ಮಾರ್ಚ್ 19 ರಂದು ತುಳು ಸಿನಿಮಾ 'ವಿಕ್ರಾಂತ್' ಧ್ವನಿ ಸುರುಳಿ ಬಿಡುಗಡೆ
ರಾಧಾ ನಿಸರ್ಗ ಕಂಬೈನ್ಸ್ ಲಾಂಛನದಲ್ಲಿ ನವೀನ್ ಮಾರ್ಲ ಕೊಡಂಗೆ ನಿರ್ದೇಶನದ 'ವಿಕ್ರಾಂತ್' ತುಳು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಎಪ್ರಿಲ್ 23ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ವಿಕ್ರಾಂತ್ ಸಿನಿಮಾಕ್ಕೆ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಬಂಟ್ವಾಳ ಪರಿಸರ, ಕಳಸ, ಹೊರನಾಡು, ಉಪ್ಪಿನಂಗಡಿ, ಬಿ.ಸಿ ರೋಡ್ ಮೊದಲಾದ ಕಡೆಗಳಲ್ಲಿ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ. ಈ ಸಿನಿಮಾದಲ್ಲಿ ಬಹುತೇಕ ಯಕ್ಷಗಾನ ಕಲಾವಿದರು ಬಣ್ಣ ಹಚ್ಚಿದ್ದು ವಿಶೇಷ.
ಖ್ಯಾತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರು ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಯಕ್ಷಗಾನ ಕಲಾವಿದರಾದ ರಾಧಾಕೃಷ್ಣ ನಾವಡ ಮಧೂರು, ಬಂಟ್ವಾಳ ಜಯರಾಮ ಆಚಾರ್ಯ, ಕಡಬ ದಿನೇಶ್ ರೈ, ಕೋಡ ಪದವು ದಿನೇಶ್ ಶೆಟ್ಟಿಗಾರ್, ಪೂರ್ಣಿಮಾ ಯತೀಶ್ ರೈ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಇನ್ನುಳಿದಂತೆ ರಂಗ ಭೂಮಿಯ ಖ್ಯಾತ ಕಲಾವಿದರಾದ ಅರವಿಂದ ಬೋಳಾರ್, ರಮೇಶ್ ರೈ ಕುಕ್ಕುವಳ್ಳಿ ಎಚ್.ಕೆ ನಯನಾಡು, ಕೊಡಮಣ್ಣ್ ಕಾಂತಪ್ಪ ಶೆಟ್ಟಿ. ಅಶೋಕ್ ಭಟ್ ಕಾಪು ಕಲ್ಯ, ಸುನೀಲ್ ಕೆ. ಆರ್, ಸಂದೀಪ್ ಶೆಟ್ಟಿ ರಾಯಿ, ರಾಕೇಶ್ ಶೆಟ್ಟಿ, ಬಿಸಿ ರೋಡ್, ಸುನೀತಾ ಎಕ್ಕೂರ್, ಪವಿತ್ರ ಹೆಗ್ಡೆ, ಶೃತಿ ಭಟ್ ಇದ್ದಾರೆ. ನಾಯಕ ನಟನಾಗಿ ವಿನೋದ್ ಶೆಟ್ಟಿ ಮತ್ತು ನಾಯಕಿಯಾಗಿ ಶೀತಲ್ ನಾಯಕ್ ಅಭಿನಯಿಸಿದ್ದಾರೆ.
ಛಾಯಾಗ್ರಹಣ - ರವಿ ಸುವರ್ಣ
ಸಾಹಿತ್ಯ - ಎಚ್.ಕೆ ನಯನಾಡು
ನೃತ್ಯ ನಿರ್ದೇಶನ - ವಿನೋದ್ ರಾಜ್ ಬಂಟ್ವಾಳ, ಅನಿಲ್ ನಾಯಕ್,
ಸಂಕಲನ - ಮಹಾಬಲೇಶ್ವರ ಹೊಳ್ಳ
ಕಲೆ - ದಿನೇಶ್ ಸುವರ್ಣ ರಾಯಿ
ಯುನಿಟ್ - ಜಿ.ಆರ್.ಕೆ ಸುರತ್ಕಲ್
ಸಂಗೀತ, ಸಾಹಿತ್ಯ - ಭಾಸ್ಕರ್ ರಾವ್ ಬಿಸಿ ರೋಡ್
ಧ್ವನಿ ಮುದ್ರಣ - ವೈಭವೀ ಆಡಿಯೋ ಸ್ಟುಡಿಯೋ ಬಿ.ಸಿ ರೋಡ್
ಅನುರಾಧ ಭಟ್, ಭಾಸ್ಕರ್ ರಾವ್ ಹಾಗೂ ಯಕ್ಷಗಾನ ಭಾಗವತ ಗಿರೀಶ್ ರೈ ರವಿ ಕಕ್ಕೆಪದವು ಹಾಡಿದ್ದಾರೆ. ಕಥೆ ಸಂಭಾಷಣೆ ನಿರ್ದೇಶನ ನವೀನ್ ಮಾರ್ಲ ಕೊಡಂಗೆ. ರಾಜೇಂದ್ರ ಯಶು ಬೆದ್ರೋಡಿ ಸಿನಿಮಾದ ನಿರ್ಮಾಪಕರಾಗಿದ್ದಾರೆ.

ತನ್ನ ಸಂಸಾರದ ಬಗ್ಗೆ ಚಿಂತಿಸದೆ, ಸಮಾಜ ಸೇವೆಗೆ ತನ್ನ ಸರ್ವಸ್ವವನ್ನು ಮುಡಿಪಾಗಿಸುವ ಯುವಕನ ಜೀವನದಲ್ಲಿ ನಡೆಯುವ ಘಟನೆಗಳನ್ನು ಬಿಂಬಿಸುವ ಕತೆಯನ್ನು 'ವಿಕ್ರಾಂತ್' ಸಿನಿಮಾ ಹೊಂದಿದೆ.

ಅಂದ್ಹಾಗೆ, ವಿಕ್ರಾಂತ್ ತುಳು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ಮಾರ್ಚ್ 19 ರಂದು ಶುಕ್ರವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಧ್ವನಿ ಬಿಡುಗಡೆಯ ಸಮಾರಂಭದಲ್ಲಿ ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕಲ್ಲಡ್ಕ ಪ್ರಭಾಕರ ಭಟ್, ಶಾಸಕ ಸಂಜೀವ ಮಠಂದೂರು, ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ರವಿ ಕಕ್ಕೆಪದವು, ಮೊದಲಾದವರು ಭಾಗವಹಿಸಲಿದ್ದಾರೆ.


Click it and Unblock the Notifications











