Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕ್ಕಣ್ಣನನ್ನು 'ಹೀರೋ' ಮಾಡ್ತಿದ್ದಾರೆ 'ರಾಬರ್ಟ್' ನಿರ್ಮಾಪಕ
ಹಾಸ್ಯ ನಟರು ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗೆ ಇಳಿಯುವುದು ಆಗಾಗ ನಡೆಯುತ್ತಿರುತ್ತದೆ. ಇದೀಗ ನಟ ಚಿಕ್ಕಣ್ಣ ಕೂಡ ಹೀರೋ ಆಗುತ್ತಿದ್ದಾರೆ.
ಚಿಕ್ಕಣ್ಣ ಹೀರೋ ಆಗುತ್ತಾರೆ ಎನ್ನುವ ಸುದ್ದಿ ಪದೇ ಪದೇ ಕೇಳಿಬರುತ್ತಿತ್ತು. ಇದೀಗ ಆ ಸಮಯ ನಿಜಕ್ಕೂ ಬಂದಿದೆ. ಇತ್ತೀಚಿಗಷ್ಟೆ ನಿರ್ದೇಶಕ ಮಂಜು ಮಾಂಡವ್ಯ ಈ ಬಗ್ಗೆ ಮಾತನಾಡಿ, ಚಿಕ್ಕಣ್ಣನ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ತಿಳಿಸಿದ್ದರು.
ಚಿಕ್ಕಣ್ಣ ಹೀರೋ ಆಗುವುದು ಪಕ್ಕಾ: ಗುಟ್ಟು ಬಿಚ್ಚಿಟ್ಟ ನಿರ್ದೇಶಕ
ಈ ಸಿನಿಮಾವನ್ನು ಉಮಾಪತಿ ನಿರ್ಮಾಣ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇದೆ. ಸದ್ಯ 'ರಾಬರ್ಟ್' ಸಿನಿಮಾಗೆ ಹಣ ಹಾಕಿರುವ ಉಮಾಪತಿ ಆ ನಂತರ ಈ ಸಿನಿಮಾ ಮಾಡುತ್ತಿದ್ದಾರೆ. ಈ ಹಿಂದೆ 'ಹೆಬ್ಬುಲಿ' ಹಾಗೂ 'ಒಂದಲ್ಲ ಎರಡಲ್ಲ' ಚಿತ್ರಗಳು ಉಮಾಪತಿ ಫಿಲ್ಮ್ ಬ್ಯಾನರ್ ನಿಂದ ಬಂದಿವೆ.
ಮಂಜು ಮಾಂಡವ್ಯ ನಿರ್ದೇಶನದ ಸಿನಿಮಾಗಳಲ್ಲಿ ಚಿಕ್ಕಣ್ಣ ಕಾಮಿಡಿ ತುಂಬ ಚೆನ್ನಾಗಿ ಇರುತ್ತಿತ್ತು. ಚಿಕ್ಕಣ್ಣನ ಕಾಮಿಡಿ ಟೈಮಿಂಗ್ ಅನ್ನು ಮಂಜು ಮಾಂಡವ್ಯ ತುಂಬ ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಅಲ್ಲದೆ, ಮಂಜು ಮಾಂಡವ್ಯ ನಾಯಕನಾಗಿ ನಟಿಸಿದ 'ಶ್ರೀ ಭರತ ಬಾಹುಬಲಿ' ಚಿತ್ರದಲ್ಲಿಯೂ ಚಿಕ್ಕಣ್ಣ ಇದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಕಿದ ಸವಾಲು ಸ್ವೀಕರಿಸಿದ ನಟ ಚಿಕ್ಕಣ್ಣ
ಹೀಗಾಗಿ, ಈ ಕಾಂಬಿನೇಶನ್ ಮತ್ತೆ ಮುಂದುವರೆಯುತ್ತಿದೆ. ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ನಟಿಸುತ್ತಿರುವ ಸಿನಿಮಾಗೆ ಮಂಜು ಮಾಂಡವ್ಯ ನಿರ್ದೇಶನ ಹಾಗೂ ಉಮಾಪತಿ ನಿರ್ಮಾಣ ಮಾಡುತ್ತಿದ್ದಾರೆ.