Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳು ಸಿನಿಮಾ 'ಎನ್ನ' ಕರಾವಳಿಯಾದ್ಯಂತ ಬಿಡುಗಡೆ
ಗ್ಲೋರಿಯಸ್ ಆಂಜೆಲೋರ್ ಪ್ರೋಡಕ್ಷನ್ ಲಾಂಛನದಲ್ಲಿ ಕ್ಯಾನೆಟ್ ಮಾತಾಯಸ್ ಪಿಲಾರ್ ನಿರ್ಮಾಣದ 'ಎನ್ನ' ತುಳು ಚಿತ್ರ ಇಂದು ಕರಾವಳಿಯಾದ್ಯಂತ ಬಿಡುಗಡೆಯಾಗಿದೆ.
ಸಿನಿಮಾ ರಿಲೀಸ್ ಪ್ರಯುಕ್ತ ಮಂಗಳೂರಿನ ನಗರದ ಜ್ಯೋತಿ ಚಿತ್ರ ಮಂದಿರದಲ್ಲಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಸಿನಿಮಾವನ್ನು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತುಳುವಿನಲ್ಲಿ ತೆರೆಕಾಣುತ್ತಿರುವ 114ನೇ ಸಿನಿಮಾ 'ಎನ್ನ' ಪ್ರೇಮಕತೆಯನ್ನೊಳಗೊಂಡಿದೆ. 173 ಕಲಾವಿದರು 'ಎನ್ನ' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಇದರಲ್ಲಿ ಅನೇಕ ಮಂದಿ ಹೊಸಬರಿಗೆ ಇಲ್ಲಿ ಅವಕಾಶ ನೀಡಲಾಗಿದೆ ಎನ್ನುವುದು ವಿಶೇಷ. ಕೋಡಿಕಲ್ ವಿಶ್ವನಾಥ ಈ ಚಿತ್ರ ನಿರ್ದೇಶಿಸಿದ್ದಾರೆ.
ಮೇನಕೆಯಂತೆ ಮನಸೆಳೆವ ಪೋಷಕ ನಟಿ ಮೋನಿಕಾ
ಸಮಾರಂಭದಲ್ಲಿ ತುಳು ಚಲನ ಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ನಿರ್ಮಾಪಕರಾದ ಕ್ಯಾನೆಟ್ ಮಾತಾಯಸ್ ಪಿಲಾರ್, ಮ್ಯಾಕ್ಸಿಮ್ ಡಿ' ಸೋಜಾ, ನಿಶಾ ಪಿರೇರಾ, ಎನ್.ಜೆ ವಿನೀತ್ ಕುಮಾರ್, ಶ್ರುತಿ ಪೂಜಾರಿ ಮ್ಯಾಕ್ಸಿಮ್ ಪಿರೇರಾ, ರಾಜೇಶ್ ಕುಡ್ಲ, ಪ್ರಶಾಂತ್ ಸಿ.ಕೆ ಅಶ್ಮಿತ್ ರಾಜ್, ವೈಶಾಲಿ ಎಸ್ ಉಡುಪಿ, ಲೋಯ್ ವೆಲೆಂಟಿನ್, ಚೇತನ್ ಪಿಲಾರ್ ಮೊದಲಾದವರು ಉಪಸ್ಥಿತರಿದ್ದರು.
ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು
'ಎನ್ನ' ಸಿನಿಮಾ ಮಂಗಳೂರಿನಲ್ಲಿ ಜ್ಯೋತಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲೀಸ್ ಉಡುಪಿಯಲ್ಲಿ ಅಲಂಕಾರ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಮೂಡುಬಿದ್ರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್ , ಕಾಸರಗೋಡಿನಲ್ಲಿ ಕೃಪಾ ಚಿತ್ರಾಮಂದಿರ ಪ್ರದರ್ಶನ ಕಾಣುತ್ತಿದೆ.