Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐದು ಕೇಂದ್ರಗಳಲ್ಲಿ 'ಚಾಲಿಪೋಲಿಲು' ಹಾಫ್ ಸೆಂಚುರಿ
ತುಳು ಸಿನಿಮಾ ರಂಗದ 43 ವರ್ಷಗಳ ಇತಿಹಾಸದಲ್ಲಿ 52ನೇ ಸಿನಿಮಾ ಆಗಿ ಹೊರಬಂದಿರುವ ಜಯಕಿರಣ ಫಿಲಂಸ್ ಲಾಂಛನದಲ್ಲಿ ವಿರೇಂದ್ರ ಶೆಟ್ಟಿ ಕಾವೂರು ನಿರ್ದೇಶನದಲ್ಲಿ ಪ್ರಕಾಶ್ ಕೆ. ಪಾಂಡೇಶ್ವರ ಅವರು ನಿರ್ಮಾಣ ಮಾಡಿರುವ ಚಾಲಿಪೋಲಿಲು ಸಿನಿಮಾ 50 ದಿನಗಳ ಯಶಸ್ವಿ ಪ್ರದರ್ಶನ ಕಂಡು ಮುನ್ನುಗ್ಗುತ್ತಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 5 ಸಿನಿಮಾ ಮಂದಿರಗಳಲ್ಲಿ 50 ದಿನಗಳ ಪ್ರದರ್ಶನ ನೀಡಿರುವ ಚಾಲಿಪೋಲಿಲು, ಈಗಲೂ ಭರ್ಜರಿ ಪ್ರದರ್ಶನ ಕಾಣುತ್ತಿರುವುದು ಸಿನಿಮಾದ ಗುಣಮಟ್ಟಕ್ಕೆ ಸಾಕ್ಷಿ ಎಂದು ಹೇಳಬೇಕಾಗುತ್ತದೆ. [ಚಾಲಿಪೋಲಿಲು ಚಿತ್ರ ವಿಮರ್ಶೆ]
ಮಂಗಳೂರಿನ ಜ್ಯೋತಿ, ಬಿಗ್ ಸಿನಿಮಾ, ಪಿವಿಆರ್, ಬಿ.ಸಿ. ರೋಡಿನ ನಕ್ಷತ್ರ ಮತ್ತು ಉಡುಪಿಯ ಕಲ್ಪನಾ ಥಿಯೇಟರ್ ಗಳಲ್ಲಿ ಚಾಲಿಪೋಲಿಲು ಹಾಫ್ ಸೆಂಚುರಿ ಬಾರಿಸಿದೆ. ಈವರೆಗಿನ ತುಳು ಸಿನಿಮಾದಲ್ಲೇ ಉತ್ತಮ ಕಲೆಕ್ಷನ್ ಸಂಪಾದಿಸಿದ ಕೀರ್ತಿ ಪಡೆದಿರುವ ಈ ಸಿನಿಮಾವು ಬಿಡುಗಡೆ ಕಂಡ ಮೂರೇ ವಾರದಲ್ಲಿ ನಿರ್ಮಾಪಕರ ಅಸಲನ್ನು ತಂದು ಕೊಟ್ಟಿದೆ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಶಾಲಾ ಮಕ್ಕಳಿಗೆ ವಿಶೇಷ ರಿಯಾಯಿತಿ: ಮುಂದಿನ ದಿನಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಈ ಅವಕಾಶ ಮಾಡಿಕೊಡುತ್ತೇವೆ ಎಂದಿದ್ದಾರೆ ಚಿತ್ರದ ನಿರ್ಮಾಪಕರು.
ಈಗ ಚಾಲಿಪೋಲಿಲು ಪ್ರತಿ ರವಿವಾರ ಮುಂಬಯಿಯಯಲ್ಲೂ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಎರಡು ರವಿವಾರ ಮುಂಬಯಿ ನಗರದ ವಿವಿಧ ಟಾಕೀಸುಗಳಲ್ಲಿ ಪ್ರದರ್ಶನ ನೀಡಿದ್ದು, ಅಲ್ಲೆಲ್ಲ ಟಿಕೆಟ್ ಸಿಗದೆ ನಿರಾಶೆಯಿಂದ ವಾಪಸ್ ಹೋದವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನಲ್ಲೂ ಸತತ 4 ವಾರ ಸಿನಿಮಾ ಪ್ರದರ್ಶನ ಕಂಡಿದೆ.
ಹಲವು ಪ್ರಥಮಗಳ ತುಳು ಸಿನಿಮಾ ಎಂಬ ಹೆಗ್ಗಳಿಕೆಗೂ ಪಾತ್ರವಾಗಿರುವ ಇದಕ್ಕೆ ಪ್ರೇಕ್ಷಕರು ನೀಡಿರುವ ಸ್ಪಂದನೆ ನಿರ್ಮಾಪಕರ ನಿರೀಕ್ಷೆಗೂ ಮೀರಿದ್ದಾಗಿದೆ. ಸಿನಿಮಾ ವೀಕ್ಷಿಸಿದ ಎಲ್ಲರಿಂದಲೂ ಶ್ಲಾಘನೆಗೆ ಒಳಗಾಗಿರುವ ಚಾಲಿಪೋಲಿಲು ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮೀರಿ ಪ್ರದರ್ಶನ ನೀಡುವ ಸ್ಪಷ್ಟ ಲಕ್ಷಣ ಗೋಚರಿಸುತ್ತಿದೆ.
ಚಾಲಿಪೋಲಿಲು ಸಿನಿಮಾ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ತಯಾರಾಗಿದ್ದು 50 ದಿನದ ಪ್ರದರ್ಶನದ ವೇಳೆಗೆ 1.66 ಕೋಟಿ ರೂ.ಗೂ ಹೆಚ್ಚು ಗಳಿಕೆಯನ್ನು ಸಂಪಾದಿಸಿದೆ. ಮುಂದಿನ ದಿನಗಳಲ್ಲಿ ದೆಹಲಿ ಮತ್ತು ವಿದೇಶದಲ್ಲೂ ಸಿನಿಮಾ ಪ್ರದರ್ಶನಗೊಳ್ಳಲಿದೆ.
ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು ಮತ್ತು ಅರವಿಂದ ಬೋಳಾರ್ ಅವರಿಗೆ ಚಾಲಿಪೋಲಿಲು ಸಿನಿಮಾದ ಯಶಸ್ಸು ಹೊಸ ಇಮೇಜನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು. ಪತ್ರಿಕಾಗೊಷ್ಠಿಯಲ್ಲಿ ಪ್ರಕಾಶ್ ಪಾಂಡೇಶ್ವರ್, ವೀರೇಂದ್ರ ಶೆಟ್ಟಿ ಕಾವೂರು, ಉತ್ಪಲ್ ನಯನಾರ್, ದೇವದಾಸ್ ಕಾಪಿಕಾಡ್, ನವೀನ್ ಪಡೀಲ್, ಭೋಜರಾಜ್ ವಾಮಂಜೂರು, ಕದ್ರಿ ನವನೀತ ಶೆಟ್ಟಿ, ಲಕ್ಷ್ಮಣ್ಕುಮಾರ್ ಮಲ್ಲೂರು, ಮಾಧವ ಶೆಟ್ಟಿ ಸುರತ್ಕಲ್, ಉಮೇಶ್ ಮಿಜಾರ್ ಉಪಸ್ಥಿತರಿದ್ದರು. (ಫಿಲ್ಮಿಬೀಟ್ ಕನ್ನಡ)