Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ವಿಷಯದ ಬಗ್ಗೆ ಎರಡು ಚಿತ್ರ: ಒಂದು ಕಡೆ ಶಿವಣ್ಣ, ಮತ್ತೊಂದ್ಕಡೆ ಸುದೀಪ್
ಒಂದೇ ವಿಷಯಗಳ ಬಗ್ಗೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ಸಿನಿಮಾಗಳು ಮಾಡಿರುವುದು ಹೊಸ ಸಂಪ್ರದಾಯವೇನಲ್ಲ. ಇದಕ್ಕೂ ಮುಂಚೆ ಒಂದೇ ವಿಷಯದ ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿರುವ ಸಾಕಷ್ಟು ಉದಾಹರಣೆಗಳಿವೆ.
ಈಗ ಕನ್ನಡದಲ್ಲಿ ಇಂತಹದ್ದೇ ಮತ್ತೊಂದು ಸನ್ನಿವೇಶ ಮರುಕಳಿಸುತ್ತಿದೆ. ಒಂದೇ ವಿಷಯದ ಬಗ್ಗೆ ಇಬ್ಬರು ದೊಡ್ಡ ನಟರು ಸಿನಿಮಾ ಮಾಡಲು ಹೊರಟಿದ್ದಾರೆ. ಈ ಬಗ್ಗೆ ಚಿತ್ರಗಳ ಸಹ ಘೋಷಣೆ ಮಾಡಿದ್ದಾರೆ. ಒಂದು ಕಡೆ ಕಿಚ್ಚ ಸುದೀಪ್ ಮತ್ತೊಂದೆಡೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಂದೇ ಕಥಾವಸ್ತವನ್ನಾಗಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಅಷ್ಟಕ್ಕೂ, ಯಾವುದು ಆ ಚಿತ್ರಗಳು? ಮುಂದೆ ಓದಿ....
ಅಶ್ವತ್ಥಾಮ ಕುರಿತು ಎರಡು ಸಿನಿಮಾ
ಮಹಾಭಾರತದಲ್ಲಿ ಬರುವ ಅಶ್ವತ್ಥಾಮನ ಪಾತ್ರ ಆಧರಿಸಿ ಕನ್ನಡದಲ್ಲಿ ಎರಡು ಸಿನಿಮಾ ಘೋಷಣೆಯಾಗಿದೆ. ಇದು ಪೌರಾಣಿಕ ಚಿತ್ರವಲ್ಲದಿದ್ದರೂ ಅಶ್ವತ್ಥಾಮನ ಪಾತ್ರದ ಮೇಲೆ ಸಿನಿಮಾ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿದಿದೆ. ಸದ್ಯಕ್ಕೆ ಈ ಎರಡು ಚಿತ್ರಗಳಲ್ಲಿ ಅಶ್ವತ್ಥಾಮ ಎನ್ನುವುದು ಪ್ರಮುಖವಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಿಲ್ಲ.
ಫ್ಯಾಂಟಮ್ ಬಳಿಕ ಕಿಚ್ಚನ ಜೊತೆ ಅನೂಪ್ ಭಂಡಾರಿ ಮತ್ತೊಂದು ಚಿತ್ರ
ಸುದೀಪ್-ಅನೂಪ್ ಭಂಡಾರಿ
'ಫ್ಯಾಂಟಮ್' ಸಿನಿಮಾದ ಬಳಿಕ ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಇನ್ನೊಂದು ಸಿನಿಮಾ ಮಾಡಲಿದ್ದಾರೆ. ಆ ಚಿತ್ರಕ್ಕೆ ಅಶ್ವತ್ಥಾಮ ಎಂದು ಹೆಸರಿಡಲಾಗಿದ್ದು, ಕಿಚ್ಚ ಕ್ರಿಯೇಷನ್ಸ್ ಅಡಿ ಸುದೀಪ್ ನಿರ್ಮಾಣ ಮಾಡಲಿದ್ದಾರೆ. ಸದ್ಯಕ್ಕೆ ಹೀರೋ ಅಂತಿಮವಾಗಿಲ್ಲ. ಆದ್ರೆ, ಪೂರ್ವ ತಯಾರಿ ನಡೆದಿದೆ.
ಶಿವಣ್ಣ-ಸಚಿನ್ ಸಿನಿಮಾ
ರಕ್ಷಿತ್ ಶೆಟ್ಟಿ ನಟನೆ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ನಿರ್ದೇಶಿಸಿದ್ದ ಸಚಿನ್ ರವಿ ಹ್ಯಾಟ್ಯಿಕ್ ಹೀರೋಗೆ ಆಕ್ಷನ್ ಕಟ್ ಹೇಳುತ್ತಿದ್ದು, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾನೂ ಅಶ್ವತ್ಥಾಮ ಪಾತ್ರದ ಕುರಿತು ತಯಾರಾಗಲಿದೆ ಎಂದು ತಿಳಿಸಿದ್ದಾರೆ.
'ಅವನೇ ಶ್ರೀಮನ್ನಾರಾಯಣ' ನಿರ್ದೇಶಕನ ಜೊತೆ ಶಿವಣ್ಣನ ಹೊಸ ಸಿನಿಮಾ
ಮದಕರಿ ನಾಯಕ ಘಟನೆ
ರಾಕ್ಲೈನ್ ವೆಂಕಟಶ್ ಮದಕರಿ ನಾಯಕ ಸಿನಿಮಾ ಘೋಷಣೆ ಮಾಡಿದರು. ಮತ್ತೊಂದೆಡೆ ಸುದೀಪ್ ಸಹ ಮದಕರಿ ನಾಯಕನ ಕುರಿತು ಸಿನಿಮಾ ಮಾಡಬೇಕೆಂಬ ತಯಾರಿ ನಡೆಸಿದ್ದರು. ದರ್ಶನ್ ಮತ್ತು ಸುದೀಪ್ ಇಬ್ಬರಲ್ಲಿ ಮದಕರಿ ನಾಯಕನ ಬಗ್ಗೆ ಯಾರು ಸಿನಿಮಾ ಮಾಡಲಿದ್ದಾರೆ ಎಂಬ ಚರ್ಚೆ ನಡೆಯಿತು. ಅಂತಿಮವಾಗಿ ಸುದೀಪ್ ಈ ಪ್ರಾಜೆಕ್ಟ್ನಿಂದ ಹಿಂದೆ ಸರಿದರು.