Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕ್ಕಣ್ಣನನ್ನು 'ಹೀರೋ' ಮಾಡ್ತಿದ್ದಾರೆ 'ರಾಬರ್ಟ್' ನಿರ್ಮಾಪಕ
ಹಾಸ್ಯ ನಟರು ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗೆ ಇಳಿಯುವುದು ಆಗಾಗ ನಡೆಯುತ್ತಿರುತ್ತದೆ. ಇದೀಗ ನಟ ಚಿಕ್ಕಣ್ಣ ಕೂಡ ಹೀರೋ ಆಗುತ್ತಿದ್ದಾರೆ.
ಚಿಕ್ಕಣ್ಣ ಹೀರೋ ಆಗುತ್ತಾರೆ ಎನ್ನುವ ಸುದ್ದಿ ಪದೇ ಪದೇ ಕೇಳಿಬರುತ್ತಿತ್ತು. ಇದೀಗ ಆ ಸಮಯ ನಿಜಕ್ಕೂ ಬಂದಿದೆ. ಇತ್ತೀಚಿಗಷ್ಟೆ ನಿರ್ದೇಶಕ ಮಂಜು ಮಾಂಡವ್ಯ ಈ ಬಗ್ಗೆ ಮಾತನಾಡಿ, ಚಿಕ್ಕಣ್ಣನ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ತಿಳಿಸಿದ್ದರು.
ಚಿಕ್ಕಣ್ಣ ಹೀರೋ ಆಗುವುದು ಪಕ್ಕಾ: ಗುಟ್ಟು ಬಿಚ್ಚಿಟ್ಟ ನಿರ್ದೇಶಕ
ಈ ಸಿನಿಮಾವನ್ನು ಉಮಾಪತಿ ನಿರ್ಮಾಣ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇದೆ. ಸದ್ಯ 'ರಾಬರ್ಟ್' ಸಿನಿಮಾಗೆ ಹಣ ಹಾಕಿರುವ ಉಮಾಪತಿ ಆ ನಂತರ ಈ ಸಿನಿಮಾ ಮಾಡುತ್ತಿದ್ದಾರೆ. ಈ ಹಿಂದೆ 'ಹೆಬ್ಬುಲಿ' ಹಾಗೂ 'ಒಂದಲ್ಲ ಎರಡಲ್ಲ' ಚಿತ್ರಗಳು ಉಮಾಪತಿ ಫಿಲ್ಮ್ ಬ್ಯಾನರ್ ನಿಂದ ಬಂದಿವೆ.
ಮಂಜು ಮಾಂಡವ್ಯ ನಿರ್ದೇಶನದ ಸಿನಿಮಾಗಳಲ್ಲಿ ಚಿಕ್ಕಣ್ಣ ಕಾಮಿಡಿ ತುಂಬ ಚೆನ್ನಾಗಿ ಇರುತ್ತಿತ್ತು. ಚಿಕ್ಕಣ್ಣನ ಕಾಮಿಡಿ ಟೈಮಿಂಗ್ ಅನ್ನು ಮಂಜು ಮಾಂಡವ್ಯ ತುಂಬ ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಅಲ್ಲದೆ, ಮಂಜು ಮಾಂಡವ್ಯ ನಾಯಕನಾಗಿ ನಟಿಸಿದ 'ಶ್ರೀ ಭರತ ಬಾಹುಬಲಿ' ಚಿತ್ರದಲ್ಲಿಯೂ ಚಿಕ್ಕಣ್ಣ ಇದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಕಿದ ಸವಾಲು ಸ್ವೀಕರಿಸಿದ ನಟ ಚಿಕ್ಕಣ್ಣ
ಹೀಗಾಗಿ, ಈ ಕಾಂಬಿನೇಶನ್ ಮತ್ತೆ ಮುಂದುವರೆಯುತ್ತಿದೆ. ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ನಟಿಸುತ್ತಿರುವ ಸಿನಿಮಾಗೆ ಮಂಜು ಮಾಂಡವ್ಯ ನಿರ್ದೇಶನ ಹಾಗೂ ಉಮಾಪತಿ ನಿರ್ಮಾಣ ಮಾಡುತ್ತಿದ್ದಾರೆ.