Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳುನಾಡಿಗೆ ರಾಷ್ಟ್ರ ಪ್ರಶಸ್ತಿ ತಂದಿಟ್ಟ 'ಮದಿಪು'
2016 ನೇ ಸಾಲಿನ ಪ್ರತಿಷ್ಟಿತ 64ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಚೇತನ್ ಮುಂಡಾಡಿ ನಿರ್ದೇಶನದ 'ಮದಿಪು' ಅತ್ಯುತ್ತಮ ತುಳು ಚಿತ್ರ (ಪ್ರಾದೇಶಿಕ) ಪ್ರಶಸ್ತಿ ಪಡೆದುಕೊಂಡಿದೆ.
ಕರಾವಳಿ ಜನತೆಯ ಬದುಕು, ಅಲ್ಲಿನ ಆಚಾರ-ವಿಚಾರ, ಧರ್ಮ, ಭೂತಾರಾಧನೆಯ ಸುತ್ತ ಮದಿಪು ಚಿತ್ರದ ಕತೆ ಹೆಣೆಯಲಾಗಿದೆ. ತುಳುನಾಡಿನ ಕಲಾತ್ಮಕ ಚಿತ್ರಕ್ಕೆ ಚೇತನ್ ಮುಂಡಾಡಿ ಆಕ್ಷನ್ ಕಟ್ ಹೇಳಿದ್ದು ಇದು ಇವರ ಚೊಚ್ಚಲ ಸಿನಿಮಾ.
ಎಂ.ಕೆ.ಮಠ, ಸರ್ದಾರ್ ಸತ್ಯ ಹಾಗೂ ಸುಜಾತಾ ಶೆಟ್ಟಿ ಪೇರಾಜೆ ಚಿತ್ರದಲ್ಲಿ ಕೋಲ ಕಟ್ಟುವ ಜನಾಂಗದ ಪಾತ್ರ ನಿರ್ವಹಿಸಿದ್ದಾರೆ. ಫಾತಿಮಾ ಪಾತ್ರದಲ್ಲಿ ಸೀತಾ ಕೋಟೆ, ವೈದ್ಯನ ಪಾತ್ರದಲ್ಲಿ ದಯಾನಂದ್ ಕತ್ತಲ್ ಸರ್ ಅವರು ಅಭಿನಯಿಸಿದ್ದಾರೆ. ಇವರೆಲ್ಲರ ಅಭಿನಯ ತುಳು ಚಿತ್ರರಂಗಕ್ಕೆ ಮತ್ತಷ್ಟು ಭರವಸೆ ಮೂಡಿಸಿದೆ.
ಚಿತ್ರಕ್ಕೆ ಜೋಗಿ ಸಂಭಾಷಣೆ ಬರೆದಿದ್ದು ಅದಕ್ಕೆ ಚಂದ್ರನಾಥ್ ಬಜಗೋಳಿ ತುಳು ಸಂಭಾಷಣೆಯನ್ನು ಬರೆದಿದ್ದಾರೆ. ವಿ.ಮನೋಹರ್ ಸಂಗೀತವನ್ನು ನೀಡಿದ್ದಾರೆ. ಸುಧೀರ್ ಶಾನ್ ಬೋಗ್ ಅವರ ಕ್ರಿಯಾತ್ಮಕ ನಿರ್ದೇಶನ ಚಿತ್ರದಲ್ಲಿ ಎದ್ದು ಕಾಣುತ್ತದೆ. ಸಂದೀಪ್ ಕುಮಾರ್ ನಂದಳಿಕೆ ನಿರ್ಮಾಣದಲ್ಲಿ ಶರತ್ ಕುಮಾರ್ ಮತ್ತು ವಿಶಾಲ್ ಕುಮಾರ್ ಸಹ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದೆ.
ವಿಶೇಷ ಅಂದ್ರೆ, 'ಮದಿಪು' ಚಿತ್ರ ಇತ್ತಿಚೆಗಷ್ಟೇ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೂಡ ಪ್ರದರ್ಶನವಾಗಿತ್ತು.