂದೀಪ್ ಶೆಟ್ಟಿ ಮತ್ತು ಇತರರು ಅಭಿನಯಿಸಿದ್ದಾರೆ.