ರಸ್ತೆ ಅಪಘಾತದಲ್ಲಿ ಇಬ್ಬರು ಕಿರುತೆರೆ ನಟಿಯರು ದುರ್ಮರಣ
ಚಿತ್ರೀಕರಣಕ್ಕಾಗಿ ಹೋಗುತ್ತಿದ್ದ ವೇಳೆ ಕಾರು ಅಪಘಾತವಾಗಿದ್ದು, ಇಬ್ಬರು ಕಿರುತೆರೆ ನಟಿಯರು ದುರ್ಮರಣ ಹೊಂದಿದ್ದಾರೆ. ತೆಲುಗು ಧಾರಾವಾಹಿ ಮುತ್ಯಾಲ ಮೊಗ್ಗು ಧಾರಾವಾಹಿಯಲ್ಲಿ ಈ ಇಬ್ಬರು ನಟಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅನಂತಗಿರಿಯ ಅರಣ್ಯ ಪ್ರದೇಶದಲ್ಲಿ ಮುತ್ಯಾಲ ಮೊಗ್ಗು ಧಾರಾವಾಹಿ ಚಿತ್ರೀಕರಣ ನಡೆಯುತ್ತಿತ್ತು. ಅದಕ್ಕಾಗಿ ಯೂನಿಟ್ ಕೂಡ ಶೂಟಿಂಗ್ ಸ್ಥಳಕ್ಕೆ ಹೋಗಿತ್ತು. ಹೈದ್ರಾಬಾದ್ ನಿಂದ ಅನಂತಗಿರಿಗೆ ಹೋಗುತ್ತಿದ್ದ ಮಾರ್ಗದಲ್ಲಿ ಎದುರಿನಲ್ಲಿ ಬರುತ್ತಿದ್ದ ಲಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕಾರು ಅಪಘಾತಕ್ಕೆ ಒಳಗಾಗಿದೆ. ಸ್ಥಳದಲ್ಲೇ ಇಬ್ಬರು ನಟಿಯರು ಸಾವನ್ನಪ್ಪಿದ್ದಾರೆ.
ಮತ್ತಿಬ್ಬರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ನಟಿಯರು ಅನುಷಾ ರೆಡ್ಡಿ ಮತ್ತು ಭಾರ್ಗವಿ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಒಟ್ಟು ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಡ್ರೈವರ್ ಚಕ್ರಿ ಮತ್ತು ವಿನಯ್ ಕುಮಾರ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಯನಾಬಾದ್ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


Click it and Unblock the Notifications











