Don't Miss!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳುನಾಡಿಗೆ ರಾಷ್ಟ್ರ ಪ್ರಶಸ್ತಿ ತಂದಿಟ್ಟ 'ಮದಿಪು'
2016 ನೇ ಸಾಲಿನ ಪ್ರತಿಷ್ಟಿತ 64ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಚೇತನ್ ಮುಂಡಾಡಿ ನಿರ್ದೇಶನದ 'ಮದಿಪು' ಅತ್ಯುತ್ತಮ ತುಳು ಚಿತ್ರ (ಪ್ರಾದೇಶಿಕ) ಪ್ರಶಸ್ತಿ ಪಡೆದುಕೊಂಡಿದೆ.
ಕರಾವಳಿ ಜನತೆಯ ಬದುಕು, ಅಲ್ಲಿನ ಆಚಾರ-ವಿಚಾರ, ಧರ್ಮ, ಭೂತಾರಾಧನೆಯ ಸುತ್ತ ಮದಿಪು ಚಿತ್ರದ ಕತೆ ಹೆಣೆಯಲಾಗಿದೆ. ತುಳುನಾಡಿನ ಕಲಾತ್ಮಕ ಚಿತ್ರಕ್ಕೆ ಚೇತನ್ ಮುಂಡಾಡಿ ಆಕ್ಷನ್ ಕಟ್ ಹೇಳಿದ್ದು ಇದು ಇವರ ಚೊಚ್ಚಲ ಸಿನಿಮಾ.
ಎಂ.ಕೆ.ಮಠ, ಸರ್ದಾರ್ ಸತ್ಯ ಹಾಗೂ ಸುಜಾತಾ ಶೆಟ್ಟಿ ಪೇರಾಜೆ ಚಿತ್ರದಲ್ಲಿ ಕೋಲ ಕಟ್ಟುವ ಜನಾಂಗದ ಪಾತ್ರ ನಿರ್ವಹಿಸಿದ್ದಾರೆ. ಫಾತಿಮಾ ಪಾತ್ರದಲ್ಲಿ ಸೀತಾ ಕೋಟೆ, ವೈದ್ಯನ ಪಾತ್ರದಲ್ಲಿ ದಯಾನಂದ್ ಕತ್ತಲ್ ಸರ್ ಅವರು ಅಭಿನಯಿಸಿದ್ದಾರೆ. ಇವರೆಲ್ಲರ ಅಭಿನಯ ತುಳು ಚಿತ್ರರಂಗಕ್ಕೆ ಮತ್ತಷ್ಟು ಭರವಸೆ ಮೂಡಿಸಿದೆ.
ಚಿತ್ರಕ್ಕೆ ಜೋಗಿ ಸಂಭಾಷಣೆ ಬರೆದಿದ್ದು ಅದಕ್ಕೆ ಚಂದ್ರನಾಥ್ ಬಜಗೋಳಿ ತುಳು ಸಂಭಾಷಣೆಯನ್ನು ಬರೆದಿದ್ದಾರೆ. ವಿ.ಮನೋಹರ್ ಸಂಗೀತವನ್ನು ನೀಡಿದ್ದಾರೆ. ಸುಧೀರ್ ಶಾನ್ ಬೋಗ್ ಅವರ ಕ್ರಿಯಾತ್ಮಕ ನಿರ್ದೇಶನ ಚಿತ್ರದಲ್ಲಿ ಎದ್ದು ಕಾಣುತ್ತದೆ. ಸಂದೀಪ್ ಕುಮಾರ್ ನಂದಳಿಕೆ ನಿರ್ಮಾಣದಲ್ಲಿ ಶರತ್ ಕುಮಾರ್ ಮತ್ತು ವಿಶಾಲ್ ಕುಮಾರ್ ಸಹ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದೆ.
ವಿಶೇಷ ಅಂದ್ರೆ, 'ಮದಿಪು' ಚಿತ್ರ ಇತ್ತಿಚೆಗಷ್ಟೇ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೂಡ ಪ್ರದರ್ಶನವಾಗಿತ್ತು.