Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ - ತರುಣ್ ಸುಧೀರ್ ಸಿನಿಮಾಗೆ ನಿರ್ಮಾಪಕರು ಸಿಕ್ಕರು
Recommended Video
ಕಿಚ್ಚ ಸುದೀಪ್ ಅವರ 'ಹೆಬ್ಬುಲಿ' ಸಿನಿಮಾವನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ಉಮಾಪತಿ ಅದರ ನಂತರ 'ರಾಮಾ ರಾಮಾ ರೇ' ಖ್ಯಾತಿಯ ಡಿ.ಸತ್ಯ ಪ್ರಕಾಶ್ ಅವರ ಹೊಸ ಸಿನಿಮಾಗೆ ಬಂಡವಾಳ ಹಾಕಲು ಮುಂದಾಗಿದ್ದರು. ಇದರ ಜೊತೆಗೆ ದರ್ಶನ್ ಅವರ ಒಂದು ಸಿನಿಮಾವನ್ನು ಸಹ ನಿರ್ಮಾಪಕ ಉಮಾಪತಿ ಪ್ರೊಡ್ಯೂಸ್ ಮಾಡುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಈಗ ಅದು ಪಕ್ಕಾ ಆಗಿದೆ.
'ಕರಿಯ' ಸಿನಿಮಾದ ನಂತರ ದರ್ಶನ್ ಅವರಿಗೆ ಮತ್ತೊಮ್ಮೆ ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಾರೆ ಎನ್ನುವ ಮಾತಿತ್ತು. ಅದೇ ಚಿತ್ರವನ್ನು ಉಮಾಪತಿ ನಿರ್ಮಾಣ ಮಾಡಬೇಕಿತ್ತು. ಈ ಸಿನಿಮಾಗೆ 'ಆಂಜನೇಯ' ಎಂಬ ಹೆಸರು ಇಟ್ಟಿದ್ದಾರೆ ಎಂಬ ಗಾಸಿಪ್ ಇತ್ತು. ಆದರೆ ಈಗ ಪ್ಲಾನ್ ಬದಲಾಗಿದೆ. ಉಮಾಪತಿ ಈಗ ಜೋಗಿ ಪ್ರೇಮ್ ಬದಲು ನಿರ್ದೇಶಕ ತರುಣ್ ಸುಧೀರ್ ಅವರ ಸಿನಿಮಾಗೆ ಬಂಡವಾಳ ಹಾಕಲಿದ್ದಾರೆ.
'ಚೌಕ' ಸಿನಿಮಾದ ದೊಡ್ಡ ಯಶಸ್ಸಿನ ನಂತರ ತರುಣ್ ಸುಧೀರ್, ದರ್ಶನ್ ಜೊತೆಗೆ ಸಿನಿಮಾ ಮಾಡಲಿದ್ದಾರೆ. 'ಚೌಕ' ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿದ್ದ ದರ್ಶನ್ ಅವರಿಗೆ ಮತ್ತೆ ತರುಣ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ದರ್ಶನ್ ಅವರ 53ನೇ ಸಿನಿಮಾವಾಗಿದೆ. ದರ್ಶನ್ ಅವರ ಈ ಸಿನಿಮಾ ಸದ್ಯದಲ್ಲಿಯೇ ಸೆಟ್ಟೆರಲಿದೆ. ಉಳಿದಂತೆ, ಸದ್ಯ 'ಕುರುಕ್ಷೇತ್ರ' ಸಿನಿಮಾದ ಡಬ್ಬಿಂಗ್ ನಲ್ಲಿ ದರ್ಶನ್ ಬಿಜಿ ಇದ್ದಾರೆ. ಅದರ ಜೊತೆ ಜೊತೆಗೆ 'ಯಜಮಾನ' ಸಿನಿಮಾದ ಚಿತ್ರೀಕರಣ ಬೇರೆ ನಡೆಯುತ್ತಿದೆ. ನಿರ್ಮಾಪಕ ಸಂದೇಶ್ ನಾಗರಾಜ್ ಬ್ಯಾನರ್ ನಲ್ಲಿ ಕೂಡ ದರ್ಶನ್ ಒಂದು ಸಿನಿಮಾ ಮಾಡುತ್ತಾರೆ.
ದರ್ಶನ್ ಹೊಸ ಚಿತ್ರದ ಸತ್ಯ ಬಿಚ್ಚಿಟ್ಟ ತರುಣ್ ಸುಧೀರ್