Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರೇಕಿಂಗ್ ನ್ಯೂಸ್; 'ಕರ್ವ' ಚಿತ್ರದಲ್ಲಿ 'ಹೀಗೂ ಉಂಟೇ.!'
ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಹುಟ್ಟುಹಾಕಿರುವ 'ಕರ್ವ' ಚಿತ್ರದ ಬಗ್ಗೆ ನಿಮ್ಮ 'ಫಿಲ್ಮಿಬೀಟ್ ಕನ್ನಡ' ಒಂದು ಎಕ್ಸ್ ಕ್ಲೂಸಿವ್ ಸುದ್ದಿಯನ್ನ ನಿಮಗಾಗಿ ಹೊತ್ತು ತಂದಿದೆ.
ಕರ್ನಾಟಕದ ಜನಪ್ರಿಯ ಸುದ್ದಿ ವಾಹಿನಿ 'ಟಿವಿ9' ನಲ್ಲಿ ಪ್ರಸಾರವಾಗುವ 'ಹೀಗೂ ಉಂಟೇ.!' ಕಾರ್ಯಕ್ರಮವನ್ನ ನೀವೆಲ್ಲಾ ನೋಡಿದ್ದೀರಾ ತಾನೇ..?
ಭೂತ, ಪ್ರೇತ, ನಂಬಿಕೆ, ಅಪನಂಬಿಕೆ, ದೇವರು, ಅಗೋಚರ ಶಕ್ತಿಗಳ ಸುತ್ತ ಹುಟ್ಟಿಕೊಳ್ಳುವ ವಿಶಿಷ್ಟ ಬಗೆಯ ಘಟನೆಗಳನ್ನು ತಿಳಿಸುವ ಕಾರ್ಯಕ್ರಮ 'ಹೀಗೂ ಉಂಟೇ.!'. ತರ್ಕಕ್ಕೆ ನಿಲುಕದ, ವೈಜ್ಞಾನಿಕ ತಳಹದಿಯಲ್ಲಿ ಉತ್ತರ ಕಂಡುಕೊಳ್ಳದ ವಿಸ್ಮಯಕಾರಿ ಘಟನೆಗಳನ್ನು ಕಾರ್ಯಕ್ರಮದ ನಿರ್ಮಾಪಕ ವೈ.ಎ.ನಾರಾಯಣಸ್ವಾಮಿ ಪ್ರತಿ ವಾರ ನಿಮ್ಮ ಮುಂದೆ ತರುತ್ತಾರೆ.
ಈಗ 'ಹೀಗೂ ಉಂಟೇ.!' ಕಾರ್ಯಕ್ರಮದ ಬಗ್ಗೆ ನಾವು ಇಷ್ಟೆಲ್ಲಾ ಪೀಠಿಕೆ ಹಾಕುತ್ತಿರುವುದಕ್ಕೂ ಒಂದು ಕಾರಣ ಇದೆ. ಅದೇನಪ್ಪಾ ಅಂದ್ರೆ, 'ಕರ್ವ' ಚಿತ್ರದ ಕಥೆಗೂ 'ಹೀಗೂ ಉಂಟೇ.!' ಕಾರ್ಯಕ್ರಮಕ್ಕೂ ಲಿಂಕ್ ಇದೇ. ಆ ಲಿಂಕ್ ಏನು ಅನ್ನೋದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದ್ರೆ, 'ಕರ್ವ' ಚಿತ್ರದಲ್ಲಿ 'ಹೀಗೂ ಉಂಟೇ.!' ಕಾರ್ಯಕ್ರಮ ನಡೆಯಲಿದೆ. [ಮೀಟರ್ ಇರುವವರಿಗೆ ಮತ್ತೊಂದು ಕೊಡುಗೆ 'ಕರ್ವ'.!]
'ಕರ್ವ' ಚಿತ್ರದಲ್ಲಿ 'ಹೀಗೂ ಉಂಟೇ.!' ಕಾರ್ಯಕ್ರಮದ ನಿರ್ಮಾಪಕ ವೈ.ಎ.ನಾರಾಯಣಸ್ವಾಮಿ ಕೂಡ ಅಭಿನಯಿಸಿದ್ದಾರೆ. ಅದರ ಎಕ್ಸ್ ಕ್ಯೂಸಿವ್ ಫೋಟೋ ನಿಮ್ಮ 'ಫಿಲ್ಮಿಬೀಟ್ ಕನ್ನಡ'ಗೆ ಲಭ್ಯವಾಗಿದೆ.
'6-5=2' ಚಿತ್ರದ ನಂತರ ನಿರ್ಮಾಪಕ ಕೃಷ್ಣಚೈತನ್ಯ ನಿರ್ಮಿಸುತ್ತಿರುವ ಚಿತ್ರ 'ಕರ್ವ'. ದೇವರಾಜ್, ತಿಲಕ್, ರೋಹಿತ್ ಮುಖ್ಯ ಭೂಮಿಕೆಯಲ್ಲಿರುವ 'ಕರ್ವ' ಚಿತ್ರಕ್ಕೆ ನವ ಪ್ರತಿಭೆ ನವನೀತ್ ಆಕ್ಷನ್ ಕಟ್ ಹೇಳಿದ್ದಾರೆ. ['ಕರ್ವ' ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಗೆ ಏನು ಕೆಲಸ?]